ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದು ನ್ಯಾಮಗೌಡ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ: ಸಿದ್ದರಾಮಯ್ಯ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

Recommended Video

ನೆನ್ನೆ ನಿಧನರಾದ ಸಿದ್ದು ನ್ಯಾಮಗೌಡ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ | Oneindia Kannada

ಬಾಗಲಕೋಟೆ, ಮೇ. 29 : ಡಿಸಿಎಂ ಡಾ.ಜಿ.ಪರಮೇಶ್ವರ ಹಾಗೂ ಮಾಜಿ ಸಿ.ಎಂ. ಸಿದ್ದರಾಮಯ್ಯ ನಿನ್ನೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದರು.

ಹುಬ್ಬಳ್ಳಿಯಿಂದ ಹೆಲಿಕ್ಯಾಫ್ಟರ್ ಮೂಲಕ ಆಗಮಿಸಿದ ನಾಯಕರು ಜಮಖಂಡಿ ತಾಲೂಕು ಕ್ರೀಡಾಂಗಣದಲ್ಲಿ ಇರಿಸಲಾಗಿದ್ದ ನ್ಯಾಮಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಇಂದು ಸಿದ್ದು ನ್ಯಾಮಗೌಡ ಅಂತ್ಯಕ್ರಿಯೆ: ಕಾಂಗ್ರೆಸ್ ಮುಖಂಡರ ಆಗಮನ ಇಂದು ಸಿದ್ದು ನ್ಯಾಮಗೌಡ ಅಂತ್ಯಕ್ರಿಯೆ: ಕಾಂಗ್ರೆಸ್ ಮುಖಂಡರ ಆಗಮನ

Siddaramaiah, Dr Parameshwara attended to Siddu Nyamagouda funeral

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನ್ಯಾಮಗೌಡರು ತಮ್ಮ ಸಾಧನೆಯಿಂದ ಹೆಸರನ್ನು, ಬದುಕನ್ನು ಸಾರ್ಥಕಪಡಿಸಿಕೊಂಡಿದ್ದಾರೆ. ಇಂತಹ ಶಾಸಕರನ್ನು ಕಳೆದುಕೊಂಡಿದ್ದು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

Siddaramaiah, Dr Parameshwara attended to Siddu Nyamagouda funeral

ಸರಳ ಸಜ್ಜನಿಕೆಯ ನಾಯಕ ನ್ಯಾಮಗೌಡರು ರಾಮಕೃಷ್ಣ ಹೆಗಡೆ ಅವರನ್ನು ಪರಾಭವಗೊಳಿಸಿ, ಕೇಂದ್ರ ಸಚಿವರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಮೂರು ಬಾರಿ ಶಾಸಕರಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದರು.

English summary
Former Chief Minister Siddaramaiah, Deputy Chief Minister Dr Parameshwara attended to Jamkhandi MLA Siddu Nyamagouda funeral. In this time siddaramaiah said about Nyamagouda achievements.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X