ಜಮಖಂಡಿಗೆ ರಜೆ ಕಳೆಯಲು ಬಂದಿದ್ದ ಯೋಧ ಅಪಘಾತದಲ್ಲಿ ಸಾವು
ಜಮಖಂಡಿ, ಜುಲೈ 16: ರಜೆ ಕಳೆಯಲೆಂದು ಊರಿಗೆ ಬಂದಿದ್ದ ಯೋಧರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಕಾರು ಮತ್ತು ಬೈಕ್ ನಡುವೆ ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಯೋಧ ಸಾವನ್ನಪ್ಪಿದ್ದರೆ, ಯೋಧನ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಮಖಂಡಿ ತಾಲ್ಲೂಕಿನ ಮಧರಕಂಡಿ ಗ್ರಾಮದ ಯೋಧ ನೀಲಕಂಠ ಘಟನಟ್ಟಿ (29) ಅಪಘಾತದಲ್ಲಿ ಮೃತಪಟ್ಟವರು. ನೀಲಕಂಠ ಮಧ್ಯ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜಮ್ಮು ಕಾಶ್ಮೀರಕ್ಕೆ ವರ್ಗಾವಣೆಯಾಗಿತ್ತು.

ಈ ಹಿನ್ನೆಲೆಯಲ್ಲಿ ತಿಂಗಳ ಅವಧಿ ರಜೆ ದೊರೆತಿದ್ದು, ರಜೆ ಕಳೆಯಲು ಗ್ರಾಮಕ್ಕೆ ಬಂದಿದ್ದರು. ತನ್ನ ಹೆಂಡತಿಯೊಂದಿಗೆ ಆಕೆಯ ತವರು ಮನೆ ಮಹಾರಾಷ್ಟ್ರದ ಹುಲಜಂತಿಗೆ ಹೋಗಿ ಬರುವಾಗ ಅಪಘಾತ ನಡೆದಿದೆ.












Click it and Unblock the Notifications