ಬಳ್ಳಾರಿಯಲ್ಲಿ ಊಟವಿಲ್ಲದೇ ಹಸಿವಿನಿಂದ ಪ್ರಾಣಬಿಟ್ಟ 60ರ ವೃದ್ಧ
ಬಳ್ಳಾರಿ, ಆಗಸ್ಟ್.18: ಕೊರೊನಾವೈರಸ್ ಸೋಂಕಿನಿಂದ ಗೃಹ ದಿಗ್ಬಂಧನದಲ್ಲಿದ್ದ 60 ವರ್ಷದ ವೃದ್ಧರೊಬ್ಬರು ಊಟವಿಲ್ಲದೇ ಹಸಿವಿನಿಂದ ಮೃತಪಟ್ಟಿರುವ ಅಮಾನವೀಯ ಘಟನೆಯು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
Recommended Video
ಬಳ್ಳಾರಿ ಜಿಲ್ಲೆ ಟಿ.ಬೆಳಗಲ್ಲು ಗ್ರಾಮದ ನಿವಾಸಿ 60 ವರ್ಷದ ವೃದ್ಧರೊಬ್ಬರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿತ್ತು. ಈ ಹಿನ್ನೆಲೆ ಗೃಹ ದಿಗ್ಬಂಧನದಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದ್ದ ವೃದ್ಧ ಮಂಗಳವಾರ ಮೃತಪಟ್ಟಿದ್ದಾರೆ.
ಕೊವಿಡ್-19 ಸೋಂಕಿಗೆ ಗುರಿಯಾಗಿದ್ದ ವೃದ್ಧನ ಸಾವಿಗೆ ನಿಜವಾಗಿಯೂ ಕಾರಣವೇನು. 60ರ ವೃದ್ಧನ ಸಾವಿನ ಬಗ್ಗೆ ತಿಳಿದರೂ ವೈದ್ಯಕೀಯ ತಂಡವು ಸ್ಥಳಕ್ಕೆ ಏಕೆ ಭೇಟಿ ನೀಡಲಿಲ್ಲ ಎಂಬೆಲ್ಲ ವಿಚಾರಗಳ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಡಳಿತವು ಸೂಚನೆ ನೀಡಿದೆ.

ಹಸಿವಿನಿಂದ ವೃದ್ಧ ಮೃತಪಟ್ಟಿರುವ ಶಂಕೆ:
ಕಳೆದ ಎರಡು ದಿನಗಳಿಂದ ವೃದ್ಧನು ಹಸಿವಿನಿಂದ ಬಳಲುತ್ತಿದ್ದು ಆಹಾರಕ್ಕಾಗಿ ಭಿಕ್ಷೆ ಬೇಡುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರತಿನಿತ್ಯ ದಿನಕ್ಕೆ ಒಂದು ಬಾರಿಯಷ್ಟೇ ವೃದ್ಧನಿಗೆ ಆಹಾರವನ್ನು ನೀಡಲಾಗುತ್ತಿತ್ತು. ಹೀಗಾಗಿ ಊಟವಿಲ್ಲದೇ ವೃದ್ಧನು ಪ್ರಾಣ ಬಿಟ್ಟಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ. ಈ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಆಗಸ್ಟ್.15ರಂದು 60 ವರ್ಷದ ವೃದ್ಧನಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ಗ್ರಾಮದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ವಯಸ್ಸಾದ ರೋಗಿಗೆ ಆಹಾರವನ್ನು ನೀಡಲು ಕುಟುಂಬವು ಹಿಂಜರಿಯಿತು ಮತ್ತು ಸಾಯುವ ಕೆಲವೇ ಗಂಟೆಗಳ ಮೊದಲು, ಅವರು ಸಹಾಯಕ್ಕಾಗಿ ಕಿರುಚುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದರು.
ವೃದ್ಧನಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಖಾತ್ರಿಯಾಗುತ್ತಿದ್ದಂತೆ ಸಂಬಂಧಿಕರೆಲ್ಲ ಆತನಿಂದ ದೂರ ಇರುವುದಕ್ಕೆ ಬಯಸಿದರು. ಸೋಮವಾರವೇ ಸೋಂಕಿತ ವೃದ್ಧ ಆರೋಗ್ಯವು ಹದಗೆಟ್ಟಿತ್ತು. ಯಾವ ಸಂದರ್ಭದಲ್ಲಿ ಹೀಗೆ ಆಗುತ್ತದೆ ಎನ್ನುವುದನ್ನು ಪ್ರಶ್ನಿಸಲು ಸಂಬಂಧಿಕರನ್ನು ಸಂಪರ್ಕಿಸಲು ಪ್ರಯತ್ನಿಸಿದೆವು ಎಂದು ಜಿಲ್ಲಾಡಳಿತವು ಸ್ಪಷ್ಟನೆ ನೀಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications