ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಗನೂರು ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಾಳೆ ಸಿದ್ದು ನ್ಯಾಮಗೌಡ ಅಂತ್ಯಕ್ರಿಯೆ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಜಮಖಂಡಿ, ಮೇ 28 : ರೈತರಿಗಾಗಿ ಬ್ಯಾರೇಜ್ ಕಟ್ಟಿ ದೇಶದಲ್ಲಿಯೇ ಗಮನ ಸೆಳೆದಿದ್ದ, 'ಬ್ಯಾರೇಜ್ ಹಿರೋ' ಎಂದು ಈ ಭಾಗದಲ್ಲಿ ಖ್ಯಾತಿಯಾಗಿದ್ದ ಜಮಖಂಡಿ‌ ಮತಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡರು ಇಂದು ಬೆಳಗಿನ ಜಾವ ಕಾರು ಅಪಘಾತದಲ್ಲಿ ಸಾವನ್ನಪ್ಪಿದರು.

ಸಿದ್ದು ನ್ಯಾಮಗೌಡರಿಗೆ ಆನಂದ ನ್ಯಾಮಗೌಡ, ಬಸವರಾಜ ನ್ಯಾಮಗೌಡ ಎಂಬ ಇಬ್ಬರು ಪುತ್ರರು. ಶ್ವೇತಾ , ಸುಜಾತಾ, ಶೋಭಾ ಎಂಬ ಮೂವರು ಪುತ್ರಿಯರು ಇದ್ದಾರೆ. ಓರ್ವ ಪುತ್ರಿ ಸಿಂಗಾಪುರದಲ್ಲಿದ್ದಾರೆ. ಇನ್ನಿಬ್ಬರು ಅಮೆರಿಕಾದಲ್ಲಿ ನೆಲೆಸಿದ್ದಾರೆ.

ರಾಮಕೃಷ್ಣ ಹೆಗಡೆ ಅವರನ್ನೇ ಮಣ್ಣು ಮಕ್ಕಿಸಿದ್ದ ಸಿದ್ದು ನ್ಯಾಮಗೌಡ ರಾಮಕೃಷ್ಣ ಹೆಗಡೆ ಅವರನ್ನೇ ಮಣ್ಣು ಮಕ್ಕಿಸಿದ್ದ ಸಿದ್ದು ನ್ಯಾಮಗೌಡ

ಇದೀಗ ವಿದೇಶದಿಂದ ಪುತ್ರಿಯರು, ಅಳಿಯಂದಿರು ಜಮಖಂಡಿಗೆ ಆಗಮಿಸುತ್ತಿದ್ದಾರೆ.

ರಸ್ತೆ ಅಪಘಾತದಲ್ಲಿ ಜಮಖಂಡಿ ಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡ ಮರಣರಸ್ತೆ ಅಪಘಾತದಲ್ಲಿ ಜಮಖಂಡಿ ಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡ ಮರಣ

ಕಾರು ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಶಾಸಕರ ಕುಟುಂಬಸ್ಥರು, ಸಮಾಜದ ಮುಖಂಡರು ತಿಳಿಸಿದ್ದಾರೆ.

Siddu B Nyamagoudas funeral, will be held tomorrow at 10 am

ಸಿದ್ದು ನ್ಯಾಮಗೌಡ ಒಡೆತನದ ಜಮಖಂಡಿ ತಾಲೂಕಿನ ನಾಗನೂರು ಗ್ರಾಮದಲ್ಲಿರುವ ಶುಗರ್ಸ್ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಜನಮೆಚ್ಚಿದ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡರಿಗೆ ಭಾವುಕ ಶ್ರದ್ಧಾಂಜಲಿ ಜನಮೆಚ್ಚಿದ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡರಿಗೆ ಭಾವುಕ ಶ್ರದ್ಧಾಂಜಲಿ

ನಾಳೆ ಬೆಳಗ್ಗೆ 9 ಗಂಟೆವರೆಗೂ ತಾಲೂಕು ಕ್ರೀಡಾಂಗಣದಲ್ಲಿ ಸಿದ್ದು ನ್ಯಾಮಗೌಡ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.

ನಂತರ ವೀರಶೈವ ಲಿಂಗಾಯತ ಪದ್ಧತಿಯಂತೆ ಅಂತ್ಯಕ್ರಿಯೆ ನಡೆಯುವುದು.

English summary
Former Union Minister and newly-elected Karnataka Congress MLA Siddu B Nyamagouda passed away in a road accident in the wee hours on Monday.Community leaders said Siddu B Nyamagouda's funeral, will be held tomorrow at 10 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X