ನಾಗನೂರು ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಾಳೆ ಸಿದ್ದು ನ್ಯಾಮಗೌಡ ಅಂತ್ಯಕ್ರಿಯೆ
ಜಮಖಂಡಿ, ಮೇ 28 : ರೈತರಿಗಾಗಿ ಬ್ಯಾರೇಜ್ ಕಟ್ಟಿ ದೇಶದಲ್ಲಿಯೇ ಗಮನ ಸೆಳೆದಿದ್ದ, 'ಬ್ಯಾರೇಜ್ ಹಿರೋ' ಎಂದು ಈ ಭಾಗದಲ್ಲಿ ಖ್ಯಾತಿಯಾಗಿದ್ದ ಜಮಖಂಡಿ ಮತಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡರು ಇಂದು ಬೆಳಗಿನ ಜಾವ ಕಾರು ಅಪಘಾತದಲ್ಲಿ ಸಾವನ್ನಪ್ಪಿದರು.
ಸಿದ್ದು ನ್ಯಾಮಗೌಡರಿಗೆ ಆನಂದ ನ್ಯಾಮಗೌಡ, ಬಸವರಾಜ ನ್ಯಾಮಗೌಡ ಎಂಬ ಇಬ್ಬರು ಪುತ್ರರು. ಶ್ವೇತಾ , ಸುಜಾತಾ, ಶೋಭಾ ಎಂಬ ಮೂವರು ಪುತ್ರಿಯರು ಇದ್ದಾರೆ. ಓರ್ವ ಪುತ್ರಿ ಸಿಂಗಾಪುರದಲ್ಲಿದ್ದಾರೆ. ಇನ್ನಿಬ್ಬರು ಅಮೆರಿಕಾದಲ್ಲಿ ನೆಲೆಸಿದ್ದಾರೆ.
ಇದೀಗ ವಿದೇಶದಿಂದ ಪುತ್ರಿಯರು, ಅಳಿಯಂದಿರು ಜಮಖಂಡಿಗೆ ಆಗಮಿಸುತ್ತಿದ್ದಾರೆ.
ಕಾರು ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಶಾಸಕರ ಕುಟುಂಬಸ್ಥರು, ಸಮಾಜದ ಮುಖಂಡರು ತಿಳಿಸಿದ್ದಾರೆ.

ಸಿದ್ದು ನ್ಯಾಮಗೌಡ ಒಡೆತನದ ಜಮಖಂಡಿ ತಾಲೂಕಿನ ನಾಗನೂರು ಗ್ರಾಮದಲ್ಲಿರುವ ಶುಗರ್ಸ್ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಾಳೆ ಬೆಳಗ್ಗೆ 9 ಗಂಟೆವರೆಗೂ ತಾಲೂಕು ಕ್ರೀಡಾಂಗಣದಲ್ಲಿ ಸಿದ್ದು ನ್ಯಾಮಗೌಡ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.
ನಂತರ ವೀರಶೈವ ಲಿಂಗಾಯತ ಪದ್ಧತಿಯಂತೆ ಅಂತ್ಯಕ್ರಿಯೆ ನಡೆಯುವುದು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications