ಬ್ರಿಟಿಷರ ನಿದ್ದೆಗೆಡಿಸಿದ್ದ ಹಲಗಲಿ ಬೇಡರ ಬಗ್ಗೆ ನಿಮಗೆಷ್ಟು ಗೊತ್ತು?
ಬಾಗಲಕೋಟೆ, ಆಗಸ್ಟ್, 08: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಅಥವಾ ಸಿಪಾಯಿ ದಂಗೆಯ ಬಳಿಕ ಭಾರತೀಯ ವೀರರ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಳ್ಳುವ ಹುನ್ನಾರದಿಂದ ಬ್ರಿಟಿಷರು ನಿಶಸ್ತ್ರೀಕರಣ ಕಾಯ್ದೆ ಜಾರಿಗೆ ತಂದಿದ್ದರು. ಆದರೆ ಈ ಕಾಯ್ದೆಯನ್ನು ವಿರೋಧಿಸಿದ್ದ ಆ ಒಂದು ಪುಟ್ಟ ಗ್ರಾಮ, ಬ್ರಿಟಿಷ್ ಕಂಪನಿ ಸರ್ಕಾರದ ನಿದ್ದೆಗೆಡಿಸಿತ್ತು. ಸ್ವಾತಂತ್ರ್ಯ, ಸ್ವಾಭಿಮಾನಕ್ಕಾಗಿ ಕಂಪನಿ ಸರ್ಕಾರದ ವಿರುದ್ಧ ಹಲಗಲಿ ಗ್ರಾಮದ ವೀರ ಕಲಿಗಳು ಸೆಡ್ಡು ಹೊಡೆದು ನಿಂತಿದ್ದರು.
ಹಲಗಲಿ ಗ್ರಾಮದ ವೀರಕಲಿಗಳು ಝಳುಪಿಸುತ್ತಿದ್ದ ಕತ್ತಿಯ ಹೊಳಪಿಗೆ ಬ್ರಿಟಿಷರು ನಡುಗಿ ಹೋಗಿದ್ದರು. ನೇರವಾಗಿ ಇವರನ್ನು ಮಣಿಸಲಾಗದೇ ಕುತಂತ್ರದಿಂದ ಊರಿಗೆ ಬೆಂಕಿ ಹಚ್ಚಿ ಮಕ್ಕಳು, ಮರಿ ಎನ್ನದೇ ಹಲವು ವೀರರನ್ನು ಸುಟ್ಟು ಹಾಕಿದರು. ಮತ್ತೆ ಕೆಲವರನ್ನು ಗಲ್ಲಿಗೇರಿಸಿದರು. ಅಂದು ಆ ವೀರರು ಹಚ್ಚಿದ್ದ ಸ್ವಾತಂತ್ರ್ಯ ಕಿಡಿ ಪ್ರಜ್ವಲಿಸಿದ್ದು, ಇತಿಹಾಸವಾಗಿ ಉಳಿದಿದೆ.
ಹೀಗೆ ಜೋಡಿ ಪ್ರತಿಮೆಗಳಲ್ಲಿ ಇರುವವರ ಹೆಸರು ಜಡಗಣ್ಣ, ಬಾಲಣ್ಣ. ಇವರು ಶೂರರು, ವೀರರಾಗಿದ್ದರು. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚು ಹೊತ್ತಿದ್ದ ವೇಳೆ ಕರ್ನಾಟಕದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಹಲಗಲಿ ಗ್ರಾಮದ ಬೇಡರು ನಡೆಸಿರುವ ಹೋರಾಟ ಕಂಪನಿ ಸರ್ಕಾರಕ್ಕೆ ಸವಾಲು ಆಗಿತ್ತು.

ಹಲಗಲಿಯಲ್ಲಿ ಬ್ರಿಟೀಷರ ಕುತಂತ್ರ
ಬ್ರಿಟಿಷರು ಜಾರಿಗೆ ತಂದಿದ್ದ ನಿಶಸ್ತ್ರೀಕರಣದ ವಿರುದ್ಧ ಸೆಡ್ಡು ಹೊಡೆದು ನಿಂತಿದ್ದ ಹಲಗಲಿ ಬೇಡರು ಆಂಗ್ಲರ ವಿರುದ್ಧ ನೇರ ಯುದ್ಧಕ್ಕೆ ಇಳಿದಿದ್ದರು. ಹುಟ್ಟು ವೀರರಾಗಿದ್ದ ಹಲಗಲಿ ಬೇಡರನ್ನು ಸೋಲಿಸುವುದು ಬ್ರಿಟಿಷರಿಗೆ ಸುಲಭವಾಗಿರಲಿಲ್ಲ. ಮಾಡಿದ ತಂತ್ರ, ಕುತಂತ್ರಗಳು ವಿಫಲ ಆಗುತ್ತಲೇ ಬಂದಿದ್ದವು. ಹೀಗಾಗಿ ಮಧ್ಯರಾತ್ರಿ ಭಾರೀ ಸೈನಿಕರ ಜೊತೆಗೆ ನುಗ್ಗಿದ್ದ ಹೇಡಿ ಬ್ರಿಟಿಷರು ಊರಿಗೆ ಬೆಂಕಿ ಹಚ್ಚಿದ್ದರು. ಇದರಲ್ಲಿ ಅನೇಕರು ಪ್ರಾಣ ಕಳೆದುಕೊಂಡರು. ಬ್ರಿಟಿಷರ ವಿರುದ್ಧ ಕತ್ತಿ ಝಳಪಿಸಿದ್ದ ಹಲಗಲಿಯ ಜಡಗಾ, ಬಾಲ ಸೇರಿದಂತೆ ಅನೇಕರನ್ನು ಗಲ್ಲಿಗೇರಿಸಿದ್ದರು.

ದೇಶಕ್ಕಾಗಿ ಪ್ರಾಣ ತೆತ್ತ ವೀರಕಲಿಗಳು
ಸ್ವಾತಂತ್ರ್ಯ ಹಾಗೂ ಸ್ವಾಭಿಮಾನಕ್ಕಾಗಿ ಹೋರಾಡಿದ ಈ ವೀರರ ಸಾಹಸಗಾಥೆ ಇವತ್ತಿಗೂ ಅಚ್ಚಳಿಯದೇ ಉಳಿದಿದೆ. ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣವನ್ನು ಕಳೆದುಕೊಂಡು ಹುತಾತ್ಮರಾಗಿರುವ ಹಲಗಲಿ ಬೇಡರ ಇತಿಹಾಸ ರೋಚಕವಾಗಿದೆ. ಅದರಲ್ಲಿ ಜಡಗಾ ಮತ್ತು ಬಾಲ ಅವರ ಪ್ರತಿಮೆಗಳು ಇದೀಗ ಹಲಗಲಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಕಂಚಿನ ಪ್ರತಿಮೆಗಳು ನಿರ್ಮಾಣ ಮಾಡಬೇಕು. ಇವರ ಇತಿಹಾಸ, ದೇಶಪ್ರೇಮವನ್ನು ಮುಂದಿನ ಪೀಳಿಗೆಗೂ ತಿಳಿಸಿಕೊಡುವ ಕಾರ್ಯಗಳು ಇಲ್ಲಿ ಆಗಬೇಕಿದೆ ಎಂದು ಅಲ್ಲಿನ ಸ್ಥಳೀಯರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಬ್ರಿಟಿಷರ ನಿದ್ದೆಗೆಡಿಸಿದ್ದ ವೀರಕಲಿಗಳು
ಬ್ರಿಟಿಷರ ವಿರುದ್ಧ ತೊಡೆತಟ್ಟಿ ನಿಂತಿದ್ದ ಹಲಗಲಿ ಬೇಡರ ಪೈಕಿ ಕಂಪನಿ ಸರ್ಕಾರಕ್ಕೆ ಒಬ್ಬಿಬ್ಬರ ಮೇಲೆ ದ್ವೇಷ ಇರಲಿಲ್ಲ. ಇಡೀ ಗ್ರಾಮವನ್ನು ಸರ್ವನಾಶ ಮಾಡುವ ನಿರ್ಧಾರವನ್ನು ಮಾಡಿದರು. ಎರಡು ಬಾರಿ ತಮಗೆ ಆಗಿದ್ದ ಸೋಲು, ಅವಮಾನದ ಸೇಡಿನಲ್ಲಿ ಬೆಂದಿದ್ದ ಬ್ರಿಟಿಷರು, ಸೇನೆಯೊಂದಿಗೆ ನುಗ್ಗಿ ಗ್ರಾಮವನ್ನು ಲೂಟಿ ಮಾಡುತ್ತಾರೆ. ಸಿಕ್ಕ ಸಿಕ್ಕವರನ್ನು ಕೊಲೆ ಮಾಡುತ್ತಾರೆ. ಕೊನೆಗೆ ಇಡೀ ಊರಿಗೆ ಬೆಂಕಿ ಹಚ್ಚಿ ಸುಟ್ಟು ಬೂದಿ ಮಾಡಿ, ಕುರುವು ಸಿಗದಂತೆ ಮಾಡಿದರು.

ಹೋರಾಟಗಾರರ ಕಂಚಿನ ಪ್ರತಿಮೆಗೆ ಪಟ್ಟು
ಈ ವೇಳೆ ಬ್ರಿಟಿಷರ ನಿದ್ದೆಗೆಡಿಸಿದ್ದ ಜಡಗಾ, ಬಾಲ ಸೇರಿ ನಾಲ್ವರನ್ನು ಮುಧೋಳ ನಗರದ ಸಾರ್ವಜನಿಕವಾಗಿ ಗಲ್ಲಿಗೇರಿಸಿದರು. ಆ ಮೂಲಕ ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಇಳಿದಯಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಕೆಲಸವನ್ನು ಕಂಪನಿ ಸರ್ಕಾರ ಮಾಡಿತ್ತು. ಹೀಗೆ ದೇಶದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿ, ಸ್ವಾಭಿಮಾನಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎನ್ನುವ ಸಂದೇಶ ಸಾರಿ, ಕೊನೆಗೆ ಗೆಲ್ಲಿಗೇರಿದರು. ಆ ವೀರರ ಕಂಚಿನ ಪ್ರತಿಮೆಗಳನ್ನು ಸ್ಥಾಪಿಸಬೇಕು ಎನ್ನುವುದು ಅಲ್ಲಿನ ಜನರ ಆಗ್ರಹವಾಗಿದೆ.
ಬ್ರಿಟಿಷರ ಕಪಿಮುಷ್ಠಿಯಿಂದ ಬಿಡಿಸಿ ಈ ದೇಶವನ್ನು ಸ್ವಾತಂತ್ರ್ಯಗೊಳಿಸಲು ಹಲಗಲಿ ಬೇಡರಂತೆ ಲಕ್ಷಾಂತರ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರೆಲ್ಲರ ತ್ಯಾಗ, ಬಲಿದಾನದಿಂದಾಗಿ ದೇಶ ಸ್ವಾತಂತ್ರ್ಯಗೊಂಡಿದೆ. ಅಂತಹ ಮಹನಿಯರ ಬಗ್ಗೆ ಇಂದಿನ ಯುವಪೀಳಿಗೆಗೆ ಹೆಚ್ಚೆಚ್ಚು ತಿಳಿಸಿಕೊಡುವ ಕೆಲಸ ಆಗಬೇಕು. ಆ ನಿಟ್ಟಿನಲ್ಲಿ ದೇಶಕ್ಕಾಗಿ ಪ್ರಾಣವನ್ನು ಬಲಿಕೊಟ್ಟಿರುವ ವೀರರು, ಹುತಾತ್ಮರನ್ನು ನೆನಪಿಸುವ ನಿಟ್ಟಿನಲ್ಲಿ ಅವರು ಬಾಳಿ, ಬದುಕಿದ ಪ್ರದೇಶಗಳು, ಜಾಗಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕಿದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications