ಹೂಮಳೆ..ಡೊಳ್ಳು ಕುಣಿತ..ಬೆಳ್ಳಿ ರಥದ ಮೆರವಣೆಗೆ: ಸರ್ಕಾರಿ ಶಾಲೆ ಶಿಕ್ಷಕಿಗೆ ಅದ್ಧೂರಿ ಬೀಳ್ಕೊಡುಗೆ
ಬಳ್ಳಾರಿ, ಆಗಸ್ಟ್ 19: ಇತ್ತೀಚಿನ ದಿನಗಳಲ್ಲಿ ಶಾಲಾ ಶಿಕ್ಷಕರನ್ನು ಬೀಳ್ಕೊಡಲು ಮಕ್ಕಳು ಹಿಂದೇಟು ಹಾಕಿ ಅತ್ತು ಕಳುಹಿಸುವ ಅನೇಕ ಘಟನೆಗಳನ್ನು ನೋಡಿದ್ದೇವೆ. ಆದರೆ ಈ ಸರ್ಕಾರಿ ಶಾಲೆಯ ಶಿಕ್ಷಕಿಗೆ ಸಿಕ್ಕ ಅದ್ಧೂರಿ ಬೀಳ್ಕೊಡಿಗೆ ಈವರೆಗೂ ಯಾವುದೇ ಅಧಿಕಾರಿಗೆ ಸಿಕ್ಕಿರಲಿಲ್ಲ ಎನ್ನಬಹುದಾಗಿದೆ.ಅಷ್ಟರಮಟ್ಟಿಗೆ ಶಿಕ್ಷಕಿಯನ್ನು ಗೌರವಪೂರ್ಣವಾಗಿ ಶಾಲೆಯಿಂದ ಬೀಳ್ಕೊಡಲಾಗಿದೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕುರುವಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಸರ್ಕಾರಿ ಶಾಲೆಯ ಶಿಕ್ಷಕಿ ಜ್ಯೋತಿ ಎನ್ನುವವರು ಇತ್ತೀಚಿಗೆ ಬೇರೆ ಶಾಲೆಗೆ ವರ್ಗಾವಣೆ ಆಗಿದ್ದಾರೆ. ಜ್ಯೋತಿ ಕಳೆದ ಹದಿನೈದು ವರ್ಷದಿಂದ ಕುರುವಳ್ಳಿ ಗ್ರಾಮದ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಜ್ಯೋತಿ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಬರೀ ಶಿಕ್ಷಕಿಯಾಗಿರದೇ ಮಕ್ಕಳಿಗೆ ಗೆಳತಿಯಾಗಿ, ಮಾರ್ಗದರ್ಶಕಿಯಾಗಿ ಮಕ್ಕಳೊಂದಿದೆ, ಮಕ್ಕಳಾಗಿ ಬೆರೆಯುತ್ತಿದ್ದರು. ಹೀಗಾಗಿ ಜ್ಯೋತಿ ಟೀಚರ್ ಮಕ್ಕಳಿಗೆ ಅಚ್ಚುಮೆಚ್ಚು.

ಆದರೆ ಈಗ ಜ್ಯೋತಿ ಟೀಚರ್ ಬೇರೆ ಶಾಲೆಗೆ ವರ್ಗಾವಣೆಯಾಗಿರುವುದಕ್ಕೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಕುರುವಳ್ಳಿ ಗ್ರಾಮಸ್ಥರು ಸಹ ಜ್ಯೋತಿ ಅವರ ಮೇಲೆ ಅಪಾರ ಅಭಿಮಾನ ಹೊಂದಿದ್ದರು. ಹೀಗಾಗಿ ಜ್ಯೋತಿ ಅವರ ಬೀಳ್ಕೊಡಿಗೆ ಸಮಾರಂಭದ ದಿನ ಶಿಕ್ಷಕಿಯನ್ನು ಬೆಳ್ಳಿ ರಥದಲ್ಲಿ ಕೂರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡುವ ಜೊತೆಗೆ ಮಹಿಳೆಯರು ಹಾಗೂ ಮಕ್ಕಳಿಂದ ಪೂರ್ಣ ಕುಂಭ ಹೊತ್ತು ಗೌರವಪೂರ್ಣ ಬೀಳ್ಕೊಡಿಗೆ ನೀಡಿದ್ದಾರೆ. ಅಲ್ಲದೆ ದಾರಿಯುದಕ್ಕೂ ಡೊಳ್ಳು ಕುಣಿತ, ಹೂಮಳೆಗೈದಿದ್ದಾರೆ.

ಸರ್ಕಾರಿ ಶಾಲೆ ಮಕ್ಕಳ ಪ್ರೀತಿ ಹಾಗೂ ಕುರುವಳ್ಳಿ ಗ್ರಾಮಸ್ಥರ ತಮ್ಮ ಮೇಲೆ ಇಟ್ಟಿರುವ ಅಭಿಮಾನಕ್ಕೆ ಜ್ಯೋತಿ ಭಾವುಕರಾಗಿದ್ದಾರೆ. ಕಳೆದ ಹದಿನೈದು ವರ್ಷದಲ್ಲಿ ಶಿಕ್ಷಕಿ ಜ್ಯೋತಿ ಮಕ್ಕಳ ಪ್ರೀತಿಯ ಜೊತೆಗೆ ಗ್ರಾಮಸ್ಥರ ಪ್ರೀತಿ ಸಹ ಗಳಿಸಿದ್ದು, ಭಾರದ ಮನಸ್ಸಿನಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಜ್ಯೋತಿ ಅವರನ್ನು ಕಳುಹಿಸಿಕೊಟ್ಟಿದ್ದಾರೆ. ಈ ಭಾವುಕ ಕ್ಷಣಕ್ಕೆ ಕುರುವಳ್ಳಿ ಗ್ರಾಮ ಸಾಕ್ಷಿಯಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications