Breaking: ಬಾಗಲಕೋಟೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಪಿಡಿಒಗಳು
ಬಾಗಲಕೋಟೆ, ಅಕ್ಟೋಬರ್ 20: ಜಮೀನನ್ನು ಎನ್ಎ ಮಾಡಿಕೊಡಲು ಒಂದು ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಪಿಡಿಒಗಳನ್ನು ಬಾಲಕೋಟೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ
ಗುರುವಾರ ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮ ಪಂಚಾಯಿತಿಯ ಪಿಡಿಓ ಚಂದ್ರಕಾಂತ್ ತಿಮ್ಮಾಪುರ ಹಾಗೂ ರಾಂಪುರ ಪಿಡಿಓ ಮುದಕಪ್ಪ ತೇಜಿ ಎಂಬುವರ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಎನ್ಎ ಪ್ಲಾಟ್ ಎಂಟ್ರಿ ಮಾಡಿಕೊಡಲು ಹೊನ್ನಾಕಟ್ಟೆಯ ವಾಸು ಜಾಧವ್ ಎಂಬುವವರಿಂದ 2,50,000 ಲಕ್ಷರೂಗಳ ಲಂಚದ ಬೇಡಿಕೆ ಇಟ್ಟಿದ್ದ ಪಿಡಿಒಗಳು ಮೊದಲ ಕಂತಿನಲ್ಲಿ ಒಂದು ಲಕ್ಷ ರೂಗಳನ್ನು ಹಾಗೂ ಉಳಿದ 1,50,000 ಲಕ್ಷ ರೂಗಳನ್ನು ಕೆಲಸದ ನಂತರ ಕೊಡಬೇಕೆಂದು ಬೇಡಿಕೆ ಇಟ್ಟಿರುತ್ತಾರೆ.

ಗುರುವಾರ ಮಧ್ಯಾಹ್ನ 1:30ರ ವೇಳೆ ಅಪಾಧಿತ ಬೇವಿನಮಟ್ಟಿ ಪಿಡಿಒ ಚಂದ್ರಕಾಂತ್ ಕೃಷ್ಣಪ್ಪ ತಿಮ್ಮಾಪುರ ಪಿಡಬ್ಲ್ಯೂಡಿ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಆವರಣದಲ್ಲಿ ದೂರುದಾರ ವ್ಯಕ್ತಿಯಿಂದ ಒಂದು ಲಕ್ಷ ರೂ ಲಂಚದ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸಾಕ್ಷಿ ಸಮೇತ ದಸ್ತಗಿರಿ ಮಾಡಿದ್ದಾರೆ.
ನ್ಯಾಯಮೂರ್ತಿ ಬಿಎಸ್ ಪಾಟೀಲ್ ಸೂಚನೆಯಂತೆ ಪೊಲೀಸ್ ಅಧೀಕ್ಷಕರಾದ ಅನಿತಾ ಹದ್ದಣ್ಣವರ್ ಮಾರ್ಗದರ್ಶನದಲ್ಲಿ ಬಾಗಲಕೋಟೆ ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ನೇತೃತ್ವದ ತಂಡ ದಾಳಿ ನಡೆಸಿ ಪಿಡಿಒಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications