ಕಾಂಗ್ರೆಸ್ ಅಭ್ಯರ್ಥಿ ಉಮಾಶ್ರೀ ವಿರುದ್ಧ ವಾಮಾಚಾರ
ಬಾಗಲಕೋಟೆ, ಮೇ 09 : ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಮಾಟ, ಮಂತ್ರ, ವಾಮಾಚಾರ ಹಾಗೂ ಅಕ್ರಮಗಳಿಗೆ ಮುಖಂಡರು ಮೊರೆ ಹೋಗುತ್ತಿದ್ದಾರೆ.
ವಾಮಚಾರ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ತಂತ್ರವನ್ನು ಕಾರ್ಯಕರ್ತರು ಅನುಸರಿಸುತ್ತಿದ್ದಾರೆ.
ಅಂದಹಾಗೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಮತ ಕೇಂದ್ರದ ಮುಂದೆ ವಾಮಚಾರ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರ ಕೈಗೆ ಒಪ್ಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರು ಬಸಪ್ಪ ಮರಿಯಣ್ಣನವರ ಹಾಗೂ ಲಕ್ಕಪ್ಪ ಮಂಟೂರ. ತೇರದಾಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿಪ್ಪರಗಿ ಗ್ರಾಮದ ವಾರ್ಡ ನಂ 1-5 ಭೂತದ ಸರ್ಕಾರಿ ಶಾಲೆಯ ಮತಗಟ್ಟಿ ಕೇಂದ್ರದ ಮುಂದೆ ವಾಮಚಾರ ಮಾಡುತ್ತಿದ್ದ ಸಮಯದಲ್ಲಿ ಭೂಪರು ಸಿಕ್ಕಿಬಿದ್ದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ,ನಟಿ ಉಮಾಶ್ರೀ ವಿರುದ್ಧ ವಾಮಾಚಾರ ಮಾಡಲಾಗಿತ್ತು ಎನ್ನಲಾಗಿದೆ. ತಾಮ್ರದ ಲೋಹದ ತಗಡಿನ ಮೇಲೆ ಉಮಾಶ್ರೀ ಸೇರಿದಂತೆ ಇತರ ಮುಖಂಡರ ಹೆಸರು ಬರೆದು, ಲಿಂಬೆ ಹಣ್ಣು ಕುಂಕಮ ಸೇರಿದಂತೆ ಇತರ ವಸ್ತುಗಳಿಂದ ವಾಮಾಚಾರ ನಡೆಸಲಾಗಿದೆ.
ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ತೇರದಾಳ ಕ್ಷೇತ್ರ ಹಾಲಿ ಶಾಸಕಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ. ಕ್ಷೇತ್ರದ ಶಾಸಕಿ ಮೇಲೆ ಯಾವುದೇ ಆರೋಪಗಳಿಲ್ಲ. ಆದರೆ, ತೇರದಾಳ ತಾಲೂಕು ಹೋರಾಟ ಸಮಿತಿ ಪಟ್ಟಣವನ್ನು ತಾಲೂಕು ಮಾಡಬೇಕು ಎಂದು ಇಂದಿಗೂ ಹೋರಾಟ ಮಾಡುತ್ತಿದೆ.

2013 ರ ಚುನಾವಣೆಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ಸಿದ್ದು ಸವದಿ ಕಣಕ್ಕಿಳಿದಿದ್ದರು. ಉಮಾಶ್ರೀ ಅವರ ವಿರುದ್ಧ ಸೋತಿದ್ದರು. ಕ್ಷೇತ್ರದಲ್ಲಿ ನೇಕಾರ ಸಮುದಾಯದ ಮತಗಳು ನಿರ್ಣಾಯಕ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications