ಕುಮಾರಸ್ವಾಮಿ ಬರೆದಿಟ್ಟುಕೊಳ್ಳಿ, ಸರ್ಕಾರ ಬೀಳುತ್ತೆ: ಶೆಟ್ಟರ್ ಸವಾಲು
ಜಮಖಂಡಿ, ಅಕ್ಟೋಬರ್ 30: ಮುಖ್ಯಮಂತ್ರಿ ಕುಮಾರಸ್ವಾಮಿಗಳೇ ಬರೆದಿಟ್ಟುಕೊಳ್ಳಿ, ಬಿಜೆಪಿ ಮ್ಯಾಜಿಕ್ ನಂಬರ್ ತಲುಪುತ್ತೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇರ ಸವಾಲು ಹಾಕಿದ್ದಾರೆ.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ನಿನ್ನೆಯಷ್ಟೇ ಜಗದೀಶ್ ಶೆಟ್ಟರ್ ಭವಿಷ್ಯ ಹೇಳಲು ಆರಂಭಿಸಿದ್ದಾರೆ ಎನ್ನುವ ಟೀಕೆಗೆ ಪ್ರತ್ಯುತ್ತರ ನೀಡಿದ ಶೆಟ್ಟರ್, ನಾನು ಭವಿಷ್ಯ ಹೇಳುತ್ತಿದ್ದೇನೆ ಆದರೆ ಇದು ರಾಜಕೀಯ ಅನುಭವದ ಮೇಲೆ ಹೇಳುತ್ತಿರುವ ಭವಿಷ್ಯ, ಈಗಾಗಲೇ ನಾನು ಹೇಳಿರುವ ಭವಿಷ್ಯ ನಿಜವಾಗಿದೆ ಮುಂದೆಯೂ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನನ್ನ ಭವಿಷ್ಯ ನಿಜವಾಗುತ್ತದೆ ಎಂದು ಸಮರ್ಥಿಸಿಕೊಂಡರು.
ಈ ಹಿಂದೆಯೇ ನಾನು ಲೋಕಸಭಾ ಚುನಾವಣೆ ಮುಗಿಯುವ ತನಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವುದಿಲ್ಲ ಎಂದು ಹೇಳಿದ್ದೆ,ಅದು ನಿಜವಾಗಿದೆ. ಕುಮಾರಸ್ವಾಮಿ ಈ ಬಗ್ಗೆ ಉತ್ತರ ನೀಡಲಿ, ಮುಂದೆಯೂ ನನ್ನ ಭವಿಷ್ಯ ನಿಜವಾಗುತ್ತದೆ. ಆದರೆ ನಾನು ಜ್ಯೋತಿಷಿಗಳು ಹೇಳುವ ಭವಿಷ್ಯ ಹೇಳುವುದಿಲ್ಲ. ರಾಜಕೀಯ ಅನುಭವದ ಆಧಾರದ ಮೇಲೆ ಹೇಳುತ್ತೇನೆ ಕುಮಾರಸ್ವಾಮಿಯವರು ಇದನ್ನು ಅರಿತುಕೊಳ್ಳಲಿ ಎಂದು ಹೇಳಿದರು.

ಜಮಖಂಡಿ ಮಾತ್ರವಲ್ಲ ರಾಜ್ಯದ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಪರವಾದ ಅಲೆ ಇದೆ, ಸಮ್ಮಿಶ್ರ ಸರ್ಕಾರವನ್ನು ಉಪ ಚುನಾವಣೆಯಲ್ಲಿ ರಾಜ್ಯದ ಜನರು ತಿರಸ್ಕರಿಸಲಿದ್ದಾರೆ. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಬಲ ಹೆಚ್ಚಾಗಲಿದೆ. ಅಷ್ಟೇ ಅಲ್ಲ ಉಪ ಚುನಾವಣೆ ಫಲಿತಾಂಶದ ಬಳಿಕ ಸಮ್ಮಿಶ್ರ ಸರ್ಕಾರ ಕೊನೆಗಾಣುತ್ತದೆ ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications