Samyukta Patil: ಹೊರಗಷ್ಟೇ ಅಲ್ಲ ಮನೆಯೊಳಗೂ ಬಂಡಾಯ ಎದುರಿಸಬೇಕಿದೆ ಸಂಯುಕ್ತಾ ಪಾಟೀಲ್!
ಬಾಗಲಕೋಟೆ, ಏಪ್ರಿಲ್.06: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆಯಾದಾಗಿನಿಂದ ಪಕ್ಷಗಳಲ್ಲಿ ಬಂಡಾಯದ ಬಿಸಿ ಕಾಣಿಸುತ್ತಲೇ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಅಸಮಾಧಾನ ಹೊಗೆಯಾಡುತ್ತಿರುವುದು ಕಣ್ಣಿಗೆ ಕಾಣಿಸುತ್ತಿದೆ. ಪರೋಕ್ಷ ಮತ್ತು ಪ್ರತ್ಯಕ್ಷವಾಗಿಯೇ ಹಲವು ನಾಯಕರು ಬಂಡಾಯವೆದ್ದಿದ್ದಾರೆ.
ಇದೇ ರೀತಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ಗೆ ಬಂಡಾಯದ ಬಿಸಿ ತಾಗುತ್ತಲೇ ಇದೆ. ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ಅಭ್ಯರ್ಥಿಯನ್ನು ಬದಲಿಸಬೇಕು ಎನ್ನುವ ಪಟ್ಟಿನಿಂದ ಹಿಂದೆ ಬಂದಿಲ್ಲ. ಕಾಶಪ್ಪನವರ್ ಬಣದ ಬಂಡಾಯದ ಭೀತಿಯ ನಡುವೆಯೇ ತನ್ನದೆ ಕುಟುಂಬದಿಂದ ಮತ್ತೊಂದು ಬಂಡಾಯವನ್ನು ಎದುರಿಸಬೇಕಿದೆ ಸಂಯುಕ್ತಾ ಪಾಟೀಲ್.

ಹೌದು.. ಸಚಿವ ಶಿವಾನಂದ ಪಾಟೀಲ್ ಮಗಳಾದ ಸಂಯುಕ್ತಾ ಪಾಟೀಲ್ ಅವರನ್ನು ಈ ಬಾರಿ ಕಾಂಗ್ರೆಸ್ ಕಣಕ್ಕಿಳಿಸಿದೆ. ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ರಣತಂತ್ರ ಹೆಣೆದಿದ್ದು, ಅವರ ಅಣ್ಣ ಹರ್ಷಗೌಡ ಪಾಟೀಲ್ಗೆ ಬಲೆ ಬೀಸಿದ್ದಾರೆ. ತಂಗಿಯ ವಿರುದ್ಧ ಅಣ್ಣನಿಂದ ಪ್ರಚಾರ ಮಾಡಿಸಲು ಮುಂದಾಗಿದ್ದಾರೆ.
ಬಿಜೆಪಿ ಸೇರಿದ ಹರ್ಷಗೌಡ ಪಾಟೀಲ್
ಸಚಿವ ಶಿವಾನಂದ್ ಪಾಟೀಲ್ ಸಹೋದರರ ಪುತ್ರ ಹರ್ಷಗೌಡ ಪಾಟೀಲ್. ಸಂಯುಕ್ತ ಪಾಟೀಲ್ ಅವರ ದೊಡ್ಡಪ್ಪನ ಮಗ. ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಮೆಚ್ಚಿ ರಾಷ್ಟ್ರ ಕಟ್ಟುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ. ಬಿಜೆಪಿ ಸೇರುವುದು ಬಹಳ ವರ್ಷದ ಕನಸಾಗಿತ್ತು ಎಂದು ಹರ್ಷಗೌಡ ಪಾಟೀಲ್ ಹೇಳಿದ್ದಾರೆ.

ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಪರವಾಗಿ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಹರ್ಷಗೌಡ ಪಾಟೀಲ್, ಪಕ್ಷದ ಕಾರ್ಯಕರ್ತನಾಗಿ ಸೇರಿಕೊಂಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುತ್ತೇನೆ ಎಂದಿದ್ದಾರೆ. ಈ ಮೂಲಕ ತಂಗಿಯ ವಿರುದ್ಧ ಪ್ರಚಾರ ಮಾಡಲು ಸಿದ್ಧರಾಗಿದ್ದಾರೆ.
ಕಡಿಮೆಯಾಗಿಲ್ಲ ವೀಣಾ ಕಾಶಪ್ಪನವರ್ ಅಸಮಾಧಾನ!
ಹುನುಗುಂದ ಕಾಂಗ್ರೆಸ್ ಶಾಸಕ ವಿಜಯನಾಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಈ ಬಾರಿ ಟಿಕೆಟ್ಗಾಗಿ ಬೇಡಿಕೆಯಿಟ್ಟಿದ್ದರು. ಆದರೆ, ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಾಧ್ಯಮದವರ ಮುಂದೆಯೇ ಕಣ್ಣೀರು ಹಾಕಿದ್ದ ಅವರು ಪಕ್ಷದ ಮೇಲೆ ಅಸಮಾಧಾನಗೊಂಡಿದ್ದಾರೆ. ಯಾವಾಗ ಬೇಕಾದರೂ ಸಿಡಿದೇಳುವಂತೆ ಕಾಣುತ್ತಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸಂಧಾನಕ್ಕೆ ಒಪ್ಪಿಕೊಂಡು, ಮುಂದಿನ ದಿನಗಳಲ್ಲಿ ವೀಣಾ ಕಾಶಪ್ಪನವರ್ ಚುನಾವಣಾ ಪ್ರಚಾರದಲ್ಲಿ ತಿಡಗಿಸಿಕೊಳ್ಳುತ್ತಾರೆ ಎಂದಿದ್ದರು. ಆದರೆ, ಹೊಸ ಬೆಳವಣಿಯ ಪ್ರಕಾರ ತಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ಸಂದೇಶ ಕಳುಹಿಸಿರುವ ವೀಣಾ ಕಾಶಪ್ಪನವರ್, ಪ್ರಚಾರದಲ್ಲಿ ಭಾಗಿಯಾಗಲ್ಲ ಎಂದು ಸಂದೇಶ ನೀಡಿದ್ದಾರೆ. ಹೀಗಾಗಿ ಸಂಯುಕ್ತಾ ಪಾಟೀಲ್ ಬಿಜೆಪಿ ವಿರುದ್ಧ ಸೆಣೆಸಾಡುವ ಮುನ್ನ ತನ್ನ ಪಕ್ಷದ ಬಂಡಾಯಗಾರರು ಮತ್ತು ಕುಟುಂಬದ ಬಂಡಾಯಗಾರರ ಜೊತೆಗೆ ಹೋರಾಡಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications