ಬಾಗಲಕೋಟೆ: ಮೃತ ಅಭಿಮಾನಿ ಮನೆಗೆ ಸಿದ್ದರಾಮಯ್ಯ ಭೇಟಿ, ಪಾದಯಾತ್ರೆಗೆ ಚಾಲನೆ
ಬಾಗಲಕೋಟೆ, ಆಗಸ್ಟ್ 10: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆ ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಯಲ್ಲಿ ಮಾಜಿ ಸಿಎಂ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಬುಧವಾರ ಬೆಳಗ್ಗೆ 10:30ಕ್ಕೆ ಆರಂಭವಾಗಲಿರುವ ಪಾದಯಾತ್ರೆಗೆ ಸಿದ್ದರಾಮಯ್ಯ ಚಾಲನೆ ಕೊಡಲಿದ್ದು, ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಬಾದಾಮಿ ಪಟ್ಟಣದ ಎಪಿಎಂಸಿಯಿಂದ ಪ್ರಾರಂಭ ಆಗಲಿರುವ ಪಾದಯಾತ್ರೆ ಸುಮಾರು 3 ಕಿ.ಮೀ ದೂರದ ಬಾಗಲಕೋಟೆ ರಸ್ತೆಯಲ್ಲಿರುವ ಹೊಸಗೌಡರ ಕಲ್ಯಾಣ ಮಂಟಪದವರೆಗೆ ಸಾಗಲಿದೆ.
ನಂತರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಬಹಿರಂಗ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಬಾಗಲಕೋಟೆ ನಗರಕ್ಕೆ ಸಿದ್ದರಾಮಯ್ಯ ಹೋಗಲಿದ್ದಾರೆ. ಈ ವೇಳೆ ಬಾಗಲಕೋಟೆ ನಗರದ ಕೆರೂಡಿ ಆಸ್ಪತ್ರೆಗೆ ಭೇಟಿ ನೀಡಿ, ಸಿದ್ದರಾಮೋತ್ಸವದಲ್ಲಿ ಭಾಗಿಯಾಗಲು ಹೊರಟಿದ್ದ ವೇಳೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಮುಧೋಳ ತಾಲ್ಲೂಕಿನ ಹಿರೆ ಆಲಗುಂಡಿ ಗ್ರಾಮದ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ.

ಆಸ್ಪತ್ರೆ ಭೇಟಿ ಬಳಿಕ ಬೀಳಗಿ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮಕ್ಕೆ ಸಿದ್ದರಾಮಯ್ಯ ಪ್ರಯಾಣ ಮಾಡಲಿದ್ದಾರೆ. ಸಿದ್ದರಾಮೋತ್ಸವಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿ ಸಾವಿಗೀಡಾದ ಚಿಕ್ಕಾಲಗುಂಡಿಯ ಮೃತ ಪ್ರಕಾಶ್ ಬಡಿಗೇರ್ ಮನೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೃತ ಪ್ರಕಾಶ ಕುಟುಂಬಸ್ಥರಿಗೆ ಸಾಂತ್ವನ, ಧೈರ್ಯ ಹೇಳಲಿದ್ದಾರೆ.
ಆಗಸ್ಟ್ 2ರಂದು ಮುಧೋಳ ತಾಲ್ಲೂಕಿನ ಹಿರೆ ಆಲಗುಂಡಿ ಗ್ರಾಮದಿಂದ ಹೊರಟಿದ್ದ ಕ್ರೂಷರ್ ಬಾದಾಮಿ ತಾಲ್ಲೂಕಿನ ಹೂಲಗೇರಿ ಬಳಿ ಪಲ್ಟಿಯಾಗಿತ್ತು. ಈ ವೇಳೆ ಸ್ಥಳದಲ್ಲಿಯೇ ಚಾಲಕ ಪ್ರಕಾಶ್ ಮೃತಪಟ್ಟಿದ್ದರೆ, ಏಳೆಂಟು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸಂಜೆ 6ಕ್ಕೆ ಚಿಕ್ಕಾಲಗುಂಡಿಯಿಂದ ಸಿದ್ದರಾಮಯ್ಯ ರಸ್ತೆ ಮೂಲಕ ಹುಬ್ಬಳಿಗೆ ಪ್ರಯಾಣಿಸಲಿದ್ದು, ಹುಬ್ಬಳ್ಳಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications