ಬಳ್ಳಾರಿ ಜಿಲ್ಲೆಯ ಚೋರನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಗಳಮುಖಿ ಆಯ್ಕೆ
ಬಳ್ಳಾರಿ, ಆಗಸ್ಟ್, 08: ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ತೃತೀಯಲಿಂಗಿಯೊಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎರಡು ಬಾರಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಸಿ.ಆಂಜಿನಮ್ಮ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಗ್ರಾಮಸ್ಥರು ನಿಲ್ಲಿದ್ದರು. ಪರಿಶಿಷ್ಟ ವರ್ಗದ ಅಭ್ಯರ್ಥಿಗೆ ಮೀಸಲಾದ ಸ್ಥಾನದಲ್ಲಿ ಆಂಜಿನಮ್ಮ ಪ್ರತಿನಿಧಿಸಿದ್ದು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿಯ 19 ಸದಸ್ಯರು ಸರ್ವಾನುಮತದಿಂದ ನಿರ್ಣಯಿಸಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಉಪಾಧ್ಯಕ್ಷರಾಗಿ ಅನುಸೂಚಿತ ಪಂಗಡ ಮಹಿಳೆ ಮೀಸಲಾತಿ ಅಡಿಯಲ್ಲಿ ಗೀತಾ ಗಂಡ ಬಿ.ಹನುಮಂತಪ್ಪ ಚೋರನೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ಸಹಾಯಕ ಕೃಷಿ ಇಲಾಖೆಯ ನಿರ್ದೇಶಕರಾದ ಮಂಜುನಾಥರಡ್ಡಿ ತಿಳಿಸಿದರು.
ಆಂಜಿನಮ್ಮ ಅವರು ಮಾತನಾಡಿ, ತನ್ನ ಗೆಲುವಿನ ಶ್ರೇಯಸು ಗ್ರಾಮಸ್ಥರಿಗೆ ಸಲ್ಲುತ್ತದೆ. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿರಲಿಲ್ಲ. ಆದರೆ ಗ್ರಾಮದ ಹಿರಿಯರು ನನ್ನನ್ನು ಸ್ಪರ್ಧಿಸುವಂತೆ ಕೇಳಿದರು, ಇದೀಗ ನನಗೆ ದೊಡ್ಡ ಪಟ್ಟವನ್ನೇ ನೀಡಿದ್ದಾರೆ. ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಕಾಮಗಾರಿಗಳನ್ನು ತರಲು ಶ್ರಮಿಸುತ್ತೇನೆ ಎಂದರು.
ನಿವಾಸಿಗಳಿಗೆ ಉತ್ತಮ ಕುಡಿಯುವ ನೀರು, ಬೀದಿ ದೀಪಗಳು, ರಸ್ತೆಗಳು ಮತ್ತು ಇತರ ಮೂಲ ಸೌಕರ್ಯಗಳ ಅವಶ್ಯಕತೆ ಇದೆ. ಖಂಡಿತ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಗ್ರಾಮ ಪಂಚಾಯಿತಿಗೆ ಹಣ ತರಲು ಅಧಿಕಾರಿಗಳು ಮತ್ತು ಶಾಸಕರೊಂದಿಗೆ ಮಾತುಕತೆ ನಡೆಸುತ್ತೇನೆ. ಜೊತೆಗೆ ನಮ್ಮಂತಹ ಅನೇಕ ಮಂಗಳಾಮುಖಿ ಮಹಿಳೆಯರನ್ನು ಗ್ರಾಮಮಟ್ಟದಲ್ಲಿ ಸಬಲೀಕರಣ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅಬ್ದುಲ್ ಸಾಬ್ ಖಾದ್ರಿ, ಚುನಾವಣಾಧಿಕಾರಿ ಮಂಜುನಾಥ ರೆಡ್ಡಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications