ಬಳ್ಳಾರಿ; ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 6 ಟಿಎಂಸಿ ನೀರು ಸಂಗ್ರಹ
ಬಳ್ಳಾರಿ, ಆಗಸ್ಟ್ 07: ಬಳ್ಳಾರಿ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಂದೇ ದಿನ ಅಂದಾಜು 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ದುಪ್ಪಟ್ಟು ಪ್ರಮಾಣದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಕಳೆದ ವರ್ಷ ಈ ದಿನಕ್ಕೆ ಅಂದಾಜು 40781 ಕ್ಯೂಸೆಕ್ ನೀರು ಹರಿದುಬಂದಿತ್ತು. ಈ ವರ್ಷ ಈ ದಿನಕ್ಕೆ 81218 ಕ್ಯೂಸೆಕ್ ನೀರು ಹರಿದುಬಂದಿದೆ.
ಅಂದರೆ ಸರಿಸುಮಾರು ಆರು ಟಿಎಂಸಿಯಷ್ಟು ನೀರು ಸಂಗ್ರಹಗೊಂಡಿದೆ. ನಿನ್ನೆಯ ದಿನಕ್ಕೆ 17858 ಕ್ಯೂಸೆಕ್ ನೀರು ಹರಿದು ಬಂದಿದೆ. ಮೊನ್ನೆಯ ದಿನಕ್ಕೆ ಕೇವಲ 4446 ಕ್ಯೂಸೆಕ್ ನೀರು ಜಲಾಶಯಕ್ಕೆ ಒಳಹರಿವು ದಾಖಲಾಗಿತ್ತು. ಕಳೆದ 11 ದಿನಗಳಿಂದಲೂ ಈ ಒಳ ಹರಿವಿನ ಪ್ರಮಾಣ ಕಡಿಮೆಯಾಗಿತ್ತು. ಈಗ ಜಲಾಶಯಕ್ಕೆ ಉತ್ತಮ ಒಳಹರಿವು ದಾಖಲಾಗಿದೆ.

ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ ಆಗಸ್ಟ್ 5 ರಿಂದ 57, 600 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದ್ದು, ಈ ಜಲಾಶಯದ ಒಳಹರಿವಿನ ಪ್ರಮಾಣ ಅಧಿಕವಾಗಿದೆ. ಇನ್ನು ಕೆಲ ದಿನಗಳಲ್ಲಿ ಜಲಾಶಯದ ಒಳಹರಿವು ಇನ್ನಷ್ಟು ಹೆಚ್ಚಳವಾಗಲಿದೆ ಎಂದು ತಿಳಿದುಬಂದಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications