ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಳಕಲ್ ನಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡಿದ ಶಿಕ್ಷಕ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಆಗಸ್ಟ್.31: ಜಿಲ್ಲೆಯಲ್ಲಿ ನಗರ, ಪಟ್ಟಣ ಸ್ಥಳೀಯ ಸಂಸ್ಥೆ ಚುನಾವಣೆಯ ಮತದಾನ ನಡೆಯುತ್ತಿದ್ದು, ಶಾಲಾ ಶಿಕ್ಷಕರೊಬ್ಬರು ನಗರ ಸಭೆ ಅಭ್ಯರ್ಥಿ ಪರವಾಗಿ ಮತದಾನ ಮಾಡುವಂತೆ ಹಣ ನೀಡಿ ಆಮಿಷ ಒಡ್ಡುತ್ತಿರುವ ವೀಡಿಯೋ ಬಹಿರಂಗವಾಗಿದೆ.

ಇಳಕಲ್ ಪಟ್ಟಣದಲ್ಲಿ ನಡೆಯುತ್ತಿರುವ ನಗರಸಭೆ ಚುನಾವಣೆಯಲ್ಲಿ ಹಣದ ಆಮಿಷ ಒಡ್ಡಿ ಬಿಜೆಪಿ ಪರ ಮತದಾನ ಮಾಡುವಂತೆ ಹೇಳಲಾಗಿದೆ. ಶಿಕ್ಷಕ ಇಳಕಲ್ ಪಟ್ಟಣದ ಸಮೀಪ ಸಜ್ಜಲಗುಡ್ಡ ಪ್ರಾಥಮಿಕ ಶಾಲೆಯ ಸಂಗನಬಸಪ್ಪ ಲೆಕ್ಕಿಹಾಳ ಎಂದು ತಿಳಿದು ಬಂದಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಮತಗಟ್ಟೆಯಲ್ಲಿಯೇ ಅಭ್ಯರ್ಥಿಗಳ ಪ್ರಚಾರಸ್ಥಳೀಯ ಸಂಸ್ಥೆ ಚುನಾವಣೆ: ಮತಗಟ್ಟೆಯಲ್ಲಿಯೇ ಅಭ್ಯರ್ಥಿಗಳ ಪ್ರಚಾರ

ವಾರ್ಡ್ ನಂಬರ್ 13 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಮಂಜುನಾಥ ಶೆಟ್ಟರ್ ಎಂಬುವವರ ಪರವಾಗಿ ಮತ ನೀಡುವಂತೆ ಮನೆ ಮನೆ ತೆರಳಿ, ಮಹಿಳೆಯರಿಗೆ ಹಣ ನೀಡಿದ್ದು, ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಕೇಳಿದ್ದಾರೆ.

School teacher gave money to voters in Ilkal

ಸ್ಥಳೀಯ ಸಂಸ್ಥೆ ಚುನಾವಣೆ: ಉಳ್ಳಾಲ, ಪುತ್ತೂರು, ಬಂಟ್ವಾಳದಲ್ಲಿ ಬಿರುಸಿನ ಮತದಾನಸ್ಥಳೀಯ ಸಂಸ್ಥೆ ಚುನಾವಣೆ: ಉಳ್ಳಾಲ, ಪುತ್ತೂರು, ಬಂಟ್ವಾಳದಲ್ಲಿ ಬಿರುಸಿನ ಮತದಾನ

ಈ ಘಟನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಕಾರ್ಯಕರ್ತರು ಚುನಾವಣೆ ಅಧಿಕಾರಿಗಳಿಗೆ ದೂರು ನೀಡಿದ್ದು, ಚುನಾವಣಾಧಿಕಾರಿಗಳು ಸರಿಯಾದ ಸಮಯಕ್ಕೆ ಬಾರದ ಹಿನ್ನಲೆಯಲ್ಲಿ ಆಕ್ರೋಶಗೊಂಡಿದ್ದಾರೆ.

ಮಾಜಿ ಸಂಸದೆ ರಮ್ಯಾ ಅವರು ಇಂದು ಮತದಾನ ಮಾಡಲ್ವ?ಮಾಜಿ ಸಂಸದೆ ರಮ್ಯಾ ಅವರು ಇಂದು ಮತದಾನ ಮಾಡಲ್ವ?

ಈ ಮಾಹಿತಿ ತಿಳಿದ ತಕ್ಷಣ ಸಿಪಿಐ ಕರುಣೇಶಗೌಡ ಸಿಬ್ಬಂದಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವಿಚಾರಣೆಗಾಗಿ ಹಣ ಕೊಟ್ಟಿರುವ ಶಿಕ್ಷಕ ಹಾಗೂ ಹಣ ಪಡೆದುಕೊಂಡ ಮಹಿಳೆಯರಿಗೆ ವಿಚಾರಣೆ ನಡೆಸಿ, ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.

English summary
Voting is being held in the city and town local body elections in the Bagalkot district. In this time a school teacher gave money to voters and said vote to our candidate.This video now revealed
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X