ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆ : ಪ್ರೀತಿಸಿ ಮದುವೆಯಾದ ಜೋಡಿಗೆ ಪ್ರಾಣ ಭೀತಿ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಆಗಸ್ಟ್ 27 : ಆ ಜೋಡಿಗಳು ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕುಟುಂಬದವರನ್ನು ಎದುರುಹಾಕಿಕೊಂಡು ವಿವಾಹವಾಗಿದ್ದು. ಆದರೆ, ಈಗ ದಂಪತಿಗಳಿಗೆ ಜೀವ ಬೆದರಿಕೆ ಹಾಕಲಾಗಿದೆ. ನವ ಜೋಡಿಗಳು ಜೀವ ಉಳಿಸಿಕೊಳ್ಳಲು ಊರೂರು ಅಲೆಯುತ್ತಿದ್ದಾರೆ.

ವಿಜಯಪುರ ಮೂಲದ ಮಮತಾ ಬಿದರಿ ಮತ್ತು ಪರುಶರಾಮ ರಾಠೋಡ ಜೀವ ಬೆದರಿಕೆ ಎದುರಿಸುತ್ತಿರುವ ದಂಪತಿಗಳು. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಬಾಗಲಕೋಟೆಯ ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.

ಮಡಿಕೇರಿಯಲ್ಲಿ ಹೊಸ ಬದುಕಿಗೆ ಕಾಲಿಟ್ಟ ಸಂತ್ರಸ್ತ ಕುಟುಂಬದ ಯುವತಿ!ಮಡಿಕೇರಿಯಲ್ಲಿ ಹೊಸ ಬದುಕಿಗೆ ಕಾಲಿಟ್ಟ ಸಂತ್ರಸ್ತ ಕುಟುಂಬದ ಯುವತಿ!

ಆದರೆ, ಮಮತಾ ಬಿದರಿ ಅವರ ಮನೆಯವರು ಪ್ರಭಾವಿಯಾಗಿದ್ದು, ದಂಪತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಮನೆಯವರ ವಿರೋಧದ ನಡುವೆ ಮಮತಾ ವಿವಾಹವಾಗಿರುವುದು ಇದಕ್ಕೆ ಕಾರಣವಾಗಿದೆ. ಆದರೆ, ಪರುಶರಾಮ ಅವರ ಕುಟುಂಬದಲ್ಲಿ ವಿವಾಹಕ್ಕೆ ಒಪ್ಪಿಗೆ ಇದೆ.

Newly married Bagalkot couple alleges threat to life

ಮಮತಾ ಅವರ ತಂದೆಗೆ ಪ್ರಭಾವಿ ರಾಜಕಾರಣಿಗಳ ಬೆಂಬಲವಿದೆ. ನಿಮ್ಮನ್ನು ಹತ್ಯೆ ಮಾಡುತ್ತೇವೆ ಎದು ಮಮತಾ ತಂದೆ ಅವರ ಕಡೆಯಿಂದ ಬೆದರಿಕೆ ಬಂದಿದೆ ಎಂದು ಪರುಶರಾಮ ಅವರು ಆರೋಪಿಸಿದ್ದಾರೆ. ನಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಅರಿಶಿಣದ ಮೈಯ ನನ್ನ ಶಕುಂತಲೆ ಬರುವಳು ನಾಚುತ್ತ ಹಸೆಗೆಅರಿಶಿಣದ ಮೈಯ ನನ್ನ ಶಕುಂತಲೆ ಬರುವಳು ನಾಚುತ್ತ ಹಸೆಗೆ

'ನಮ್ಮ ಮನೆಯಲ್ಲಿ ವಿವಾಹಕ್ಕೆ ಒಪ್ಪಿಗೆ ಇದೆ. ನಮ್ಮನ್ನು ನಮ್ಮ ಪಾಡಿಗೆ ಬದುಕಲು ಬಿಟ್ಟುಬಿಡಿ. ನಾವು ಚೆನ್ನಾಗಿ ಜೀವನ ಸಾಗಿಸುತ್ತೆವೆ. ನಮಗೆ ತೊಂದರೆ ಕೊಡಬೇಡಿ' ಎಂದು ಪರುಶರಾಮ ಅವರು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಸುಖ ಜೀವನದ ಕನಸು ಕಂಡಿದ್ದರು. ಆದರೆ, ಈಗ ಜೀವ ಬೆದರಿಕೆ ಬಂದಿದ್ದರಿಂದ ಊರೂರು ತಿರುಗುತ್ತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ಪರಿಚಯಸ್ಥರ ಬಳಿ ಕೇಳುತ್ತಿದ್ದಾರೆ. ನವ ಜೋಡಿಗಳಿಗೆ ಪೊಲೀಸರು ರಕ್ಷಣೆ ನೀಡಲಿದ್ದಾರೆಯೇ?.

English summary
Parusharam and Mamatha Bidari newly married couple from Bagalkot, Karnataka seeks protection. Couple alleged threat to life by the relatives of Mamatha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X