ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಎಚ್ಚರಿಕೆ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ ಮೇ 25 : ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಮಕ್ಕಳ ಕಳ್ಳತನ ಪ್ರಕರಣಗಳು ನಡೆದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಕ್ಕಳ ಕಳ್ಳತನ ಮಾಡುವವರು ಬಂದಿದ್ದಾರೆ ಎಂದು ಅಮಾಯಕರನ್ನು ಹೊಡೆದು ಬಡೆದು, ಪ್ರಾಣಕ್ಕೆ ಕುತ್ತು ತರುವಂತೆ ಮಾಡಿದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಕೊಡಗುರ್ಕಿ ಗ್ರಾಮಕ್ಕೆ ಬಂದದ್ದು ಮಕ್ಕಳ ಕಳ್ಳಿಯೋ, ಭಿಕ್ಷುಕಿಯೋ..?ಕೊಡಗುರ್ಕಿ ಗ್ರಾಮಕ್ಕೆ ಬಂದದ್ದು ಮಕ್ಕಳ ಕಳ್ಳಿಯೋ, ಭಿಕ್ಷುಕಿಯೋ..?

ಮಕ್ಕಳ ಕಳ್ಳತನ ಮಾಡುವವರು ಕಂಡು ಬಂದರೆ ಅಥವಾ ಅಂಥವರ ಮೇಲೆ ಅನುಮಾನ ಇದ್ದರೆ ಸ್ಥಳೀಯ ಹಾಗೂ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

no child theft cases have been reported in bagalkot district

ಪೊಲೀಸರಿಗೆ ಮಾಹಿತಿ ನೀಡದೇ, ತಾವೇ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ‌ ಕೈಗೊಳ್ಳಲಾಗುವುದು ಎಂದರು.

ಮಕ್ಕಳ ಕಳ್ಳರ ವದಂತಿಗೆ ಕಿವಿಗೊಡಬೇಡಿ: ಡಿಸಿಪಿ ರವಿ ಡಿ. ಚನ್ನಣ್ಣನವರ್ಮಕ್ಕಳ ಕಳ್ಳರ ವದಂತಿಗೆ ಕಿವಿಗೊಡಬೇಡಿ: ಡಿಸಿಪಿ ರವಿ ಡಿ. ಚನ್ನಣ್ಣನವರ್

ವಾಟ್ಸಪ್ ಹಾಗೂ ಫೇಸ್ ಬುಕ್ ಗಳಲ್ಲಿ ತಪ್ಪು ಸಂದೇಶ ನೀಡಬಾರದು. ಇದರಲ್ಲಿ ಬರುವ ಸಂದೇಶಗಳು ಸಹ ಕೆಲವೊಮ್ಮೆ ಜನರನ್ನು ದಾರಿ ತಪ್ಪಿಸುತ್ತವೆ. ಅಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದರು.

English summary
District police chief Vamshikrishna said that no child theft cases have been reported in the district. If children thief will come inform police. You do not take legal action.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X