'ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಸಚಿವ ಸ್ಥಾನಮಾನ ಕೊಡಬೇಡಿ'

ಬಾಗಲಕೋಟೆ, ಮೇ. 22 : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲರಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡ್ಡಮನಿ ಹೇಳಿದರು.

ಬಾಗಲಕೋಟೆ ನವನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಐದು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಲು ಅವರೇ ನೇರ ಹೊಣೆ ಎಂದು ಆರೋಪಿಸಿದರು.

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಇಂದು ಈ ಹೀನಾಯ ಸ್ಥಿತಿಗೆ ಬರಲು ಅವರೇ ಕಾರಣ. ಹೀಗಾಗಿ ಈಗಿನ ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು ಎಂದು ಆಗ್ರಹಿಸಿದರು.

Should not be given a ministerial post for S.R. Patil

ಒಂದು ವೇಳೆ ಅವರಿಗೆ ಸಚಿವ ಸ್ಥಾನ ನೀಡಿದರೆ ಗ್ರಾಮ, ತಾಲೂಕು, ಪುರಸಭೆ ಹಾಗೂ ಜಿಲ್ಲಾ ಪಂಚಾಯತ್ ಜನಪ್ರತಿನಿಧಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಜತೆಗೆ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಹುನಗುಂದ ಮತಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಾಕಷ್ಟು ಭಾರಿ ಪಾಟೀಲರಿಗೆ ಆಹ್ವಾನ ನೀಡಿದರೂ ಪ್ರಚಾರಕ್ಕೆ ಬರದೇ ಕುಂಟು ನೆಪ‌ ಹೇಳಿಕೊಂಡು ಪ್ರಚಾರಕ್ಕೆ ಬರಲಿಲ್ಲ.

ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನಮಾನ ನೀಡಬಾರದು. ನೀಡಿದ್ದೇ ಆದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+