ಬಾಗಲಕೋಟೆ: ವಾಹನಗಳಿಗೆ 'ಪ್ರೆಸ್' ಸ್ಟಿಕರ್ ರದ್ದು, ಅಧಿಕೃತ ಪತ್ರಕರ್ತರಿಗೆ QR ಕೋಡ್ ಕಾರ್ಡ್!
ಬಾಗಲಕೋಟೆ, ಸೆಪ್ಟೆಂಬರ್, 16: ಅಧಿಕೃತ ಪತ್ರಕರ್ತರು ಸೇರಿದಂತೆ ಇನ್ಮುಂದೆ ಯಾವುದೇ ವಾಹನಗಳ ಮೇಲೆ 'ಪ್ರೆಸ್' ಎಂಬ ಪದ ಇರುವ ಸ್ಟಿಕರ್ಗಳನ್ನು ಬಳಸುವಂತಿಲ್ಲ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ನವನಗರದ ಪತ್ರಿಕಾಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲೆಯಲ್ಲಿರುವ ಅಧಿಕೃತ ಪತ್ರಕರ್ತರಿಗೆ ಕ್ಯೂಆರ್ ಕೋಡ್ ಇರುವ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ. ಈ ಗುರುತಿನ ಚೀಟಿ ಹೊರತುಪಡಿಸಿ ವಾಹನಗಳ ಮೇಲೆ ಪ್ರೆಸ್ ಪದ ಬಳಕೆ ಮಾಡುವದನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ ಪತ್ರಿಕೆ ಸಾಗಿಸುವ ವಾಹನ ಎಂದು ಬರೆಸಬೇಕು. ಈ ನಿಯಮ ನವೆಂಬರ್ 1ರಿಂದ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅನಧಿಕೃತ ಪತ್ರಕರ್ತರಿಂದ ತೊಂದರೆ
ಅನಧಿಕೃತ ಪತ್ರಕರ್ತರಿಂದ ಅಧಿಕೃತ ಪತ್ರಕರ್ತರಿಗೆ, ಅಧಿಕಾರಿಗಳಿಗೆ ಆಗುತ್ತಿರುವ ತೊಂದರೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಧಿಕೃತ ಪತ್ರಕರ್ತರು ಇರುವದನ್ನು ಪರಿಶೀಲಿಸಲಾಗುವುದು. ನಂತರ ಶಿಫಾರಸ್ಸು ಪತ್ರದೊಂದಿಗೆ ವಾರ್ತಾ ಇಲಾಖೆಯ ಮೂಲಕ ಜಿಲ್ಲಾಡಳಿತಕ್ಕೆ ಪಟ್ಟಿಯನ್ನು ಸಲ್ಲಿಸಬೇಕು. ಪಟ್ಟಿಯನ್ನು ಸಲ್ಲಿಸಿದವರಿಗೆ ಮಾತ್ರ ಕ್ಯೂಆರ್ ಕೋಡ್ ಹೊಂದಿರುವ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ತಿಳಿಸಿದರು.

ಅಭಿವೃದ್ದಿ ಹಾಗೂ ಜನರ ಸೇವೆಗೆ ಆದ್ಯತೆ
ಪತ್ರಕರ್ತರಿಗೆ ನಿಗದಿತ ಸಮಯದಲ್ಲಿ ಜಿಲ್ಲಾಡಳಿತದಿಂದ ಮಾಹಿತಿ ನೀಡಲು ಕ್ರಮ ವಹಿಸಲಾಗುತ್ತಿದೆ. 3 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಅಭಿವೃದ್ದಿ ಹಾಗೂ ಜನರ ಸೇವೆಗೆ ಆದ್ಯತೆ ನೀಡಲಾಗುತ್ತದೆ. ಈ ನಿಟ್ಟಿಲ್ಲಿನಲ್ಲಿ ಪ್ರಾಮಾಣಿಕ ಕೆಲಸ ಮಾಡಲಾಗುವುದು. ಜಿಲ್ಲೆಯಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳಾಗಿವೆ. ಇನ್ನು ಆಗಬೇಕಿರುವ ಕೆಲಸಗಳ ಕಡೆಗೆ ಹೆಚ್ಚಿನ ಗಮನ ಹರಿಸಲಾಗುವುದು. ಜಿಲ್ಲೆಯು ಭೂಮಿ ವಿಭಾಗದಲ್ಲಿ ರಾಜ್ಯಕ್ಕೇ ಎರಡನೇ ಸ್ಥಾನ ಪಡೆದುಕೊಂಡಿದೆ. ಪ್ರತಿ ತಾಲೂಕಿನಲ್ಲಿರುವ ಕೋರ್ಟ್ ಪ್ರಕರಣಗಳು ಸೇರಿದಂತೆ ಇತರೆ ಕಡತಗಳ ವಿಲೇವಾರಿಗೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
ಅಧಿಕೃತ ಪತ್ರಕರ್ತರಿಗೆ ಜಯಪ್ರಕಾಶ್ ನೀಡಿದ ಸೂಚನೆ
ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಯಪ್ರಕಾಶ್ ಮಾತನಾಡಿ, "ವಾಹನಗಳ ಮೇಲೆ ಇರುವ ಪ್ರೆಸ್ ಪದವನ್ನು ಮೊದಲು ಅಧಿಕೃತ ಪತ್ರಕರ್ತರು ಸ್ವಯಂ ಪ್ರೇರಿತವಾಗಿ ತೆಗೆದುಹಾಕಬೇಕು. ನಂತರದಲ್ಲಿ ಉಳಿದ ವಾಹನಗಳ ಮೇಲೆ ಇರುವ ಅದನ್ನು ಬಳಕೆ ಆಗದಂತೆ ಪೊಲೀಸ್ ಇಲಾಖೆಯಿಂದ ಕ್ರಮವಹಿಸಲಾಗುತ್ತದೆ. ಪತ್ರಕರ್ತರ ಸಮ್ಮುಖದಲ್ಲಿ ನಿರ್ಧರಿಸಿದಂತೆ ಎಲ್ಲರೂ ಪಾಲನೆ ಮಾಡಬೇಕು," ಎಂದರು.

ಸಂವಾದ ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೊಳ್ಳಿ, ವಾರ್ತಾ ಸಹಾಯಕರಾದ ಕಸ್ತೂರಿ ಪಾಟೀಲ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದಲಭಂಜನ, ಪ್ರಧಾನ ಕಾರ್ಯದರ್ಶಿ ಶಂಕರ ಕಲ್ಯಾಣಿ, ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯ ಮಹೇಶ್ ಅಂಗಡಿ, ಹಿರಿಯ ಪತ್ರಕರ್ತರಾದ ರಾಮ ಮನಗೂಳಿ, ಈಶ್ವರ ಶೆಟ್ಟರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications