ಬಳ್ಳಾರಿ ಜಿಲ್ಲೆಯಲ್ಲಿ 459 ಮತಗಟ್ಟೆ ಕೇಂದ್ರಗಳು ಅತೀ ಸೂಕ್ಷ್ಮ
ಬಳ್ಳಾರಿ, ಮೇ. 11 : ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ 19,11,568 ಜನರು ಮತದಾನ ಮಾಡುವ ಹಕ್ಕು ಪಡೆದಿದ್ದು, 2,127 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಲ್ಲಿ 9,54,559 ಪುರುಷರು ಮತ್ತು 9,56,770 ಮಹಿಳೆಯರು ಹಾಗೂ 239 ಇತರೆ ಮತದಾರರಿದ್ದಾರೆ.
18,143 ವಿಕಲಚೇತನರಿದ್ದರೆ, ಮಹಿಳಾ ಮತದಾರರು ಹೆಚ್ಚಿರುವ 17 ಪ್ರದೇಶಗಳಲ್ಲಿ ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಇರುತ್ತಾರೆ ಎನ್ನುವುದು ವಿಶೇಷ.
ಜಿಲ್ಲೆಯಲ್ಲಿ 459 ಮತಗಟ್ಟೆಗಳು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಎಂದು ಗುರುತಿಸಲಾಗಿದೆ. 367 ಪೋಲಿಂಗ್ ಕೇಂದ್ರಗಳಲ್ಲಿ ಮೈಕ್ರೋ ಅಬ್ಸರ್ವರ್ ಗಳನ್ನು ನೇಮಿಸಲಾಗಿದೆ.

ಜಿಲ್ಲೆಯಲ್ಲಿ 17,168 ಜನ ಅಂಚೆ ಮತದಾನಕ್ಕೆ ಅರ್ಹತೆ ಪಡೆದಿದ್ದು, ಅವರಲ್ಲಿ 12,537 ಜನ ಫಾರಂ ನಂ.12 ತೆಗೆದುಕೊಂಡು ಭರ್ತಿ ಮಾಡಿ 11,556 ಜನರು ಮಾತ್ರ ಅಂಚೆ ಮತಪತ್ರ ಪಡೆದಿದ್ದಾರೆ. ಮತಗಟ್ಟೆಗಳಲ್ಲಿ ವಿಕಲಚೇತನರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ 806 ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ.
ಮತದಾನ ಪ್ರಕ್ರಿಯೆಗೆ 9,340 ಸರ್ಕಾರಿ ಸಿಬ್ಬಂದಿ, ಆಶಾ, ಅಂಗನವಾಡಿ ಸೇರಿದಂತೆ ಅರೆ ಸರ್ಕಾರಿಯ 2,209 ಸೇರಿದಂತೆ ಒಟ್ಟು 11,995 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. 391 ಬಸ್ ಸೇರಿ ಒಟ್ಟು 610 ವಾಹನಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಲಾಗುತ್ತಿದೆ.
ಜಿಲ್ಲೆಯ ಒಂಭತ್ತು ವಿಧಾನಸಭಾ ಕ್ಷೇತ್ರಗಳ ಮತಯಂತ್ರ ಸಂಗ್ರಹಕ್ಕೆ 21 ಸ್ಟ್ರಾಂಗ್ ರೂಂಗಳನ್ನು ಬಳ್ಳಾರಿಯ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಮತಗಳ ಎಣಿಕೆಗೆ ಒಂಭತ್ತು ಕೊಠಡಿಗಳಲ್ಲಿ ಪ್ರತಿಯೊಂದು ಕ್ಷೇತ್ರಕ್ಕೆ ಹದಿನೈದು ಟೇಬಲ್ ಗಳ ವ್ಯವಸ್ಥೆ ಮಾಡಲು ಚುನಾವಣಾ ಆಯೋಗ ನಿರ್ಧರಿಸಿದೆ.

ಜಿಲ್ಲೆಯಲ್ಲಿ 766 ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಬಹುತೇಕ ಅಂದರೆ 733 ಅಕ್ರಮ ಮದ್ಯ ಮಾರಾಟ, ಸಾಗಾಟಕ್ಕೆ ಸಂಬಂಧಿಸಿದವು. ಈ ಪ್ರಕರಣಗಳಲ್ಲಿ 38.30 ಲಕ್ಷ ಮೌಲ್ಯದ 7603 ಲೀಟರ್ ಮದ್ಯ ಮತ್ತು 60 ಬೈಕ್, ಒಂದು ಆಟೋ ವಶವಡಿಸಿಕೊಳ್ಳಲಾಗಿದೆ ಎಂದರು.
ಚುನಾವಣಾ ಸಂಬಂಧಿತ 43.93 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ 9 ಎಫ್ಎಸ್ ಟಿ ತಂಡ, 21 ಎಸ್ಎಸ್ ಟಿ ತಂಡ, 5 ಎಂಸಿಸಿ ತಂಡ, 5ವಿಎಸ್ ಟಿ ತಂಡಗಳು ಪ್ರತಿನಿತ್ಯ ಕಾರ್ಯನಿರ್ವಹಿಸುತ್ತಿವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 6 ಪ್ರಕರಣಗಳು ದಾಖಲಾಗಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications