ನಿಮಗೇಗೆ ಆ ಧರ್ಮದ ಮೇಲೆ ದ್ವೇಷ?: ಬಿಎಸ್ವೈ ವಿರುದ್ಧ ಸಿದ್ದು ಕಿಡಿ
ಬಾದಾಮಿ, ಡಿಸೆಂಬರ್ 6: ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ತಾಲ್ಲೂಕಿನ ಹೊಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, 'ಸಾಮ್ರಾಟ ಅಶೋಕನ ರೀತಿಯೇ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ಅರಸರು. ಟಿಪ್ಪು ಬ್ರಿಟಿಷರ ವಿರುದ್ಧ ನಾಲ್ಕು ಬಾರಿ ಯುದ್ಧ ಮಾಡಿದ್ದರು. ಅಂತಹವರ ಜಯಂತಿಯನ್ನೇ ನಿಲ್ಲಿಸಿಬಿಟ್ಟಿರಲ್ಲ ಯಡಿಯೂರಪ್ಪ. ಯಾಕ್ರೀ ನಿಮಗೆ ಆ ಧರ್ಮದ ಮೇಲೆ ದ್ವೇಷ. ಅವರು ಮನುಷ್ಯರಲ್ಲವಾ?' ಎಂದು ಪ್ರಶ್ನಿಸಿದರು.
'ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮಾಡಿದ್ದು ನಾನು. ಏನು ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮಾಡಿದ್ರಾ? ಕೆಂಪೇಗೌಡ ಜಯಂತಿ ಮಾಡಿದ್ದು ನಾನು. ದೇವೇಗೌಡ, ಕುಮಾರಸ್ವಾಮಿ ಮಾಡಿದ್ರಾ? ಹಾಗೆಯೇ ಟಿಪ್ಪು ಜಯಂತಿ ಮಾಡಿದ್ದೆ. ಆದರೆ ಯಡಿಯೂರಪ್ಪ ಬಂದು ಅದನ್ನು ನಿಲ್ಲಿಸಿಬಿಟ್ರು. ಆ ಸಮುದಾಯದವರು ಏನು ಮಾಡಿದ್ದಾರೆ ಪಾಪ' ಎಂದು ಕಿಡಿಕಾರಿದರು.
ಇದೆಲ್ಲವೂ ಬಿಜೆಪಿಯವರ ರಾಜಕೀಯ ಗಿಮಿಕ್. ಏನ್ಮಾಡೋದು ಆದರೂ ಜನರು ಅವರಿಗೆ ವೋಟ್ ಹಾಕ್ತಾರೆ. ನನಗೆ ಇದು ಅರ್ಥ ಆಗ್ತಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಐದು ತಿಂಗಳಾದರೂ ಮೂರು ಕಾಸಿನ ಕೆಲಸ ಮಾಡಿದ್ದಾರಾ? ಶಾಸಕರನ್ನು ದೊಡ್ಡು ಕೊಟ್ಟು ಖರೀದಿ ಮಾಡೋದು ಬಿಟ್ಟು ಬೇರೇನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇವರು ಪರ್ಮನೆಂಟ್ ಸಿಎಂ ಆಗಿರ್ತಾರಾ?
'ಸಿದ್ದರಾಮಯ್ಯ ಪರ್ಮನೆಂಟ್ ವಿರೋಧಪಕ್ಷದ ನಾಯಕ ಎಂದು ಯಡಿಯೂರಪ್ಪ ಹೇಳ್ತಾರೆ. ಇವರೇನು ಪರ್ಮನೆಂಟ್ ಸಿಎಂ ಆಗಿರ್ತಾರಾ? ಜನರು ಬುದ್ಧಿವಂತರಾಗಬೇಕು. ಇಲ್ಲದಿದ್ದರೆ ಇಂತಹವರ ಕೈಗೆ ಅಧಿಕಾರ ಸಿಕ್ಕಿಬಿಡುತ್ತದೆ' ಎಂದರು.

ನಾನು ಸಿಎಂ ಆಗುತ್ತೇನೆಂದು ಹೇಳಿಲ್ಲ
ನಾನೇ ಮುಂದಿನ ಸಿಎಂ ಆಗುತ್ತೇನೆ ಅಂತ ಹೇಳಿದ್ದೇನೆಂದು ಬಿಜೆಪಿಯವರು ನನ್ನ ವಿರುದ್ಧ ಸುಳ್ಳು ಹೇಳುತ್ತಿದ್ದಾರೆ. ಉಪಚುನಾವಣೆಯ ನಂತರ ಮುಖ್ಯಮಂತ್ರಿ ಆಗ್ತೇನೆ ಅಂತ ನಾನು ಎಲ್ಲೂ ಕೂಡ ಹೇಳಿಲ್ಲ. ಉಪಚುನಾವಣೆಯ ನಂತರ ಯಡಿಯೂರಪ್ಪ ರಾಜೀನಾಮೆ ಕೊಡಬೇಕಾಗುತ್ತದೆ ಎಂದಷ್ಟೇ ಹೇಳಿದ್ದು ಎಂದು ಹೇಳಿದರು.

ಕುರ್ಚಿಗೆ ಬಂದು ಕುಳಿತುಬಿಟ್ಟ ಗಿರಾಕಿ
ನಾನು ಅಧಿಕಾರದಲ್ಲಿದ್ದಾಗ ಎಲ್ಲಾ ಬಡವರಿಗೂ ಸಹಾಯ ಮಾಡಿದ್ದೆ. ಅನ್ನಭಾಗ್ಯ, ಕೃಷಿ ಭಾಗ್ಯ, ಸಾಲ ಮನ್ನಾ, ಕ್ಷೀರ ಧಾರೆ, ಶೂ ಭಾಗ್ಯ, ಶಾದಿ ಭಾಗ್ಯ ನೀಡಿದ್ದೆ. ಎಲ್ಲವನ್ನೂ ನಾನೇ ಮಾಡಿದ್ದು. ಇವನೇನು ಮಾಡಿದ್ದಾನೆ? ವೋಟ್ ಮಾತ್ರ ಬಿಜೆಪಿಗೆ ಹಾಕುತ್ತೀರಿ. ಇವ್ರೇನು (ಬಿಜೆಪಿ) 113 ಸೀಟು ಗೆದ್ದಿದ್ದರಾ? ಗೆದ್ದಿದ್ದು 104 ಸೀಟು ಮಾತ್ರ. ಆದರೂ ಸಿಎಂ ಕುರ್ಚಿಗೆ ಬಂದು ಕುಳಿತುಬಿಟ್ಟ ಗಿರಾಕಿ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತೆ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ಸಮೀಕ್ಷೆ ಸತ್ಯವಾಗುವುದಿಲ್ಲ
ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗುತ್ತದೆ ಎಂಬ ಎಕ್ಸಿಟ್ ಪೋಲ್ ವರದಿಗಳನ್ನು ಅವರು ನಿರಾಕರಿಸಿದರು. ಹರಿಯಾಣ, ಮಹಾರಾಷ್ಟ್ರದಲ್ಲಿ ಸಮೀಕ್ಷೆಗಳು ಏನಾದವು? ಎಲ್ಲಾ ತಲೆಕೆಳಗಾಯಿತು. ಸಮೀಕ್ಷೆಗಳೆಲ್ಲಾ ಸತ್ಯವಾಗಿಬಿಟ್ಟಿದ್ದಾವಾ? ಅಂದಾಜು ಮಾಡಿ ಹೇಳುತ್ತಾರೆ ಅಷ್ಟೇ. ಆದ್ದರಿಂದ ನಾನು ಸಮೀಕ್ಷೆ ನಂಬುವುದಿಲ್ಲ. ಡಿ. 9ಕ್ಕೆ ಫಲಿತಾಂಶ ಪ್ರಕಟವಾಗುತ್ತದೆ. ಜನರು ಏನು ತೀರ್ಪು ಕೊಡುತ್ತಾರೆ ಗೊತ್ತಾಗುತ್ತದೆ ಎಂದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications