ಮಾಜಿ ಸಿಎಂ ಒಬ್ರು ವಯನಾಡಿಗೆ ಹೋಗ್ತಿರೋದು ಸತ್ಯ: ರಾಜಶೇಖರ್ ಮುಲಾಲಿ ಸ್ಪೋಟಕ ಹೇಳಿಕೆ
ಬಾಗಲಕೋಟೆ, ಮಾರ್ಚ್ 7: ಮಾಜಿ ಮುಖ್ಯಮಂತ್ರಿಯೊಬ್ಬರು ವಯನಾಡಿಗೆ ಹೋಗಿ ಬರುತ್ತಿರೋದು ಸತ್ಯ, ನನಗೆ ಖಚಿತ ಮಾಹಿತಿಯಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಬಾಗಲಕೋಟೆಯಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ರಾಜಶೇಖರ್ ಮುಲಾಲಿ, ನನ್ನ ಹೇಳಿಕೆಗೆ ಅವರೊಬ್ಬರೇ ರಿಯಾಕ್ಟ್ ಮಾಡಿದ್ದಾರೆ. ಏಳು ಜನ ಮಾಜಿ ಸಿಎಂ ಬದುಕಿದ್ದಾರೆ, ಅವರ್ಯಾರೂ ರಿಯಾಕ್ಟ್ ಮಾಡಿಲ್ಲ. ಕುಂಬಳಕಾಯಿ ಕಳ್ಳ ಅಂದ್ರೆ, ಇವರು ಯಾಕೆ ಹೆಗಲು ಮುಟ್ಟಿಕೊಂಡು ನೋಡಿಕೊಳ್ಳಬೇಕು? ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೆಸರು ಹೇಳದೆ ಪ್ರಶ್ನಿಸಿದರು.

ಏರೋಪ್ಲೇನ್ ಏರಿಸಿ ಅಂದರೆ ಏನರ್ಥ
ಓರ್ವ ಮಾಜಿ ಸಿಎಂ ಮಾತನಾಡುವಾಗ ಗೌರವದಿಂದ ಮಾತನಾಡಬೇಕು, ಒದ್ದು ಒಳಗೆ ಹಾಕಿ, ಏರೋಪ್ಲೇನ್ ಏರಿಸಿ ಅಂದರೆ ಏನರ್ಥ? ಹೋರಾಟಗಾರರ ಬಗ್ಗೆ ಮಾತನಾಡೋವಾಗ ಸ್ವಲ್ಪ ಬಾಯಿ ಬಿಗಿ ಹಿಡಿದಿಟ್ಟು ಮಾತನಾಡಬೇಕು. ಇದು ಅವರ ಸಂಸ್ಕಾರ ತೋರಿಸುತ್ತದೆ ಎಂದು ಪ್ರತಿಕ್ರಿಯಿಸಿದರು.
ನಮ್ಮದೆಯಾದ ಸ್ವಚ್ಛ ಇತಿಹಾಸವಿದೆ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ ಎಂದರೆ ತಿಳಿದುಕೊಂಡು ಮಾತನಾಡ್ಬೇಕು. ಎಚ್ಡಿಕೆ ಸಿಡಿ ಇದೆಯಾ? ಎನ್ನುವ ಮಾಧ್ಯಮದ ಪ್ರಶ್ನೆಗೆ ರಾಜಶೇಖರ್ ಮುಲಾಲಿ ಅವರು ಗೊತ್ತಿಲ್ಲವೆಂದರು.

ನನ್ನ ಬಗ್ಗೆ ಅವರಿಗೆ ಗೊತ್ತಿಲ್ಲ
ಸಿಡಿ ವಿಚಾರವಾಗಿ ನೋಟಿಸ್ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ರಾಜಶೇಖರ್ ಮುಲಾಲಿ, ಶನಿವಾರ ರಾತ್ರಿ ಬೀದರ್ ನಿಂದ ಬರಬೇಕಾದರೆ ಪೊಲೀಸ್ ಅಧಿಕಾರಿಗಳು ಫೋನ್ ಮಾಡಿದ್ದರು, ನನ್ನ ವಾಟ್ಸಾಪ್ಗೆ ನೋಟಿಸ್ ಕಳಿಸಿದ್ದಾರೆ. ಇಂದು ನನ್ನ ಫೇಸ್ ಬುಕ್ಗೂ ನಾನೇ ಶೇರ್ ಮಾಡಿದ್ದೇನೆ. ಸಹೋದರಿ ಇಂದಿರಾ ಅನ್ನುವವರು ದೂರು ಕೊಟ್ಟಿದ್ದಾರಂತೆ. ಅವರಿಗೂ ಈ ಪ್ರಕರಣಕ್ಕೂ ಏನು ಸಂಬಂಧ ಇದೆಯೋ ನನಗೆ ಗೊತ್ತಿಲ್ಲ. ಅವರ ಬಗ್ಗೆ ನನಗೆ ಗೊತ್ತಿಲ್ಲ, ನನ್ನ ಬಗ್ಗೆ ಅವರಿಗೆ ಗೊತ್ತಿಲ್ಲ. ನಾಳೆ ವಿಚಾರಣೆಗೆ ಹಾಜರಾಗಲು ನಮ್ಮ ವಕೀಲರಿಗೆ ಹೇಳಿದ್ದೀನಿ. ಅವರ ಜೊತೆ ಚರ್ಚೆ ಮಾಡಿ ನಂತರ ಹಾಜರಾಗುವ ಬಗ್ಗೆ ಹೇಳುತ್ತೇನೆ ಎಂದು ಮುಲಾಲಿ ತಿಳಿಸಿದರು.

ನಕಲಿ ಸಂತ್ರಸ್ಥರಿಗೆ ನ್ಯಾಯ ಸಿಗಲ್ಲ
ಸಿಡಿ ಕೇಸ್ ನಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗುತ್ತಾ ಎನ್ನುವ ವಿಚಾರವಾಗಿ, ಶೇಕಡಾ ನೂರರಷ್ಟು ನಿಜವಾದ ಸಂತ್ರಸ್ಥರಿದ್ದರೆ ನ್ಯಾಯ ಸಿಗುತ್ತದೆ. ನಕಲಿ ಸಂತ್ರಸ್ಥರಿದ್ದರೆ ಸಿಗುವುದಿಲ್ಲ. ಈ ಹಿಂದೆ ಮಾಜಿ ಸಚಿವರೊಬ್ಬರ ಸಿಡಿ ಬಿಡುಗಡೆ, ನ್ಯಾಯ ಸಿಕ್ಕ ವಿಚಾರ ನನಗೆ ಗೊತ್ತಿಲ್ಲ. ಈ ಹಿಂದೆ ಮಾಜಿ ಸಚಿವರ ಸಿಡಿ ಬಿಡುಗಡೆ ನಾನು ಮಾಡಿಲ್ಲ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಷ್ಟೇ ಮಾಡಿದ್ದೆ. ಅದು ನನಗೆ ಸಂಬಂಧಿಸಿದಲ್ಲ, ಅದು ಮುಗಿದು ಹೋದ ಪ್ರಕರಣವೆಂದು ಹೇಳಿದರು.

ತನಿಖೆ ಮಾಡಿ ಕ್ಲೀನ್ ಚಿಟ್ ಕೊಟ್ಟಿದ್ದಾರೆ
ಸಿಐಡಿಯವರು ತನಿಖೆ ಮಾಡಿದ್ದಾರೆ, ಒಂದು ವರ್ಷ ತನಿಖೆ ಮಾಡಿ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ಆಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿಯೂ ನನಗೆ ಗೊತ್ತಿಲ್ಲ, ಕುಮಾರಸ್ವಾಮಿ ಅವರನ್ನೇ ಕೇಳಬೇಕು. ರಾಜಶೇಖರ್ ಮುಲಾಲಿ ಬಗ್ಗೆ ಆ ರೀತಿ ಮಾತನಾಡೋದು ಅಕ್ಷಮ್ಯ ಅಪರಾಧ. ಬೇರೆ ಹೋರಾಟಗಾರರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಯಾವ ಆಸೆ, ಆಮಿಷಗಳಿಗೆ ಬಲಿಯಾಗಲ್ಲ. ಹೆದರಿಕೆ, ಬೆದರಿಕೆಗಳಿಗೆ ಜಗ್ಗುವುದಿಲ್ಲ. ಆಮ್ ನಾಟ್ ಫಾರ್ ಸೇಲ್ ಎಂದು ಬಾಗಲಕೋಟೆಯಲ್ಲಿ ಸಾಮಾಜಿಕ ಕಾರ್ಯರ್ತ ರಾಜಶೇಖರ್ ಮುಲಾಲಿ ಹೇಳಿದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications