ಭಾರತೀಯ ಸೇನೆ ಸೇರಲು ಸಜ್ಜಾದ ದೇಸಿ ತಳಿ ನಾಯಿ 'ಮುಧೋಳ ಹೌಂಡ್'
ಬೆಂಗಳೂರು, ನವೆಂಬರ್ 02: ಅಪ್ಪಟ ದೇಸಿ ತಳಿ ಬಾಗಲಕೋಟೆಯ 'ಮುಧೋಳ ನಾಯಿ'ಗಳು (ಮುಧೋಳ ಹೌಂಡ್) ಭಾರತೀಯ ಸೇನೆಗೆ ಅಧಿಕೃತವಾಗಿ ಡಿಸೆಂಬರ್ ತಿಂಗಳಿನಲ್ಲಿ ಸೇರ್ಪಡೆಗೊಳ್ಳಲಿದೆ.
ಈ ಮೂಲಕ ಭಾರತೀಯ ಸೇನೆಗೆ ಸೇರಿದ ಮೊದಲ ದೇಶಿ ನಾಯಿಗಳು ಎಂಬ ಕೀರ್ತಿಗೆ ಮುಧೋಳ ಬೇಟೆ ನಾಯಿಗಳು ಪಾತ್ರವಾಗಿವೆ. 2016ರಲ್ಲಿ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಗೆ 6 ನಾಯಿಗಳನ್ನು ಹಸ್ತಾಂತರಮಾಡಲಾಗಿತ್ತು.

ಮೀರತ್ ನಲ್ಲಿ ನಾಯಿಗಳಿಗೆ ತರಬೇತಿ ನೀಡಿದ ಬಳಿಕ ಸೇನೆಯಲ್ಲಿ ಅಧಿಕೃತವಾಗಿ ಬಳಸಿಕೊಳ್ಳಲಾಗುವುದು. ಬಾಂಬ್ ಪತ್ತೆಹಚ್ಚುವಿಕೆ, ಪತ್ತೇದಾರಿ ಚಟುವಟಿಕೆ ಹಾಗೂ ರಕ್ಷಣಾ ಚಟುವಟಿಕೆ ಕುರಿತು ಇವುಗಳಿಗೆ ತರಬೇತಿ ನೀಡಲಾಗುತ್ತದೆ' ಎಂದು ಲೆಫ್ಟಿನೆಂಟ್ ಕರ್ನಲ್ ಎನ್.ಪ್ರಕಾಶ್ ಹೇಳಿದ್ದಾರೆ.
'ಮುಧೋಳ ಶ್ವಾನಗಳನ್ನು ಕ್ಷೇತ್ರ ಮಟ್ಟದಲ್ಲಿ ಪರೀಕ್ಷಿಸಿದ್ದು, ಸೇನೆಯಲ್ಲಿ ಕಾರ್ಯ ನಿರ್ವಹಿಸಲು ಈ ನಾಯಿಗಳು ಅರ್ಹತೆ ಗಳಿಸಿವೆ. ತರಬೇತಿ ಪಡೆದ ಶ್ವಾನಗಳನ್ನು ಅಪರಾಧಿ ಪತ್ತೆ ಹಚ್ಚುವಿಕೆ, ಭಯೋತ್ಪಾದನೆ ಚಟುವಟಿಕೆಗಳ ಮೇಲೆ ನಿಗಾ ಇಡಲು, ವಿವಿಧ ಸೈನಿಕ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ' ಎಂದು ಸೇನೆಯ ಪಶುವೈದ್ಯ ಕರ್ನಲ್ ಸುರಿಂದರ್ ಸೈನಿ ಹೇಳಿದ್ದಾರೆ.
ಇಲ್ಲಿ ತನಕ ಭಾರತೀಯ ಸೇನೆಯಲ್ಲಿ ಜರ್ಮನ್ ಶೆಪರ್ಡ್ಸ್, ಗ್ರೇಟ್ ಸ್ವಿಸ್ ಮೌಂಟೇನ್, ಲಾಬ್ರಡಾರ್ಸ್ ತಳಿಗಳನ್ನು ಮಾತ್ರ ಸೇವೆಗೆ ಬಳಸಲಾಗುತ್ತಿತ್ತು. ಈಗ ಈ ಸಾಲಿಗೆ ದೇಶಿ ತಳಿ ಕರ್ನಾಟಕದ ಮುಧೋಳ್ ಹೌಂಡ್ ಸೇರ್ಪಡೆಗೊಂಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications