ಯುದ್ಧದಲ್ಲಿ ಉಪಚರಿಸಿದ್ದ ನರ್ಸ್ ಗಾಗಿ 20 ವರ್ಷ ಕಾದ ಯೋಧ
ಬಾಗಲಕೋಟೆ, ಜುಲೈ 27: ಕಾರ್ಗಿಲ್ ಅಂದ ತಕ್ಷಣ ನೆನಪಾಗುವುದು ನಮ್ಮ ವೀರಯೋಧರ ಹೋರಾಟ, ದೇಶಾಭಿಮಾನ. ಇದೇ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ತನ್ನ ಎರಡು ಕೈ, ಒಂದು ಕಾಲು ಕಳೆದುಕೊಂಡವರು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಹುಲಸಗೇರಿ ಗ್ರಾಮದ ವೀರಯೋಧ ರಂಗಪ್ಪ ಆಲೂರ. ಆ ಯುದ್ಧದ ನೆನಪುಗಳೊಂದಿಗೆ ಇಂದಿಗೂ ಯುವಜನತೆಯಲ್ಲಿ ದೇಶಾಭಿಮಾನ ಬಿತ್ತುತ್ತಿರುವ ಇವರಿಗೆ, ಇರುವುದು ಒಂದೇ ಆಸೆ. ತಮ್ಮನ್ನು ಯುದ್ಧದಲ್ಲಿ ಗಂಭೀರ ಗಾಯಗೊಂಡಿದ್ದ ಸಂದರ್ಭ ಉಪಚರಿಸಿದ್ದ ನರ್ಸ್ ಅನ್ನು ನೋಡಬೇಕೆನ್ನುವುದು.
ರಂಗಪ್ಪ ಆಲೂರು 1993ರಲ್ಲಿ ಭಾರತೀಯ ಸೇನೆಗೆ ನೇಮಕಗೊಂಡಿದ್ದರು. ನೇಮಕಗೊಂಡ ಆರನೇ ವರ್ಷದಲ್ಲಿ ಶುರುವಾಯಿತು ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ 21 ದಿನಗಳ ಕಾಲ ಭಾಗಿಯಾಗಿದ್ದ ರಂಗಪ್ಪ ಅವರು 21ನೇ ದಿನ ಶತ್ರುಗಳ ಮಿಸೈಲ್ ಗೆ ತುತ್ತಾಗಿ ತಮ್ಮ ಎರಡು ಕೈ ಹಾಗೂ ಒಂದು ಕಾಲನ್ನು ಕಳೆದುಕೊಂಡರು. ಆ ಸಮಯದಲ್ಲಿ ದೇಹದಲ್ಲಿ ಒಟ್ಟು 28 ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಎರಡು ವರ್ಷಗಳ ಕಾಲ ಚಿಕಿತ್ಸೆಗೆ ಒಳಗಾಗಿದ್ದರು.
ಆ ಸಮಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎನ್ನುವ ರಂಗಪ್ಪನವರಿಗೆ ಈಗಲೂ ಕಾಡುವುದು ಆ ವೇಳೆಯಲ್ಲಿ ಇವರನ್ನು ಆರೈಕೆ ಮಾಡಿದ್ದ ಕನ್ನಡತಿ ಸ್ಟಾಫ್ ನರ್ಸ್.

ಚಂಡಿಗಡದ ಮಿಲಿಟರಿ ಆಸ್ಪತ್ರೆಯಲ್ಲಿ ರಂಗಪ್ಪ ಅವರನ್ನು ಎರಡು ವರ್ಷ ಆರೈಕೆ ಮಾಡಿದ ಗೀತಾ ಎಂಬ ನರ್ಸ್ ಗಾಗಿ ಇಪ್ಪತ್ತು ವರ್ಷಗಳಿಂದಲೂ ಕಾಯುತ್ತಿದ್ದರು ರಂಗಪ್ಪ. ಕಾರ್ಗಿಲ್ ದಿವಸ ಬಂದಾಗಲೆಲ್ಲಾ ಯುದ್ಧದೊಂದಿಗೆ, ತಮಗೆ ಮರುಜನ್ಮ ನೀಡಿದ್ದ ಈ ನರ್ಸ್ ಅನ್ನೂ ನೆನಪಿಸಿಕೊಳ್ಳುತ್ತಾರೆ. ಅವರನ್ನು ಭೇಟಿಯಾಗಬೇಕೆಂದು ರಂಗಪ್ಪ ಇಷ್ಟು ವರ್ಷಗಳಿಂದಲೂ ಕಾದಿದ್ದು, ಇದೀಗ ಕಷ್ಟಪಟ್ಟು ಅವರ ಮೊಬೈಲ್ ನಂಬರನ್ನು ದಕ್ಕಿಸಿಕೊಂಡಿದ್ದಾರೆ.
"ಅವರೇ ನನ್ನ ತಾಯಿ. ಅವರೇ ನನ್ನ ಪಾಲಿನ ಭಾರತಮಾತೆ. ನನಗೆ ಮರುಜನ್ಮ ನೀಡಿದವರು ಅವರು. ಇಷ್ಟು ವರ್ಷಗಳಿಂದ ಅವರನ್ನು ಹುಡುಕಲು ಪ್ರಯತ್ನ ಪಟ್ಟಿದ್ದು, ಅವರ ಮೊಬೈಲ್ ನಂಬರ್ ಕೊನೆಗೂ ಸಿಕ್ಕಿತು. ಅವರನ್ನು ಭೇಟಿಯಾಗಲು ಇದೇ 29ರಂದು ಹೊರಟಿದ್ದೇನೆ" ಎಂದು ಸಂತೋಷದಿಂದ ಹೇಳಿಕೊಳ್ಳುತ್ತಾರೆ.
ಸಮಯ ಸಿಕ್ಕಾಗಲೆಲ್ಲ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಕಾರ್ಗಿಲ್ ಯುದ್ಧದ ಬಗ್ಗೆ ಅನುಭವ ಹಂಚಿಕೊಳ್ಳುತ್ತಾರೆ. ಸೇನೆ ಸೇರುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications