ಪಕ್ಷದಲ್ಲಿ ಭಿನ್ನಮತ ಇರುವುದಾಗಿ ಒಪ್ಪಿಕೊಂಡ ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ, ಡಿಸೆಂಬರ್ 04 : ಬಿಜೆಪಿ ಪಕ್ಷದಲ್ಲಿ ಭಿನ್ನಮತ ಇರುವುದನ್ನು ಅದೇ ಪಕ್ಷದ ಹಿರಿಯ ಮುಖಂಡ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಒಪ್ಪಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಪರಿವರ್ತನಾ ಯಾತ್ರೆ ಸಮಯ ಉಂಟಾಗುತ್ತಿರುವ ಭಿನ್ನಮತ, ಜಗಳಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷ ಬೆಳೆಯುತ್ತಿರುವುದರಿಂದ ಅಶಿಸ್ತು, ಗೊಂದಲಗಳು ಉಂಟಾಗಿವೆ ಅದನ್ನೆಲ್ಲಾ ಮೀರಿ ಮುಂದೆ ಹೋಗುತ್ತೇವೆ ಎಂದಿದ್ದಾರೆ.
ಹೋದಲ್ಲೆಲ್ಲಾ ಪರಿವರ್ತನಾ ಯಾತ್ರೆ ವೇಳೆ ಚಿಕ್ಕ ಪುಟ್ಟ ಗಲಾಟೆಗಳಾಗ್ತಿರೋದು ಪಕ್ಷ ಅಧಿಕಾರಕ್ಕೆ ಬರುವುದರ ಮುನ್ಸೂಚನೆ ಎಂದ ಈಶ್ವರಪ್ಪ, ಕಲಹಗಳನ್ನು ಶುಭಸೂಚಕ ಎಂದರು. ಯಡಿಯೂರಪ್ಪ ಅವರನ್ನು ಈ ಬಾರಿ ಮುಖ್ಯಮಂತ್ರಿ ಮಾಡಿಯೇ ತೀರುವುದಾಗಿ ಅವರು ಮತ್ತೊಮ್ಮೆ ಹೇಳಿದರು.

ಸಂಸದ ಪ್ರತಾಪ್ ಸಿಂಹ ಅವರ ವಿವಾದದ ಬಗ್ಗೆಯೂ ಮಾತನಾಡಿದ ಅವರು ಸಂಸದ ಪ್ರತಾಪ ಸಿಂಹ ಬಂಧನ ಸರ್ಕಾರವು ಹಿಂದೂಗಳಿಗೊಂದು, ಮುಸ್ಲಿಂರಿಗೊಂದು ನೀತಿ ಅನುಸರಿಸುತ್ತಿರುವ ದ್ಯೋತಕ. ಮುಸ್ಲಿಮರ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಾರೆ, ಹಿಂದೂಗಳ ಹನುಮ ಮತ್ತು ದತ್ತ ಜಯಂತಿಗೆ ಅಡ್ಡಿ ಮಾಡುತ್ತಿದ್ದಾರೆ. ಇದರಿಂದಲೇ ಈ ಸಮಸ್ಯೆ ಉಂಟಾಗಿದೆ. ಹುಣಸೂರಿನ ಕಾಯ೯ಕ್ರಮಕ್ಕೆ ಅನುಮತಿ ನೀಡಿದ್ದರೆ ತಪ್ಪೇನಿತ್ತು, ಸಿಎಂ ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.
ವೀರಶೈವ- ಲಿಂಗಾಯತರನ್ನ ಬೇಪ೯ಡಿಸಿರುವ ಸಿದ್ದರಾಮಯ್ಯ ನಾಡಿನ ಹಿಂದುಗಳ ಕ್ಷಮೆ ಕೇಳಲಿ ಎಂದ ಅವರು ಜಿ.ಪಂ.ಸದಸ್ಯ ಯೋಗಿಶ ಗೌಡ ಕೊಲೆ ಪ್ರಕರಣದ ತನಿಖೆಯ ಬಗ್ಗೆ ಅನುಮಾನವಿದೆ. ಕೊಲೆಗಡುಗರನ್ನ ಸಿಎಂ ರಕ್ಷಣೆ ಮಾಡುತ್ತಿರೋದ್ಯಾಕೆ? ಎಂದು ಪ್ರಶ್ನಿಸಿದರು. ಗೌರಿ ಲಂಕೇಶ ಹತ್ಯೆ ಮಾಡಿದವರ ಬಗ್ಗೆ ಸುಳಿವು ಇದ್ದರೂ ಗೃಹ ಸಚಿವರು ಪ್ರಕಟಿಸುತ್ತಿಲ್ಲ ಇದೆಲ್ಲಾ ಕಾಂಗ್ರೆಸ್ನ ಅಪರಾಧ ಬೆಂಬಲದ ಮನೋಭಾವ ತೋರಿಸುತ್ತದೆ ಎಂದರು.
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications