ಟಿಪ್ಪು ಜಯಂತಿ ಆಚರಿಸೋಕೆ ಬಿಡೋಲ್ಲ: ಪ್ರಮೋದ್ ಮುತಾಲಿಕ್
ಬಾಗಲಕೋಟೆ, ಅಕ್ಟೋಬರ್ 21: "ನವೆಂಬರ್ 10 ರಂದು ರಾಜ್ಯ ಸರ್ಕಾರ ಆಚರಣೆ ಮಾಡಲಿರುವ ಟಿಪ್ಪು ಜಯಂತಿ ಆಚರಣೆಗೆ ಬಿಡುವುದಿಲ್ಲ" ಎಂದು ಬಾಗಲಕೋಟೆಯಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಮುತಾಲಿಕ್, "ಟಿಪ್ಪು ಒಬ್ಬ ಹಿಂದೂ ವಿರೋಧಿಯಾಗಿದ್ದ. ಕನ್ನಡ ದ್ರೋಹಿಯಾಗಿದ್ದ ಇಂಥವನ ಜಯಂತಿ ಆಚರಣೆ ಮಾಡುತ್ತಿರುವುದು ಖಂಡನೀಯ. ಒಂದು ವೇಳೆ ಆಚರಣೆ ಮಾಡಿದ್ದೇ ಆದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಶ್ರೀರಾಮ ಸೇನೆಯ ವತಿಯಿಂದ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಟಿಪ್ಪು ಒಬ್ಬ ಮತಾಂಧನಾಗಿದ್ದ. 11,000 ಹಿಂದೂಗಳನ್ನು ಮತಾಂತರಗೊಳಿಸಿದ್ದ. 300 ದೇವಾಲಯಗಳನ್ನು ದ್ವಂಸಗೊಳಿಸಿದ್ದ ಟಿಪ್ಪು. ಇಂಥವನ ಜಯಂತಿ ಆಚರಣೆಗೆ ಬಿಡುವುದಿಲ್ಲ ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಮುಂದೊಂದು ದಿನ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಹೆಸರಿನ ನಾಮಫಲಕಗಳನ್ನು ಮತ್ತು ಸರ್ಕಲ್ ಗಳಿಗೆ, ರಸ್ತೆಗಳಿಗೆ ಇಟ್ಟಿರುವ ಎಲ್ಲಾ ಬೋರ್ಡ್ ಗಳನ್ನು ಕಿತ್ತು ಹಾಕಬೇಕು ಅಂತ ಬಿಜೆಪಿಗೆ ಆಗ್ರಹಿಸಿದ್ದಾರೆ.
ಸರ್ಕಾರ ಟಿಪ್ಪು ಜಯಂತಿಯನ್ನು ರಾಜಕೀಯ ಉದ್ದೇಶಕ್ಕೆ ಮಾತ್ರ ಆಚರಣೆ ಮಾಡುತ್ತಿದೆ. ಮುಸ್ಲಿಮರ ಓಟಿನ ಓಲೈಕೆಗಾಗಿ ಟಿಪ್ಪುವನ್ನ ವೈಭವೀಕರಣಗೊಳಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು. ಇನ್ನು ಬಿಜೆಪಿ ಸೇರುವ ತಮ್ಮ ಇಂಗಿತದ ವಿಚಾರವಾಗಿ ಮಾತನಾಡಿದ ಮುತಾಲಿಕ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಕ್ಕೂ ಹಿಂದೆ ಆರ್.ಎಸ್.ಎಸ್.ನಲ್ಲಿದ್ದ ಪ್ರಮೋದ್ ಮುತಾಲಿಕ್ ಕಾರಣವಾಗಿದ್ದ ಅನ್ನೋದು ಮನಗಾಣಬೇಕು. ಈಗ ಬಿಜೆಪಿಯವರಿಗೆ ಮುತಾಲಿಕ್ ನಂಥವರು ಬೇಕಾಗಿಲ್ಲ. ಎಸ್.ಎಂ ಕೃಷ್ಣ ನಂಥವರು, ಸಿಪಿ ಯೋಗೀಶ್ವರ ನಂಥವರು ಬೇಕಾಗಿದ್ದಾರೆ. ಅವರ ನಡುವಳಿಕೆಗಳಲ್ಲಿಯೇ ತೋರಿಸ್ತಿದೆ ಬಿಜೆಪಿಯವರ ಮನಸ್ಥಿತಿ ಎಂತಹದು ಎಂದು ಅಸಮಾಧಾನ ಹೊರಹಾಕಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications