ವೀರಶೈವರನ್ನು ಬಿಡಲು ಲಿಂಗಾಯತರಿಗೆ ಮಾತೆ ಮಹಾದೇವಿ ಆಗ್ರಹ
ಬಾಗಲಕೋಟೆ, ಜನವರಿ 13: ವೀರಶೈವ ಮಹಾಸಭಾವನ್ನು ಬಹಿಷ್ಕರಿಸಿ ಹೊರಬರಲು ಲಿಂಗಾಯತರಿಗೆ ಕೂಡಲಸಂಗಮ ಬಸವಧರ್ಮ ಪೀಠದ ಮಾತೆ ಮಹಾದೇವಿ ಕರೆ ನೀಡಿದ್ದಾರೆ.
ಶನಿವಾರ ಮಾತನಾಡಿದ ಅವರು, ಲಿಂಗಾಯತ ಎನ್ನುವ ಜೇನುತುಪ್ಪದ ಬಾಟಲಿಗೆ ವೀರಶೈವ ಎನ್ನುವ ಅವಡಲೆಣ್ಣೆಯ ಚೀಟಿ ಹಚ್ಚಿ ನಮ್ಮ ಸಮಾಜ ನಮ್ಮ ಸಂಸ್ಕೃತಿಯನ್ನ ಕೆಡಿಸಿದ್ದಾರೆ ಎಂದು ಕೂಡಲಸಂಗಮದ ಬಸವಧರ್ಮ ಪೀಠದ ಜಗದ್ಗುರು ಮಾತೆ ಮಹಾದೇವಿ ಹೇಳಿದರು.
ಮಹಾಸಭಾದಲ್ಲಿ ಸದಸ್ಯರಾಗಿರುವ ಬಸವಾಭಿಮಾನಿಗಳು ರಾಜೀನಾಮೆ ಕೊಟ್ಟು ಹೊರಬಂದು ಪ್ರತಿಭಟಿಸಬೇಕು. ವೀರಶೈವ ಮಹಾಸಭಾಕ್ಕೆ ಪರ್ಯಾಯವಾಗಿ, ವಿಶ್ವ ಲಿಂಗಾಯತ ಪರಿಷತ್ತಿನ ಸ್ಥಾಪನೆಯಾಗುತ್ತಿದ್ದು ಅದಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ.ಲಿಂಗಾಯತ ಸಮಾಜ ಎನ್ನುವ ಶುದ್ಧ ನೀರಿನಲ್ಲಿ ಸೇರಿಕೊಂಡಿರುವ ವೀರಶೈವ ಎನ್ನುವ ಕಸ ಸ್ವಚ್ಛಗೊಳಿಸಿ ಶುದ್ಧೀಕರಣ ಮಾಡಬೇಕಿದೆ ಎಂದರು.

ಸರ್ಕಾರ ರಚಿಸಿರುವ ಸಮಿತಿ ಕೇಳಿರುವ ಆರು ತಿಂಗಳ ಸಮಯಾವಧಿ ಹಾಸ್ಯಾಸ್ಪದವಾಗಿದೆ. ಒಂದೇ ತಿಂಗಳಲ್ಲಿ ವರದಿ ಸಲ್ಲಿಬೇಕು. ಯಡಿಯೂರಪ್ಪ ಆಗಲಿ ,ಬಿಜೆಪಿಯಾಗಲಿ ಅಧಿಕಾರಕ್ಕೆ ಬಂದರೆ ಪ್ರತ್ಯೇಕ ಧರ್ಮ ಹೋರಾಟಕ್ಕೆ ಖಂಡಿತಾ ಹಿನ್ನಡೆಯಾಗುತ್ತದೆ. ಹೀಗಾಗಿ ವಿಚಾರವಾದಿಗಳು ಸಿದ್ದರಾಮಯ್ಯ ನವರು ಮನಸ್ಸು ಮಾಡಿ ಸಮಿತಿಗೆ ಆಗ್ರಹಿಸಿ ಒಂದು ತಿಂಗಳಲ್ಲಿ ವರದಿಕೊಡಲು ಒತ್ತಡ ಹೇರಬೇಕು.
ಲಿಂಗೈಕ್ಯ ಹಾನಗಲ್ ಕುಮಾರೇಶ್ವರ ಸ್ವಾಮಿಗಳ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ದುರುದ್ದೇಶದ ಉದ್ದೇಶದಿಂದ ವೀರಶೈವ ಮಹಾಸಭಾ ಸ್ಥಾಪನೆಯಾಗಿದೆ. ಕಳೆದ1904 ರಲ್ಲಿ ಲಿಂಗೈಕ್ಯ ಹಾನಗಲ್ ಕುಮಾರೇಶ್ವರ ಶ್ರೀಗಳು ನಮ್ಮ ಸಮಾಜದ ಸಾಂಸ್ಕೃತಿಕ ಸ್ಥಿತಿಯನ್ನು ಕೆಡಿಸುವ ಉದ್ದೇಶದಿಂದ ವೀರಶೈವ ಮಹಾಸಭೆಯನ್ನು ಮಾಡಿದರು.ಇದು ಬಹಳ ಜನರಿಗೆ ತಿಳಿದಿಲ್ಲ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications