ಪ್ರಧಾನಿ ಮೋದಿ ಗಡ್ಡ, ಕೇಶ ಬಿಟ್ಟ ಹಿಂದಿನ ಕಾರಣ ಬಹಿರಂಗ ಪಡಿಸಿದ ಪೇಜಾವರ ಶ್ರೀ
ಬಾಗಲಕೋಟೆ, ಡಿ 27: ಗಡ್ಡ, ಕೂದಲನ್ನು ಯಾವಾಗಲೂ ಟ್ರಿಮ್ ಮಾಡಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಅದನ್ನು ಕಟ್ ಮಾಡಿಕೊಳ್ಳುವ ಗೋಜಿಗೂ ಹೋಗಿಲ್ಲ. ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ನಂತರ ಮೋದಿಯವರಲ್ಲಿ ಈ ಬದಲಾವಣೆ ಕಾಣಿಸಿಕೊಂಡಿದೆ.
ಮೋದಿ ಯಾವ ಕಾರಣಕ್ಕಾಗಿ ಗಡ್ಡ ಬಿಟ್ಟಿರಬಹುದು ಎನ್ನುವುದು ಸಾರ್ವಜನಿಕರಲ್ಲಿ ಇರುವ ಕುತೂಹಲದ ವಿಚಾರ. ಈ ವಿಚಾರದ ಬಗ್ಗೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ಮೋದಿಯವರು ಗಡ್ಡ ಬೆಳೆಯಲು ಈ ಕಾರಣವೂ ಇರಬಹುದು ಎಂದು ಅಯೋಧ್ಯೆ ವಿಚಾರವನ್ನು ತೆಗೆದಿದ್ದಾರೆ.
"ಸಾಮಾನ್ಯವಾಗಿ ದೀಕ್ಷಾಬದ್ದರಾಗುವುದು ಎಂದಿದೆ. ಮೋದಿಯವರು ಅಯೋಧ್ಯೆ ರಾಮಮಂದಿರಕ್ಕೆ ಖುದ್ದಾಗಿ ಶಿಲಾನ್ಯಾಸ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣವಾಗುವವರೆಗೆ ಮೋದಿಯವರು ಕೇಶ ತೆಗೆಯುವುದಿಲ್ಲ ಎಂದು ಸಂಕಲ್ಪ ಮಾಡಿರಬಹುದು"ಎಂದು ಪೇಜಾವರ ಶ್ರೀಗಳು ಹೇಳಿದರು.

"ನನಗೆ ಅನಿಸಿದ ವಿಚಾರವನ್ನು ನಾನು ಹೇಳಿದ್ದೇನೆ, ಅವರು ನನಗೆ ಹೇಳಿದ್ದಲ್ಲ. ರಾಮಮಂದಿರ ನಿರ್ಮಾಣದ ನೈತಿಕವಾಗಿ ಜವಾಬ್ದಾರಿಯನ್ನು ಅವರು ಹೊತ್ತಿರಬಹುದು. ಹಾಗಾಗಿ, ಭವ್ಯ ಮಂದಿರ ನಿರ್ಮಾಣವಾಗುವವರೆಗೂ ಕೇಶ ಗಡ್ಡ ತೆಗೆಯುವುದಿಲ್ಲ ಎಂದು ದೀಕ್ಷಾಬದ್ದರಾಗಿರಬಹುದು"ಎಂದು ವಿಶ್ವಪ್ರಸನ್ನ ತೀರ್ಥರು ಅಭಿಪ್ರಾಯ ಪಟ್ಟರು.
"ರಾಮಮಂದಿರ ನಿರ್ಮಾಣಕ್ಕೆ ಮೂರು ವರ್ಷ ತಗಲಬಹುದು. ಇದಕ್ಕೆ ಸುಮಾರು ಒಂದೂವರೆ ಸಾವಿರ ಕೋಟಿ ಅಂದಾಜು ಬಜೆಟ್ ಇದೆ. ವಿಶ್ವಹಿಂದೂ ಪರಿಷತ್ ಮುಂದಿನ ದಿನಗಳಲ್ಲಿ ದೇಣಿಗೆ ಸಂಗ್ರಹಣೆ ಆರಂಭಿಸಲಿದೆ"ಎಂದು ಅಯೋಧ್ಯ ಟ್ರಸ್ಟಿನ ಸದಸ್ಯರೂ ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
"ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು ರೈತರು ಎಂದು ನನಗನಿಸುವುದಿಲ್ಲ. ರೈತರ ಹೆಸರಿನಲ್ಲಿ ಮುಖವಾಡ ಹೊತ್ತವರು ಈ ರೀತಿ ಮಾಡುತ್ತಿದ್ದಾರೆ ಎನ್ನುವುದು ನಮ್ಮ ಅಭಿಪ್ರಾಯ" ಎಂದು ಪೇಜಾವರ ಶ್ರೀಗಳು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications