ಹುನಗುಂದದಲ್ಲಿ ವೀಣಾ ಕಾಶಪ್ಪನವರ ಪರ ಮತ ಯಾಚಿಸಿದ ಸಿದ್ದರಾಮಯ್ಯ
ಬಾಗಲಕೋಟೆ, ಏಪ್ರಿಲ್ 21:ಮೋದಿ ಐದು ವರ್ಷ ಪಿಎಂ ಆಗಿದ್ದರು. ಚುನಾವಣೆಗೆ ಬಂದಾಗ ಏನೇನು ಮಾಡಿದ್ದಾರೆ ಹಾಗೂ ಮುಂದೆ ಐದು ವರ್ಷ ಏನು ಮಾಡ್ತಾರೆ ಅಂತ ಜನರ ಎದುರು ರಿಪೋರ್ಟ್ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಪರ ಮತಬೇಟೆ ಆರಂಭಿಸಿರುವ ಸಿದ್ದರಾಮಯ್ಯ ಹುನಗುಂದ ಪಟ್ಟಣದ ಟಿಸಿಎಚ್ ಕಾಲೇಜು ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಬಡವ, ರೈತರು, ಮಹಿಳೆಯರು, ಅಲ್ಪಸಂಖ್ಯಾತರ ಬೆಂಬಲಕ್ಕೆ ನಿಲ್ಲೋರಿಗೆ ಮತ ಕೊಡಬೇಕು ಎಂದರು.
ನರೇಂದ್ರ ಮೋದಿ ಕ್ಷೇತ್ರದ ಸಂಸದ ಗದ್ದಿಗೌಡರ ಪಟ್ಟಿ ಕೊಡಬೇಕಲ್ವಾ, ಮೋದಿ ಬಾಗಲಕೋಟೆಗೆ ಬಂದಾಗ ಏನು ಮಾತಾಡಿದ್ರು, ರೈತರು, ಬಡವರು, ದಲಿತರ ಬಗ್ಗೆ ಮಾತಾಡಿದ್ರಾ,
ಬರೀ ಬಾಗಲಕೋಟೆ, ಬಾಲಾಕೋಟ್ ಬಿಟ್ಟು ಏನು ಮಾತಾಡಿದ್ರು ಎಂದು ಪ್ರಶ್ನೆಗಳ ಸುರಿಮಳೆಗೈದರು.

ನಾನು ಸಿಎಂ ಇದ್ದಾಗ ಏನು ಮಾಡಿದ್ದೇನೆ ಅಂತ ಹೇಳ್ತೇನೆ.ನರೇಂದ್ರ ಮೋದಿಗೆ ದಮ್ ಇದ್ರೆ ಹೇಳಲಿ, ಬಣ್ಣದ ನಾಟಕ ಮಾಡ್ತೀರಾ? ನಿಮ್ಮಿಂದ ನಾವು ದೇಶಭಕ್ತಿ ಕಲಿಬೇಕಾ?ದೇಶಕ್ಕಾಗಿ ಬಿಜೆಪಿಯವರು ಒಬ್ಬರಾದ್ರೂ ಸತ್ತಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಬಾಗಲಕೋಟೆಯಲ್ಲಿ ಗದ್ದಿಗೌಡರ 15 ವರ್ಷ ಎಂಪಿ. ಏನು ಕೊಡುಗೆ ಇದೆ? ಅದಕ್ಕೆ ಈ ಗಿರಾಕಿ ನನ್ನ ಮುಖ ನೋಡಬೇಡಿ, ನರೇಂದ್ರ ಮೋದಿ ಮುಖ ನೋಡಿ ಅಂತಿದ್ದಾನೆ. ನಾಳೆ ಮೋದಿ ಹುಡುಕಿಕೊಂಡು ದೆಹಲಿಗೆ ಹೋಗ್ತೀರಾ? ನಾನು ಸಿಎಂ ಇದ್ದಾಗ ಹುನಗುಂದ ತಾಲೂಕಿನ ನಾಲ್ಕು ಸಾವಿರ ಕೋಟಿ ಅನುದಾನ ಕೊಟ್ಟಿದ್ದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ವೀಣಾ ಕಾಶಪ್ಪನವರ ಕಾಂಗ್ರೆಸ್ ಅಭ್ಯರ್ಥಿ. ವೀಣಾ ಮುಖ ನೋಡಿ ವೋಟು ಕೊಡಿ ಎಂದ ಸಿದ್ದರಾಮಯ್ಯ, ನಾವು ರಾಹುಲ್ ಗಾಂಧಿ, ಸಿದ್ದರಾಮಯ್ಯ, ದಿನೇಶ ಗುಂಡೂರಾವ್ ಮುಖ ನೋಡಿ ವೋಟು ಕೊಡಿ ಎನ್ನುತ್ತೇವೆ. ಆದರೆ ಬಿಜೆಪಿಯವರು ಮೋದಿ ಬಿಟ್ಟು ಬೇರೇನು ಹೇಳಲ್ಲ ಎಂದು ಟೀಕಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications