ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಬಾಗಲಕೋಟೆ, ಅಕ್ಟೋಬರ್ 30: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲು ಗ್ರಾಮದಲ್ಲಿ ನಡೆದಿದೆ.

ಬಸವರಾಜ ಮಹಾಂತಯ್ಯ ಹಿರೇಮಠ (12) ಮತ್ತು ಪ್ರವೀಣ ರೋಣದ (12) ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರು. ಈ ಇಬ್ಬರು ಬಾಲಕರು ಬಾಚಿನಗುಡ್ಡ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅ.29ರ ಗುರುವಾರ ಸಂಜೆ ನದಿಗೆ ಈಜಲು ಹೋಗಿದ್ದ ಈ ಬಾಲಕರು ಮನೆಗೆ ವಾಪಸ್​ ಬಂದಿರಲಿಲ್ಲ. ಕೆಲ ಹೊತ್ತಿನ ಬಳಿಕ ಮನೆಯವರಿಗೆ ಅನುಮಾನ ಬಂದು ಇವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ನಂತರ ನದಿಯ ಬಳಿ ತೆರಳಿ ನೋಡಿದಾಗ, ಬಾಲಕರು ಮೃತಪಟ್ಟಿರುವ ಅನುಮಾನ ವ್ಯಕ್ತಗೊಂಡಿತ್ತು.

Bagalkot: Two Boys Dies By Drowning In Malaprabha River

ಹೀಗಾಗಿ ಇಂದು ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಬಾಲಕರ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+