ಬಳ್ಳಾರಿ ಬಳಿ KSRTC ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ, ಚಾಲಕರಿಬ್ಬರೂ ಸಾವು, 30 ಮಂದಿಗೆ ಗಂಭೀರ ಗಾಯ
ಬಳ್ಳಾರಿ, ಮೇ, 22: ಬಳ್ಳಾರಿ ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಪರಸ್ಪರ ಡಿಕ್ಕಿಯಾಗಿದ್ದು, ಈ ವೇಳೆ ಲಾರಿ ಹಾಗೂ ಬಸ್ ಚಾಲಕರು ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಳ್ಳಾರಿ ಸಮೀಪದ ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಈ ದೃಶ್ಯವನ್ನು ಕಂಡ ಕಂಡ ಸ್ಥಳೀಯರು ದಿಗ್ಭ್ರಾಂತರಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಈ ಭೀಕರ ಅಪಘಾತದಲ್ಲಿ ಸರ್ಕಾರಿ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬಳಿಕ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮನವಿ
ರಕ್ತದಾನ ಮಹಾದಾನ ಎಂಬುವಂತ ಮಹತ್ವದ ಮಾತು. ಆದರೆ ಈಗ ಅದೆಷ್ಟೋ ರಕ್ತದಾನದ ಶಿಬಿರಗಳು ಮರೆಯಾಗುತ್ತಿದ್ದು, ರೋಗಿಗಳಿಗೆ ಸಮರ್ಪಕವಾಗಿ ರಕ್ತ ಸಿಗದೇ ಇರುವ ಹಿನ್ನೆಲೆಯಲ್ಲಿ ರಕ್ತದ ಅಭಾವ ಹೆಚ್ಚಿದೆ. ಹಾಗೆಯೆ ವಿಧಾನಸಭಾ ಚುನಾವಣೆ ಹಿನ್ನೆಲೆ ರಕ್ತ ದಾನ ಶಿಬಿರಗಳು ನಡೆದಯದ ಕಾರಣ ಜಿಲ್ಲೆಯಲ್ಲಿ ರಕ್ತದ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ರೋಗಿಗಳು ಪರದಾಡುವಂತಾಗಿದೆ.
ಇನ್ನೂ ಜಿಲ್ಲೆಯಲ್ಲಿ ರೋಗಿಯ ಸಿಬ್ಬಂದಿಗಳು ರಕ್ತ ಹುಡಕಾಟದಲ್ಲಿ ಅಲೆದಾಡಿ ಹೈರಾಣಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಪ್ರಮುಖವಾಗಿ ಒಟ್ಟು 12 ರಕ್ತ ನಿಧಿ ಕೇಂದ್ರಗಳಿವೆ. ಇದೀಗ ರಕ್ತ ನೀಡುವ ದಾನಿಗಳು ಮುಂದೆ ಬಾರದ ಕಾರಣ ಎಲ್ಲಾ ಕಡೆಯೂ ಸಹ ರಕ್ತ ಸಿಗುತ್ತಿಲ್ಲ. ರಕ್ತ ಬೇಡಿ ಬಂದವರಿಗೆ ಇಲ್ಲ ಎಂದು ಉತ್ತರಿಸಲಾಗದೆ ರಕ್ತ ನಿಧಿ ಕೇಂದ್ರಗಳ ಸಿಬ್ಬಂದಿ ಪೇಚಿಗೆ ಸಿಲುಕುತ್ತಿದ್ದಾರೆ.
ಜಿಲ್ಲೆಯಲ್ಲಿರುವ ಎಲ್ಲ ರಕ್ತ ನಿಧಿ ಕೇಂದ್ರಗಳು ನಿರಂತರವಾಗಿ ರಕ್ತದಾನ ಶಿಬಿರ ನಡೆಸುತ್ತಿದ್ದರು. ಅಲ್ಲದೆ ಸ್ವಯಂ ಸೇವಾ ಸಂಸ್ಥೆಗಳು, ಜನಪ್ರತಿನಿಗಳು, ಗಣ್ಯರು ಸಹ ಹಾಗೂ ಸಂಘಟನೆಗಳು ಸಹ ರಕ್ತದಾನ ಶಿಬಿರ ಆಯೋಜಸುತ್ತಿದ್ದರು. ಚುನಾವಣೆ ಕಾರಣ ಸ್ಥಗಿತವಾಗಿದ್ದು, ರಕ್ತ ಸಿಗದೆ ರೋಗಿಗಳು ಸಿಬ್ಬಂದಿ ಬೇರೆ ಬೇರೆ ಜಿಲ್ಲೆಗೆ ಮೊರೆ ಹೋಗುವಂತಾಗಿದೆ.
ಕಿಮ್ಸ್ ಆಸ್ಪತ್ರೆ ಸೇರಿದಂತೆ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ಸಹ 12 ರಕ್ತನಿಧಿ ಕೇಂದ್ರಗಳಿಗೆ ಅವಲಂಬಿತವಾಗಿವೆ. ಕಿಮ್ಸ್ ಆಸ್ಪತ್ರೆಗೆ ಉತ್ತರ ಕರ್ನಾಟಕ ಭಾಗದ 7-8 ಜಿಲ್ಲೆಗಳ ಜನರು ಚಿಕಿತ್ಸೆಗೆ ಆಗಮಿಸುತ್ತಾರೆ.
ತಲಸ್ಸೇಮಿಯಾ, ಡಯಾಲಿಸಿಸ್, ಹೆರಿಗೆ, ಅಪಘಾತ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದೆ. ಈ ಉದ್ದೇಶಕ್ಕೆ ರಕ್ತ ಶೇಖರಣೆ ಮತ್ತು ಸ್ವಯಂ ಪ್ರೇರಿತ ರಕ್ತ ದಾನ ಶಿಬಿರಗಳನ್ನು ಈ ಕೇಂದ್ರಗಳು ಆಯೋಜಿಸುತ್ತವೆ. ಆದರೆ, ಈ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ. ಅವರಿಗೆಲ್ಲರಿಗೂ ರಕ್ತ ಪೂರೈಸುವುದು ಕಷ್ಟವಾಗಿದೆ. ಇನ್ನು ಕಿಮ್ಸ್ನ ರಕ್ತನಿಧಿ ಭಂಡಾರವು ಜಿಲ್ಲೆಯ ಪ್ರಮುಖ ರಕ್ತನಿಧಿ ಸಂಗ್ರಹ ಕೇಂದ್ರಗಳಲ್ಲಿ ಒಂದಾಗಿದೆ.
ಈ ಕೇಂದ್ರದಿಂದ ನಿತ್ಯ ಐದರಿಂದ ಆರು ಜನ ತಲಸ್ಸೇಮಿಯಾ ಪೀಡಿತ ಮಕ್ಕಳಿಗೆ ಹಾಗೂ 12ರಿಂದ 20 ಜನ ಗರ್ಭಿಣಿಯರಿಗೆ (ಹೆರಿಗೆ ಸಂದರ್ಭದಲ್ಲಿ) ರಕ್ತದ ಅವಶ್ಯಕತೆ ಇದೆ ಎಂದು ಕಿಮ್ಸ್ ರಕ್ತನಿಧಿ ಕೇಂದ್ರದ ಸಿಬ್ಬಂದಿ ಹೇಳುತ್ತಾರೆ. ಆದರೇ ದುಡ್ಡು ಕೊಟ್ಟರು ರಕ್ತ ಸಿಗುತ್ತಿಲ್ಲ. ಹಣ ಕೊಟ್ಟರು ಸಹ ತುರ್ತು ರೋಗಿಗಳಿಗೆ ಅವಶ್ಯಕವಾದ ರಕ್ತ ಸಿಗುತ್ತಿಲ್ಲ.
ಅದರಲ್ಲಿಯೂ ಹೊಲಿಕೆಯಾಗುವ ರಕ್ತ ಸಿಗುವುದು ಇನ್ನೂ ಅಪರೂಪ ಆಗಿದೆ. ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿ ಕರೆಯ್ದೊದು ರಕ್ತ ಕೊಡುವುದರ ಜೊತೆ ಹಣ ನೀಡಿ ರಕ್ತ ಪಡೆಯುವ ಪರಿಸ್ಥಿತಿ ಎದುರಾಗಿದೆ. ಒಂದು ಯುನಿಟ್ ರಕ್ತ ರಕ್ತ ದಾನಕ್ಕೆ 1,000-1,500 ರೂಪಾಯಿ ನೀಡಬೇಕಿದೆ. ಇನ್ನು ರೋಗಿಗಳಿಗೆ ರಕ್ತ ಬೇಕಾದರೆ ಕೆಲವು ಕಡೆ ಒಂದು ದಿನ ಮುಂಚಿತವಾಗಿ ಹೇಳಿ ಬುಕ್ ಮಾಡುವುದು ಅನಿರ್ವಾವಾಗಿಬಿಟ್ಟಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications