ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿದ್ದೆಗೆ ಜಾರಿದ ಚಾಲಕ: ಮುಧೋಳದಲ್ಲಿ ಮೂವರು ಸ್ಥಳದಲ್ಲೇ ಸಾವು

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಸೆಪ್ಟೆಂಬರ್.08: ಟ್ರಕ್, ಓಮಿನಿ ವ್ಯಾನ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವ್ಯಾನ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು ಶನಿವಾರ ನಡೆದಿದೆ.

ದಾವಣಗೆರೆಯಲ್ಲಿ ಭೀಕರ ಅಪಘಾತ ಬೆಂಗಳೂರಿನ ನಾಲ್ವರ ಸಾವುದಾವಣಗೆರೆಯಲ್ಲಿ ಭೀಕರ ಅಪಘಾತ ಬೆಂಗಳೂರಿನ ನಾಲ್ವರ ಸಾವು

ಓಮಿನಿ ವ್ಯಾನ್ ಗೋವಾದಿಂದ ವಿಜಯಪುರಕ್ಕೆ ಹೊರಟಿತ್ತು. ಈ ಸಮಯದಲ್ಲಿ ವ್ಯಾನ್ ಚಾಲಕ ನಿದ್ದೆಗೆ ಜಾರಿದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತರು ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದ ಕಾಶಿಂಸಾಬ ಮುಜಾವರ(42), ಅಫ್ರಿನಾ ಕಾಶಿಸಾಬ ಮುಜಾವರ (35), ಶಬಾನ ನೂರ ಅಹಮದ್(38) ಎಂದು ಗುರುತಿಸಲಾಗಿದೆ.

 ಕಾರು-ಕ್ಯಾಂಟರ್ ಡಿಕ್ಕಿ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಸಾವು ಕಾರು-ಕ್ಯಾಂಟರ್ ಡಿಕ್ಕಿ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಸಾವು

ಇವರೆಲ್ಲಾ ದುಡಿಯಲು ಗೋವಾಕ್ಕೆ ಹೋಗಿದ್ದರು. ಮರಳಿ ಊರಿಗೆ ಬರುವಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ರಿಷ್ಯಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

Three people were died in a van accident

ದಾವಣಗೆರೆಯಲ್ಲಿ ಭೀಕರ ಅಪಘಾತ
ಮತ್ತೊಂದು ಘಟನೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಬೆಂಗಳೂರಿನ ಯುವಕರು ದಾವಣಗೆರೆ ಸಮೀಪ ಅಪಘಾತಕ್ಕೆ ಈಡಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಆರು ಜನ ಬೆಂಗಳೂರಿನ ಯುವಕರು ಗೋಕರ್ಣಕ್ಕೆ ಪ್ರವಾಸಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದರು.

 ಕೊಲ್ಕತ್ತದಲ್ಲಿ ಮೇಲ್ಸೇತುವೆ ಕುಸಿತ, ಐದು ಜನ ಸಾವು, ಹಲವರಿಗೆ ಗಾಯ ಕೊಲ್ಕತ್ತದಲ್ಲಿ ಮೇಲ್ಸೇತುವೆ ಕುಸಿತ, ಐದು ಜನ ಸಾವು, ಹಲವರಿಗೆ ಗಾಯ

ಬೆಳಗ್ಗೆ ಸಮಯ ಹರಿಹರ ತಾಲ್ಲೂಕಿನ ಹನಗವಾಡಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃಪಟ್ಟಿದ್ದರೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಮೃತರೆಲ್ಲರೂ ಬೆಂಗಳೂರಿನ ಚಾಮರಾಜಪೇಟೆಯ ಡಿಟಿಡಿಸಿ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಮೃತರನ್ನು ವಿನಯ್ (27) , ಅಜಯ್ (32) , ವಿನಯ್ ಕುಮಾರ್ (30) ಹಾಗೂ ಸಿದ್ದಪ್ಪ (28) ಎಂದು ಗುರುತಿಸಲಾಗಿದೆ.

English summary
Three people were died in a van accident. Incident took place on Saturday in the city of Mudhol in Bagalkot district. Deceased have been identified as Kalakeri village in Vijayapur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X