ದರ್ಗಾದಲ್ಲಿ ಕೇಸರಿ ಬಟ್ಟೆ ಹಿಡಿದು ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಲಾಲಸಾಬ್ ಅಜ್ಜ!
ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಮೊಹರಂ ಕೂಡ ಒಂದು. ಜುಲೈ 19ರಿಂದಲೇ ಇದರ ಆಚರಣೆ ಪ್ರಾರಂಭವಾಗಿತ್ತು, ಜುಲೈ 29ರಂದು ಮುಕ್ತಾಯವಾಗಿದೆ. ಮೊಹರಂ ವೇಳೆ ದರ್ಗಾದ ಮುಖಂಡರು ನುಡಿದಿರುವ ಭವಿಷ್ಯ ಸದ್ಯ ಭಾರಿ ವೈರಲ್ ಆಗಿದ್ದು, ಕುತೂಹಲ ಮೂಡಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಲಾಲಸಾಬವಲಿ ದರ್ಗಾದಲ್ಲಿ ಲಾಲಸಾಬ್ ಅಜ್ಜ ಮೊಹರಂ ಸಂದರ್ಭದ್ಲಿ ಭವಿಷ್ಯ ನುಡಿಯುತ್ತಾರೆ. ಅದೇ ರೀತಿ ಈ ಬಾರಿ ಕೂಡ ಭವಿಷ್ಯ ನುಡಿದಿದ್ದು, ಅವರ ಭವಿಷ್ಯ ಕೇಳಿದ ಜನ ಆತಂಕಗೊಂಡಿದ್ದಾರೆ. ಅದರಲ್ಲೂ ಈ ಬಾರಿ ಅವರು ಭವಿಷ್ಯ ನುಡಿಯುವಾಗ ಕೇಸರಿ ಬಟ್ಟೆಯನ್ನು ಹಿಡಿದಿದ್ದರು ಎನ್ನುವುದು ವಿಶೇಷ.

ಶನಿವಾರ ಸಂಜೆ ಅವರು ದರ್ಗಾದಲ್ಲಿ ಭವಿಷ್ಯ ನುಡಿದಿದ್ದರೆ, ಅವರ ಭವಿಷ್ಯ ಕೇಳಲು ಇಡೀ ಗ್ರಾಮದ ಜನತೆ ಅಲ್ಲಿ ನೆರೆದಿತ್ತು. ದೇಶದಲ್ಲಿ ಮುಂದೆ ಆಗುವ ಘಟನೆಗಳು ಹಾಗೂ ರಾಜಕೀಯದ ಬಗ್ಗೆ ಲಾಲಸಾಬ್ ಅಜ್ಜ ಭವಿಷ್ಯ ನುಡಿದಿದ್ದಾರೆ.
ಕೋಮು ಸಂಘರ್ಷ ಹೆಚ್ಚಾಗುತ್ತದೆ
ಲಾಲ್ ಸಾಬ್ ಅಜ್ಜ ಕೇಸರಿ ಬಟ್ಟೆ ಹಿಡಿದು ಭವಿಷ್ಯ ಹೇಳಿದ್ದಾರೆ. ಕೇಸರಿ ಬಟ್ಟೆ ಹಿಡಿದು ಇದರ ಸಲುವಾಗಿ ಬಹಳ ಬಡಿದಾಡುತ್ತಾರೆ, ಇದಕ್ಕಾಗಿ ಬಹಳ ಹೆಣಗಳು ಬೀಳುತ್ತವೆ. ಆದರೆ ಬರೆದು ಇಟ್ಟುಕೊಳ್ಳಿ ಖುರ್ಚಿ ಮಾತ್ರ ಗಟ್ಟಿ ಅದ ಪಾ ಎಂದು ಕೇಸರಿ ಬಟ್ಟೆಯನ್ನು ನೆರೆದಿದ್ದ ಜನರಿಗೆ ತೋರಿಸಿದ್ದಾರೆ.
ಲಾಲಸಾಬ್ ಅಜ್ಜ ಹೇಳಿರುವ ಭವಿಷ್ಯದ ಅರ್ಥ, ದೇಶದಲ್ಲಿ ಕೋಮು ಗಲಭೆಗಳು ಹೆಚ್ಚಾಗಲಿದ್ದು, ಇದರಿಂದ ಸಾವು-ನೋವು ಸಂಭವಿಸಲಿವೆ. ಆದರೂ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿರುವುದಾಗಿ ಜನ ವಿಶ್ಲೇಷಣೆ ಮಾಡಿದ್ದಾರೆ.
2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಇದಕ್ಕೂ ಮುಂದೆ ದೇಶದಲ್ಲಿ ಹಲವು ಕೋಮು ಸಂಘರ್ಷಗಳು ನಡೆಬಹುದು ಎಂದು ಭವಿಷ್ಯದ ಅರ್ಥ ಎನ್ನಲಾಗಿದೆ. ವಿಪಕ್ಷಗಳು ಒಟ್ಟಾಗಿ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟ ಸೋಲಿಸಬೇಕು ಎಂದು ಪಣತೊಟ್ಟಿವೆ, ಆದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎನ್ನುವ ಅರ್ಥವದಲ್ಲಿ ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ.
ಚುನಾವಣೆ ಹತ್ತಿರವಾದಂತೆ ಹಲವರು ತಮ್ಮದೇ ಆದ ರೀತಿಯಲ್ಲಿ ಭವಿಷ್ಯಗಳನ್ನು ನುಡಿಯುವುದು ಸಹಜ. ಗೊರವಯ್ಯ ಕಾರ್ಣಿಕ ಸೇರಿದಂತೆ ಹಲವು ಭವಿಷ್ಯಗಳನ್ನು ನಂಬುವ, ಆರಾಧಿಸುವ ಲಕ್ಷಾಂತರ ಜನ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಲಾಲಾಸಾಬ್ ಅಜ್ಜ ಹೇಳಿರುವ ಭವಿಷ್ಯ ನಿಜ ಆಗುತ್ತಾ ಎನ್ನುವುದಕ್ಕೆ ಕಾಲವೇ ಉತ್ತರ ನೀಡಲಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications