ಅಪರಾಧ ಪತ್ತೆಗೆ ಬಾಗಲಕೋಟೆ ಪೊಲೀಸರ ಜೊತೆ ಸೇರಿದ 'ಕ್ರಿಶ್'
ಬಾಗಲಕೋಟೆ, ಜನವರಿ 19: ಅಪರಾಧ ಚಟುವಟಿಕೆಗಳನ್ನು ಪತ್ತೆ ಹಚ್ಚಲು ಬಾಗಲಕೋಟೆ ಪೊಲೀಸರಿಗೆ 'ಕ್ರಿಶ್' ಸಹಾಯ ಮಾಡಲಿದ್ದಾನೆ. ಜಿಲ್ಲಾ ಪೊಲೀಸ್ ಘಟಕಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸದಸ್ಯನನ್ನು ಪೊಲೀಸರು ಆತ್ಮೀಯವಾಗಿ ಬರಮಾಡಿಕೊಂಡರು.
ಕರ್ನಾಟಕ ಸರ್ಕಾರ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮುಧೋಳ ತಳಿ ನಾಯಿಗಳ ಬಳಕೆಗೆ ಅವಕಾಶ ನೀಡಿದೆ. ಜನವರಿ 19ರಂದು 'ಕ್ರಿಶ್' ಹೆಸರಿನ 1.5 ತಿಂಗಳ ಮುಧೋಲ್ ಹೌಂಡ್ ನಾಯಿ ಮರಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರಿದೆ.
ಮುಧೋಳ ತಾಲೂಕಿನ ತಿಮ್ಮಾಪುರದ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಮಹೇಶ್ 'ಕ್ರಿಶ್' ಹೆಸರಿನ ನಾಯಿಮರಿಯನ್ನು ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಅವರಿಗೆ ಹಸ್ತಾಂತರ ಮಾಡಿದರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ಶ್ವಾನದಳದ ಸದಸ್ಯನಾಗಿ 'ಕ್ರಿಶ್' ಸೇರ್ಪಡೆಗೊಂಡಿದ್ದಾನೆ. ತರಬೇತಿಯ ನಂತರ ಅಪರಾಧ ಪತ್ತೆಗಾಗಿ ಸ್ನಿಫರ್ ಆಗಿ ಕಾರ್ಯನಿರ್ವಹಣೆ ಮಾಡಲಿದ್ದಾನೆ.
"ಕ್ರಿಶ್ಗೆ ಮೂರು ತಿಂಗಳು ತುಂಬುತ್ತಿದ್ದಂತೆ ಮೈಸೂರಿನ ಶ್ವಾನ ತರಬೇತಿ ಕೇಂದ್ರಕ್ಕೆ ಕಳಿಸಲಾಗುತ್ತದೆ. ಅಲ್ಲಿ ಒಂದು ವರ್ಷ ತರಬೇತಿ ಪಡೆದ ಬಳಿಕ ಬಾಗಲಕೋಟೆಗೆ ಮರಳಿದ್ದಾನೆ" ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಿಲ್ಲಾ ಶ್ವಾನದಳದಲ್ಲಿ ಮುಧೋಳ ನಾಯಿಗಳ ಕಾರ್ಯವೈಖರಿಯನ್ನು ಗಮನಿಸಿ ಎಸ್ಪಿ ಗೃಹ ಇಲಾಖೆಗೆ ವರದಿ ಸಲ್ಲಿಸಲಿದ್ದಾರೆ. ನಂತರ ಇಲಾಖೆ ಉಳಿದ ಜಿಲ್ಲೆಗಳಲ್ಲೂ ಮುಧೋಳ ನಾಯಿಗಳ ಬಳಕೆಗೆ ಅವಕಾಶ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಿದೆ.
'ಹಿರೋ' ನಿವೃತ್ತಿ: ಬಾಗಲಕೋಟೆ ಜಿಲ್ಲಾ ಶ್ವಾನದಳದಲ್ಲಿ ಮೂರು ಲ್ಯಾಬ್ರಡಾರ್, ಎರಡು ಡಾಬರ್ ಮನ್ ಮತ್ತು ಒಂದು ಜರ್ಮನ್ ಶಫರ್ಡ್ ನಾಯಿಗಳಿವೆ. 'ಹಿರೋ' ಹೆಸರಿನ ಲ್ಯಾಬ್ರಡಾರ್ ನಾಯಿ ಕಳೆದ ತಿಂಗಳು ನಿವೃತ್ತಿ ಹೊಂದಿದೆ. ಆ ಜಾಗಕ್ಕೆ 'ಕ್ರಿಶ್' ಸೇರ್ಪಡೆಯಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications