ಕುಡತಿನಿಯಲ್ಲಿ ರಥದ ಚಕ್ರಕ್ಕೆ ಸಿಲುಕಿ ತುಂಡಾದ ಭಕ್ತನ ಕಾಲು, ಆಸ್ಪತ್ರೆಗೆ ದಾಖಲು
ಬಳ್ಳಾರಿ, ಮೇ, 01: ಜಿಲ್ಲೆಯ ಕುಡತಿನಿ ಪಟ್ಟಣದ ಆರಾಧ್ಯ ದೈವ ಆಂಜನೇಯ ಸ್ವಾಮಿ ರಥೋತ್ಸವದ ವೇಳೆ ತೇರಿನ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬನ ಕಾಲು ಸಂಪೂರ್ಣವಾಗಿ ತುಂಡಾದ ಘಟನೆ ಭಾನುವಾರ (ಏಪ್ರಿಲ್ 31) ಸಂಜೆ ನಡೆದಿದೆ.
ಪಟ್ಟಣ ನಿವಾಸಿ ಎ. ಮಾರೇಶ (33) ಎನ್ನುವ ವ್ಯಕ್ತಿಯ ಕಾಲು ತುಂಡಾಗಿದೆ. ರಥೋತ್ಸವದಲ್ಲಿ ಸಾವಿರಾರು ಜನರು ರಥ ಎಳೆಯುವಾಗ ಮಾರೇಶನ ಕಾಲು ಗಾಲಿಗೆ ಸಿಲುಕಿದೆ. ಈ ವೇಳೆ ಆತನ ಎಡಗಾಲಿನ ಕಾಲು ತಂಡಾಗಿದ್ದು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ.

ಭೀಕರ ರಸ್ತೆ ಅಪಘಾತ: ಪಿಎಸ್ಐ ಸಾವು
ಕಾರು ಬ್ರಿಡ್ಜ್ಗೆ ಗುದ್ದಿದ್ದ ಪರಿಣಾಮ ಕರ್ತವ್ಯ ನೀರತ ಪಿಎಸ್ಐ ಸಾವನ್ನಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ಕಾರು ಬ್ರಿಡ್ಜ್ಗೆ ಗುದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದ್ದು, ಕರ್ತವ್ಯ ನೀರತ ಪಿಎಸ್ಐ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ನಡೆದಿದೆ. ಅಮ್ಮಿನಗಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದಾರೆ.
ಮೂಲತಃ ನವಲಗುಂದ ತಾಲೂಕಿನ ಕುಮಾರಗೊಪ್ಪ ಗ್ರಾಮದ ನಿವಾಸಿಯಾದ ಇವರು ನಿಯಂತ್ರಣ ತಪ್ಪಿದ ಕಾರಣ ಕಾರು ಬ್ರಿಡ್ಜ್ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಪಿಎಸ್ಐ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನವಲಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications