ಆಪ್ತನನ್ನು ಮನೆಗೆ ಬಿಡಲು ಹೋಗಿ ಸಾವಿನ ಮನೆ ಸೇರಿದರೆ ಸಿದ್ದು ನ್ಯಾಮಗೌಡ?
Recommended Video

ಬಾಗಲಕೋಟೆ, ಮೇ. 28 : ರೈತರಿಗಾಗಿ ಬ್ಯಾರೇಜ್ ಕಟ್ಟಿ ದೇಶದ ಗಮನ ಸೆಳೆದಿದ್ದ, ಈ ಭಾಗದಲ್ಲಿ ಬ್ಯಾರೇಜ್ ಹಿರೋ ಎಂದೇ ಖ್ಯಾತಿಯಾಗಿದ್ದ ಜಮಖಂಡಿ ಮತಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡರು ಇಂದು ಬೆಳಗಿನ ಜಾವ ಕಾರು ಅಪಘಾತದಲ್ಲಿ ಸಾವನ್ನಪ್ಪಿದರು.
ಆದರೆ ಅವರು ಸಾವನ್ನಪ್ಪಿದ ರೀತಿ ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ, ಅಷ್ಟೇ ಏಕೆ ಇಡೀ ಜಮಖಂಡಿ ಕ್ಷೇತ್ರದ ಮತದಾರರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.
ಬಹುಶಃ ಅವರು ತಮ್ಮ ಆಪ್ತ ಡಾ.ಅಬ್ದುಲ್ ರಶೀದ್ ಸಾಲಾರ (73) ಅವರನ್ನು ಬಾಗಲಕೋಟೆಗೆ ಬಿಡದೆ, ನೇರವಾಗಿ ಜಮಖಂಡಿಗೆ ಹೋಗಿದ್ದರೆ ಈ ಅವಘಡ ಸಂಭವಿಸುತ್ತಿರಲಿಲ್ಲ ಅನಿಸುತ್ತದೆ.

ನೋಡಿ, ವಿಧಿ ಬರಹ ಅನ್ನುವುದು ಇದಕ್ಕೇ ಇರಬೇಕು. ಸಿದ್ದು ನ್ಯಾಮಗೌಡ ಅವರಿಗೆ ಬಹಳ ಆಪ್ತರಾಗಿರುವ ಬಾಗಲಕೋಟೆ ನಿವಾಸಿ ಸಾಲಾರ ಅವರನ್ನು ಬಾಗಲಕೋಟೆಗೆ ಬಿಟ್ಟು ನಂತರ ಜಮಖಂಡಿಗೆ ಹೋಗುವುದಾಗಿ ಮೊದಲೇ ಯೋಜನೆ ಹಾಕಿಕೊಂಡಿದ್ದ ಅವರಿಗೆ ತಾಲೂಕಿನ ತುಳಸಿಗೇರಿ ಸಮೀಪ ಜವರಾಯ ಕಾದು ಕೂತಿದ್ದ ಎಂಬ ಚಿಕ್ಕ ಸುಳಿವು ಇರಲಿಲ್ಲ.
ಲೋಕಾಪುರ ಮಾರ್ಗವಾಗಿ ಬಾಗಲಕೋಟೆಗೆ ಹೋಗುವ ಪ್ಲಾನ್ ಬದಲಾಗಿದ್ದರೆ ಅವರು ಸಾವಿನ ದವಡೆಯಿಂದ ಪಾರಾಗಿರುತ್ತಿದ್ದರೇನೋ?
ಆದರೆ ಬಾಗಲಕೋಟೆಗೆ ಬರುವ ವೇಳೆ ತುಳಸಿಗೇರಿ ಗ್ರಾಮದ ಬಳಿ ಎದುರಿನಿಂದ ಬರುತ್ತಿದ್ದ ಲಾರಿ ತಪ್ಪಿಸಲು ಹೋಗಿ ಕಾರು ತಡೆಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದು ದೊಡ್ಡ ಅನಾಹುತವೇ ಸಂಭವಿಸಿದೆ.
ಅವರ ಆಪ್ತ ಅಬ್ದುಲ್ ರಶೀದ್ ಸಾಲಾರ ಅವರು ಈ ಅಪಘಾತದಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೇ ಹೇಳುವ ಪ್ರಕಾರ ಸಿದ್ದು ನ್ಯಾಮಗೌಡ ಅವರು ಬದುಕಿದ್ದರೆ ಸಚಿವ ಸ್ಥಾನ ಸಿಗುತ್ತಿದ್ದದ್ದು ಗ್ಯಾರಂಟಿ.
ಕಾಂಗ್ರೆಸ್ ಹೈಕಮಾಂಡ್ ಗುಲಾಮ್ ನಬಿ ಆಜಾದ್ ಅವರನ್ನು ನ್ಯಾಮಗೌಡ ಮತ್ತು ಆಪ್ತರು ಭೇಟಿ ಮಾಡಿದಾಗ ಸಚಿವ ಸ್ಥಾನದ ಭರವಸೆ ನೀಡಿದ್ದರಂತೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications