ಬಾಗಲಕೋಟೆಯಲ್ಲಿ ಮೋದಿ : ಕರ್ನಾಟಕದಲ್ಲಿ ಒಂದು ನಾಟಕ ನಡೆಯುತ್ತಿದೆ
ಬಾಗಲಕೋಟೆ, ಏಪ್ರಿಲ್ 18 : 'ದೆಹಲಿಯಲ್ಲಿ ರಿಮೋಟ್ ಕಂಟ್ರೋಲ್ ಪ್ರಧಾನಿ ಇದ್ದರು. ಈಗ ಕರ್ನಾಟಕದಲ್ಲಿ ಅಂತಹ ಮುಖ್ಯಮಂತ್ರಿ ಇದ್ದಾರೆ. ಕರ್ನಾಟಕದಲ್ಲಿ ಒಂದು ನಾಟಕ ನಡೆಯುತ್ತಿದೆ. ಅದರಲ್ಲಿ ಭಾವನೆ ಇದೆ, ದ್ವೇಷವಿದೆ. ಮುಖ್ಯಮಂತ್ರಿಗಳು ಭಾವನೆ ಹೆಚ್ಚಾಗಿ ಅಳುತ್ತಾರೆ' ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದರು.
ಬಾಗಲಕೋಟೆಯಲ್ಲಿ ಗುರುವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಿದರು. ಬಾಗಲಕೋಟೆ ಮತ್ತು ವಿಜಯಪುರ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.
ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಪರಿಚಯ
ಬಾಗಲಕೋಟೆಯಲ್ಲಿ ಏಪ್ರಿಲ್ 23ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಪಿ.ಸಿ.ಗದ್ದಿಗೌಡರ್ ಕಣದಲ್ಲಿದ್ದಾರೆ. ವಿಜಯಪುರದಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಅಭ್ಯರ್ಥಿ.
ದಕ್ಷಿಣ ಕರ್ನಾಟಕದಲ್ಲಿ ಇಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಉತ್ತರ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಬಾಗಲಕೋಟೆ ಮತ್ತು ಚಿಕ್ಕೋಡಿಯಲ್ಲಿ ಸಮಾವೇಶ ಉದ್ದೇಶಿಸಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಚುನಾವಣಾ ಪುಟ