ಬಾದಾಮಿಯಲ್ಲಿ ಸಿದ್ದರಾಮಯ್ಯ: ಪ್ರವಾಹ ಸಂತ್ರಸ್ಥರ ಅವಹಾಲು ಸ್ವೀಕಾರ
ಬಾದಾಮಿ, ಆಗಸ್ಟ್ 19: ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವೈದ್ಯರ ಸೂಚನೆ ಮೇರೆಗೆ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ, ಇಂದು ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ಬೆಳಿಗ್ಗೆಯೇ ಬಾದಾಮಿಗೆ ತೆರಳಿದ ಸಿದ್ದರಾಮಯ್ಯ, ಪ್ರವಾಹದಿಂದ ಹಾನಿಗೆ ಒಳಗಾದ ಗ್ರಾಮಗಳ ವೀಕ್ಷಣೆ ನಡೆಸಿದರು. ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರ ಅವಹಾಲುಗಳನ್ನು ಕೇಳಿಸಿ, ಅವರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಸಿದ್ದರಾಮಯ್ಯ
ಪ್ರವಾಹದಿಂದ ಹಾನಿಗೊಳಗಾಗಿರುವ ಗದಗ ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಕೊಣ್ಣೂರು ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದೆ ಹಾಗೂ ಸಮೀಪದ ಮರು ವಸತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರವಾಹದಿಂದ ಹಾನಿಗೊಳಗಾಗಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ ಅವರು, ಪರಿಹಾರದ ಭರವಸೆ ನೀಡಿದರು.
ಬಾದಾಮಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದೆ ಹಾಗೂ ಪರಿಹಾರ ಧನದ ಚೆಕ್ಗಳನ್ನು ಸಿದ್ದರಾಮಯ್ಯ ವಿತರಿಸಿದರು.
ಕಣ್ಣಿನ ಆಪರೇಷನ್ ಆಗಿದ್ದ ಕಾರಣ ಸಿದ್ದರಾಮಯ್ಯ ಅವರು ಪ್ರವಾಹ ಸಮಯದಲ್ಲಿ ತಮ್ಮ ಕ್ಷೇತ್ರ ಬಾದಾಮಿಗೆ ಹೋಗಲಾಗಿರಲಿಲ್ಲ, ಹಾಗಾಗಿ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರನ್ನು ಬಾದಾಮಿಗೆ ಕಳುಹಿಸಿದ್ದರು. ಇದೀಗ ಅವರೇ ಖುದ್ದು ಬಾದಾಮಿಗೆ ಹೋಗಿದ್ದಾರೆ.