SBI ಬ್ಯಾಂಕ್ನಿಂದ ಪತ್ನಿ-ತಾಯಿ ಖಾತೆಗೆ 1.60 ಕೋಟಿ ರೂ ವರ್ಗಾಯಿಸಿ ಸಿಕ್ಕಿಬಿದ್ದ ಕ್ಯಾಷಿಯರ್
ಬಾಗಲಕೋಟೆ, ಜೂನ್ 9: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಗಾದೆಗೆ ಮಾತನಂತೆ, ದಿನಾಲು ಲಕ್ಷಾಂತರ ರೂಪಾಯಿಯನ್ನು ನೋಡುತ್ತಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುವ ಕ್ಯಾಷಿಯರ್, ತಾನೂ ಉದ್ಯೋಗ ಮಾಡುವ ಬ್ಯಾಂಕ್ನಲ್ಲಿಯೇ ಅಧಿಕಾರವನ್ನು ದುರಪಯೋಗಪಡಿಸಿಕೊಂಡು ಬರೋಬ್ಬರಿ 1 ಕೋಟಿ, 60 ಲಕ್ಷ ರೂಪಾಯಿಗಳನ್ನು ಲಪಟಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬಾಗಲಕೋಟೆ ಜಿಲ್ಲೆಯ ನವನಗರದ ಎಸ್ ಬಿಐ ಬ್ಯಾಂಕ್ ನಲ್ಲಿ ಕ್ಯಾಷಿಯರ್ ಹುದ್ದೆಯಲ್ಲಿದ್ದು,ಲಕ್ಷಾಂತರ ಹಣವನ್ನು ಪ್ರತಿಧಿನ ನೋಡುತ್ತಿದ್ದ ಆತ ತನ್ನ ಜವಾಬ್ದಾರಿಯನ್ನು ಮರೆತು ಮೋಸ ಮಾಡಿ, ಕೊನೆಗೆ ಪೊಲೀಸರ ಅತಿಥಿಯಾಗಿದ್ದಾನೆ. ಜಿಲ್ಲೆಯ ನವನಗರದ ಎಸ್ ಬಿ ಐ ಬ್ಯಾಂಕ್ನ ಕ್ಯಾಷಿಯರ್ ಸಂತೋಷ ಕಬಾಡೆ ಬರೊಬ್ಬರಿ 1.6 ಕೋಟಿ ರೂ ಹಣ ವಂಚನೆ ಮಾಡಿದ್ದಾನೆ. ಸಂತೋಷ ಕಳೆದ ಮೂರು ತಿಂಗಳಿನಿಂದ ಟೆಲ್ಲರ್ ಐಡಿ ನಂಬರ್ ಮೂಲಕ ತನ್ನ ಪತ್ನಿ ಪೂಜಾ ಕಬಾಡೆ ಹಾಗೂ ತಾಯಿ ಜನಾಬಾಯಿ ಕಬಾಡೆ ಖಾತೆಗೆ ಬ್ಯಾಂಕಿನ ಆರ್ ಬಿ ಐ ಕರೆನ್ಸಿ ಚೆಸ್ಟ್ ನಲ್ಲಿರುವ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಬ್ಯಾಂಕಿನ ಮ್ಯಾನೇಜರ್ ಅಲ್ಲಪ್ಪ ಲಕ್ಷೆಟ್ಟಿ ಬಾಗಲಕೋಟೆ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಸಂತೋಷ ಕಬಾಡೆಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂತೋಷ ಕಬಾಡೆ ಸಿಕ್ಕಿಬಿದ್ದದ್ದೇಗೆ?
ಸಂತೋಷ ಕಬಾಡೆ ಸಿಕ್ಕಿ ಬೀಳಲು ಅಲರ್ಟ್ ಮೆಸೇಜ್ ಕಾರಣ. ಬ್ಯಾಂಕ್ ನ ಗ್ರಾಹಕ ಅಥವಾ ಬ್ಯಾಂಕ್ ಸಿಬ್ಬಂದಿ ಖಾತೆಗೆ ದೊಡ್ಡ ಮೊತ್ತದ ಹಣ ಜಮಾ ಆದರೆ ಮೇಲಾಧಿಕಾರಿಗಳಿಂದ ಅಲರ್ಟ್ ಮೆಸೇಜ್ ಬರುತ್ತದೆ. ಆ ಪ್ರಕಾರ ಜೂನ್ 4 ರಂದು ಮೇಲಾಧಿಕಾರಿಗಳ ಸೂಚನೆ ಪ್ರಕಾರ ಬ್ಯಾಂಕ್ ನ ಸಿಬ್ಬಂದಿ ಗ್ರಾಹಕರ ಖಾತೆ ಪರಿಶೀಲಿಸಿದಾಗ ಸಂತೋಷ ಕಬಾಡೆ ತಾಯಿ ಜನಾಬಾಯಿ ಹಾಗೂ ಪತ್ನಿ ಪೂಜಾ ಖಾತೆಗೆ ಹೆಚ್ಚು ಮೊತ್ತದ ಹಣ ವರ್ಗಾವಣೆಯಾಗಿದ್ದು ಪತ್ತೆಯಾಗಿದೆ.
ಕಬಾಡೆ ಪತ್ನಿ ಪೂಜಾ ಅವರ ಖಾತೆ ನಂ 62325851077 ಹಾಗೂ ತಾಯಿ ಜನಾಬಾಯಿ ಅವರ 62273526519 ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾವಣೆಯಾಗಿರುವುದು ಕಂಡುಬಂದಿದೆ. ನಂತರ ಆ ಖಾತೆಗಳಿಂದ ಆನ್ ಲೈನ್ ಮೂಲಕ ಸಂತೋಷ ಕಬಾಡೆ ತನ್ನ ವಿಜಯಪುರ ಹೆಚ್ ಡಿ ಎಪ್ ಸಿ ಬ್ಯಾಂಕ್ ಖಾತೆ ನಂ 50100308398460 ಗೆ ವರ್ಗಾವಣೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಸದ್ಯ ಬ್ಯಾಂಕ್ ನಲ್ಲಿ ನಾಲ್ಕು ತಂಡಗಳು ಬಂದು ಆಡಿಟ್ ಕಾರ್ಯ ನಡೆಸಿದ್ದಾರೆ.

ಇನ್ನು ಕ್ಯಾಷಿಯರ್ ವಂಚನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಬ್ಯಾಂಕ್ ನಂಬಿ ಜನರು ಕೋಟ್ಯಾಂತರ ರೂ ವ್ಯವಹಾರ ಮಾಡುತ್ತಾರೆ. ಆದರೆ ಬ್ಯಾಂಕ್ ಸಿಬ್ಬಂದಿಯೆ ಹೀಗೆ ಮೋಸ ಮಾಡಿದರೆ ಇನ್ಯಾರನ್ನು ನಂಬಿ ತಾವೂ ಕಷ್ಟಪಟ್ಟು ದುಡಿದ ಹಣವನ್ನು ಬ್ಯಾಕಿನಲ್ಲಿಡುವುದು ಎಂದು ಆಕ್ರೋಶವ್ಯಕ್ತಪಡಿಸಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications