ಬಾಗಲಕೋಟೆಯಲ್ಲಿ ಮನೆ ಕುಸಿತದಿಂದ ವೃದ್ದೆ ಸಾವು, 5 ಲಕ್ಷ ಪರಿಹಾರ ವಿತರಣೆ
ಬಾಗಲಕೋಟೆ, ಅಕ್ಟೋಬರ್, 13; ಬಾಗಲಕೋಟೆಯಲ್ಲಿ ಎಡೆಬಿಡದೆ ಮಳೆ ಅಬ್ಬರಿಸಿದೆ. ನಿರಂತರ ಸುರಿದ ಮಳೆಯಿಂದಾಗಿ ಗುರುವಾರ ಇಂದು ಬೆಳಗಿನ ಜಾವ ನಗರದ ಕಿಲ್ಲಾ ಓಣಿ ರಾಘವೇಂದ್ರ ಮಠದ ಹತ್ತಿರವಿರುವ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಸುಧಾಭಾಯಿ ಪ್ರಹ್ಲಾದರಾವ್ ಕಾವೇರಿ (81) ಎಂಬ ಮಹಿಳೆ ಮೃತಪಟ್ಟಿದ್ದು, ಮೃತೆ ವೃದ್ಧೆ ಕುಟುಂಬಕ್ಕೆ ಒಂದು ಗಂಟೆಯಲ್ಲಿ ಪರಿಹಾರ ವಿತರಿಸುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಸೂಚಿಸಿದ್ದರು.
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮೃತಪಟ್ಟ ಕುಟುಂಬಕ್ಕೆ ತಹಶೀಲ್ದಾರ್ ವಿನಯ್ ಕುಮಾರ್ ಪಾಟೀಲ್ 5 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಅನ್ನು ವಿತರಿಸಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಕಾರ್ಯಾಚರಣೆ ಮೂಲಕ ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯ ಮೃತದೇಹವನ್ನು ಹೊರತೆಗೆದಿದ್ದಾರೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಈ ಅನಾಹುತ ಸಂಭವಿಸಿದ್ದು, ಅಲ್ಲಿನ ಅಕ್ಕಪಕ್ಕದ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ.
ಮುಂದುವರೆದ ಅನಾಹುತಗಳು
ಬಾಗಲಕೋಟೆ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದ ಕಾರಣ ಅನಾಹುತಗಳು ಹೆಚ್ಚಾಗುತ್ತಲೇ ಇವೆ. ಮಂಗಳಗುಡ್ಡ ಗ್ರಾಮದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಗುಡ್ಡಗಳಿಂದ ಹರಿದುಬಂದ ಮಳೆ ನೀರು ಗ್ರಾಮಕ್ಕೆ ನುಗ್ಗಿದ ಪರಿಣಾಮ ಜನರು ಪರದಾಡುವಂತಾಗಿದೆ. 40ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಯಾವುದೇ ಪರ್ಯಾಯ ಮಾರ್ಗವಿಲ್ಲದೆ ಮನೆಯಲ್ಲಿನ ವಸ್ತುಗಳನ್ನು ಗಂಟು ಮೂಟೆ ಕಟ್ಟಿಕೊಂಡು ಸುರಕ್ಷಿತ ಸ್ಥಳಕ್ಕೆ ಜನರು ತೆರಳಲು ಮುಂದಾಗಿದ್ದಾರೆ. ಗ್ರಾಮದ ದೇವಸ್ಥಾನ, ಶಾಲೆಗಳಲ್ಲಿ ತಮ್ಮ ವಸ್ತುಗಳನ್ನು ಇಟ್ಟು ಸುರಕ್ಷಿತ ಸ್ಥಳಗಳಿಗೆ ಜನರು ಹೊರಟಿದ್ದಾರೆ.

ಹುನಗುಂದ, ಇಳಕಲ್ನಲ್ಲೂ ಮಳೆ ಆರ್ಭಟ
ಇನ್ನು ಹುನಗುಂದ, ಇಳಕಲ್ ತಾಲೂಕುಗಳಲ್ಲೂ ಮಳೆ ಮುಂದುವೆದಿದ್ದು, ಅಲ್ಲಿನ ಜನಜೀವನ ಹೇಳತೀರದಾಗಿದೆ. ಇಳಕಲ್ ತಾಲೂಕಿನ ಹೆರೂರ ಬಳಿ ಹಳ್ಳದ ಕಿರುಸೇತುವೆಯ ಮೇಲೆ ಮಳೆ ನೀರು ಚರಂಡಿಯಂತೆ ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಾಗೂ ಇದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಹಳ್ಳದ ನೀರಿನಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೇ ಬಾದಾಮಿಯಲ್ಲೂ ಕೂಡ ನಿನ್ನೆ ಸಂಜೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಹಾಗೂ ನಗರದ ಸವಿತಾ ಪೆಟ್ರೋಲ್ ಬಂಕ್ ಬಳಿ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ಅಲೆಮಾರಿ ಕುಂಚಿ ಕೊರವರ ಯುವಜನರು ರಕ್ಷಣೆ ಮಾಡಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications