ಪರಿಹಾರ ಬೇಕಿಲ್ಲ, ರಕ್ಷಣೆ ಕೊಡಿ: ಸಿದ್ದರಾಮಯ್ಯ ಕೊಟ್ಟ 2 ಲಕ್ಷ ವಾಪಸ್ ಎಸೆದ ಮಹಿಳೆ
ಬಾಗಲಕೋಟೆ, ಜುಲೈ 15: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆರೂರು ಗಲಭೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಸಂಬಂಧಿಕರಿಗೆ ನೀಡಿದ್ದ ಹಣವನ್ನು ಮಹಿಳೆಯೊಬ್ಬರು ವಾಪಸ್ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಬಾದಾಮಿಯಲ್ಲಿ ನಡೆದಿದೆ.
ಶುಕ್ರವಾರ ಸಿದ್ದರಾಮಯ್ಯ ಬಾಗಲಕೋಟೆ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಕೆರೂರು ಗುಂಪು ಘರ್ಷಣೆಯಲ್ಲಿ ಗಾಯಗೊಂಡಿದ್ದವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಗಾಯಾಳುಗಳಿಗೆ ನೀಡಿದ್ದ ಪರಿಹಾರದ ಹಣವನ್ನು ಮಹಿಳೆಯೊಬ್ಬರು ಸಿದ್ದರಾಮಯ್ಯಗೆ ವಾಪಸ್ ನೀಡಲು ಮುಂದಾದರು. ಸಿದ್ದರಾಮಯ್ಯ ಹಣವನ್ನು ಹಿಂದಕ್ಕೆ ತೆಗೆದುಕೊಳ್ಳಲು ನಿರಾಕರಿಸಿ ಕಾರಿನಲ್ಲಿ ಹೋಗುತ್ತಿದ್ದಂತೆ, ಆ ಮಹಿಳೆ 2 ಲಕ್ಷ ರೂಪಾಯಿಗಳ ನೋಟಿನ ಕಂತೆಯನ್ನು ಪೊಲೀಸ್ ಬೆಂಗಾವಲು ವಾಹನಕ್ಕೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ನಮಗೆ ರಕ್ಷಣೆ ಭೇಕು
ಚುನಾವಣೆಯಲ್ಲಿ ಮಾತ್ರ ಇವರು ನಮ್ಮ ಬಳಿ ಬರುತ್ತಾರೆ, ಆದರೆ, ನಮಗೆ ಸಮಸ್ಯೆಗಳು ಎದುರಾದಾಗ ಮಾತ್ರ ಬರುವುದಿಲ್ಲ. ಹಿಂದೂ-ಮುಸ್ಲಿಂ ಎಂದು ಬೇಧ -ಭಾವ ಮಾಡದೇ ಎಲ್ಲರನ್ನೂ ಸಮಾನವಾಗಿ ಕಾಣಲಿ, ನಾವೇನು ತಪ್ಪು ಮಾಡದಿದ್ದರೂ ನಮ್ಮ ಮೇಲೆ ಹಲ್ಲೆ ಮಾಡಲಾಗಿದೆ. ಘಟೆನ ನಡೆದು ಇಷ್ಟು ದಿನಗಳಾದರೂ ನಮ್ಮ ಯಾರನ್ನು ಮಾತನಾಡಿಸಲಿಲ್ಲ. ಸಚಿವರು ಬಂದರೂ ಕೆಲವರನ್ನೂ ಮಾತ್ರ ಮಾತನಾಡಿಸಿ ಹೋಗಿದ್ದಾರೆ. ಇಂದು ಇವರು ಪರಿಹಾರ ಎಂದು ನಮಗೆ ಹಣಕೊಡ್ತಾರೆ, ಆದರೆ ನಮ್ಮವರು ಒಂದು ವರ್ಷ ನರಳಾಡಬೇಕು. ಯಾರು ನಮ್ಮ ಸಮಸ್ಯೆ ಕೇಳುತ್ತಾರೆ? ಎಂದು ಮಹಿಳೆ ಕಣ್ಣೀರು ಹಾಕಿದರು.

ಹಣ ಬೇಡ, ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲಿ
ನಮಗೆ ಇಂದು ಅವರು ನೀಡುವ ಹಣ ನಮಗೆ ಮಖ್ಯವಲ್ಲ, ಭಿಕ್ಷೆ ಭೇಡಿಯಾದರೂ ಕುಟುಂಬ ಸಾಕುತ್ತೇವೆ. ನಮಗೆ ಇಂತಹ ಘಟನೆಗಳು ಮುಂದೆ ಆಗದಂತೆ ನೋಡಿ ಕೊಳ್ಳುವವರು ಬೇಕು. ನಮಗೆ ಈ ದುಡ್ಡಿನ ಅವಶ್ಯಕತೆಯಿಲ್ಲ, ಹಿಂದೂ ಕುಟುಂಬಕ್ಕಾಗಲಿ ಅಥವಾ ಮುಸ್ಲಿಂ ಕುಟುಂಬಕ್ಕಾಗಲಿ ಇಂತಹ ಘಟನೆಗಳು ಆಗಬಾರದು. ನಮ್ಮ ತಪ್ಪಿದ್ರೆ ತಲೆ ಕಡಿಯಲಿ, ತಪ್ಪಾಗಿದೆ ಎಂದು ಎಫ್ಐಆರ್ ಆದರೆ ಕುಟುಂಬವೇ ಪೊಲೀಸರಿಗೆ ಶರಣಾಗುತ್ತೇವೆ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications