ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೇರದಾಳದಲ್ಲಿ ಯೋಗ ಮಾಡುವ ವೇಳೆ ಮೃತಪಟ್ಟ ಶಾಲಾ ಶಿಕ್ಷಕ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಜೂನ್.21: ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗ ಮಾಡುತ್ತಿರುವ ಸಂದರ್ಭದಲ್ಲಿ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ಗುರುವಾರ ನಡೆದಿದೆ.

ಜಿಲ್ಲೆಯ ತೇರದಾಳ ಪಟ್ಟಣದ ಜೆವಿ ಮಂಡಳಿ ಸಂಸ್ಥೆಯ ವತಿಯಿಂದ ಗುರುಕುಲ ಕ್ಯಾಂಪಸ್ ನಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗ ಮಾಡುವ ವೇಳೆ ಶಿಕ್ಷಕರು ಸಾವನ್ನಪ್ಪಿದ್ದಾರೆ.

ಸಂಭ್ರಮದ ಯೋಗ ದಿನಾಚರಣೆ: ಯಾವ ಜಿಲ್ಲೆಗಳಲ್ಲಿ ಹೇಗೆ ಆಚರಿಸಲಾಯಿತು?ಸಂಭ್ರಮದ ಯೋಗ ದಿನಾಚರಣೆ: ಯಾವ ಜಿಲ್ಲೆಗಳಲ್ಲಿ ಹೇಗೆ ಆಚರಿಸಲಾಯಿತು?

ಮೃತರು ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದ ಎಸ್ ಜೆ ಬಾಲಕಿಯರ ಪ್ರೌಢ ಶಾಲೆಯ ಗಣಿತ ಶಿಕ್ಷಕ ವಿಶ್ವನಾಥ ಆರ್. ಬಿರಾದಾರ (47) ಎನ್ನಲಾಗಿದ್ದು, ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ಖಚಿತವಾಗಿದೆ.

School teacher died while doing Yoga in Yoga Day Celebration at teradala

ಇಂದು ವಿಶ್ವದೆಲ್ಲೆಡೆ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದೇ ವೇಳೆ ಇಂತಹ ಅವಘಡ ಸಂಭವಿಸಿರುವುದು ಕುಟುಂಬಸ್ಥರಿಗೆ, ವಿದ್ಯಾರ್ಥಿಗಳಿಗೆ, ಆಪ್ತರಿಗೆ ಬಹಳ ದುಃಖವನ್ನುಂಟು ಮಾಡಿದೆ.

ಶಿಕ್ಷಕರ ನಿಧನಕ್ಕೆ ಶಾಲಾ ಸಿಬ್ಬಂದಿಗಳು, ಆಡಳಿತ ಮಂಡಳಿಯವರು, ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

English summary
School teacher died while doing Yoga in Yoga Day Celebration at teradala in bagalkot district. He is died from a heart attack. School administration Condolences for the death of the teacher.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X