ಹೂವಿನಹಡಗಲಿ ಉಪನೋಂದಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ
ಹೊಸಪೇಟೆಯ ಬಸವೇಶ್ವರ ಬಡಾವಣೆಯಲ್ಲಿರುವ ಮರಿಗಾದಿ ಅವರ ಮನೆಯ ಮೇಲೆ ಗುರುವಾರ ಬೆಳಿಗ್ಗೆ ಎಸಿಬಿ ಎಸ್ಪಿ ಅನಿತಾ ಹದ್ದಣ್ಣನವರ್ ನೇತೃತ್ವದ ತಂಡ ದಾಳಿ ನಡೆಸಿದೆ.
ಹೂವಿನಹಡಗಲಿ, ಮಾರ್ಚ್. 16 : ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಪ್ರಭಾರಿ ಉಪನೋಂದಣಾಧಿಕಾರಿ ಕೆ.ಮರಿಗಾದಿ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇವರ ವಿರುದ್ಧ ಅಕ್ರಮ ಆಸ್ತಿ ಆರೋಪ ಕೇಳಿ ಬಂದಿದ್ದರಿಂದ ಹೊಸಪೇಟೆಯ ಬಸವೇಶ್ವರ ಬಡಾವಣೆಯಲ್ಲಿರುವ ಮರಿಗಾದಿ ಅವರ ಮನೆಯ ಮೇಲೆ ಗುರುವಾರ ಬೆಳಿಗ್ಗೆ ಎಸಿಬಿ ಎಸ್ಪಿ ಅನಿತಾ ಹದ್ದಣ್ಣನವರ್ ನೇತೃತ್ವದ ತಂಡ ದಾಳಿ ನಡೆಸಿದೆ.[ಮಾ. 14ರಂದು ಬಳ್ಳಾರಿಯಲ್ಲಿ ಆಸ್ಪತ್ರೆಗಳು ಬಂದ್!!]

ಮರಿಗಾದಿ ಅವರ ಕಚೇರಿ ಮತ್ತು ಆಪ್ತ ಸಂಬಂಧಿಕರ ಮನೆಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.












Click it and Unblock the Notifications