ಅತ್ತ ರಾಮ ಮಂದಿರ ನಿರ್ಮಾಣ; ಇತ್ತ ಕಿಷ್ಕಿಂಧೆಯಲ್ಲಿ ಹನುಮ ಮಂದಿರ ನಿರ್ಮಾಣದ ಗುರಿ
ಹೊಸಪೇಟೆ, ಮಾರ್ಚ್ 17: ಇಡೀ ದೇಶ ತಿರುಗಿ ನೋಡುವಂಥ ರಾಮ ಮಂದಿರ ನಿರ್ಮಾಣದ ಕಾರ್ಯ ಅಯೋಧ್ಯೆಯಲ್ಲಿ ಭರದಿಂದ ಸಾಗುತ್ತಿದ್ದರೆ, ಇತ್ತ ಕಿಷ್ಕಿಂಧೆ ಬಳಿ ರಾಮ ಭಂಟ ಹನುಮ ಮಂದಿರ ನಿರ್ಮಾಣಕ್ಕೆ ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿಯವರು ಸತತ 12 ವರ್ಷಗಳ ಕಾಲ ದೇಶ ಸಂಚಾರ ಕೈಗೊಂಡಿದ್ದಾರೆ.
ಆಂಜನೇಯನ ಜನ್ಮಭೂಮಿ ಕಿಷ್ಕಿಂಧೆ ಬಳಿ ಹನುಮ ಮಂದಿರ ನಿರ್ಮಾಣ ಮಾಡಬೇಕೆಂದು ಗೋವಿಂದಾನಂದ ಸರಸ್ವತಿ ಸ್ವಾಮೀಜಿಯವರು ಶ್ರಮಿಸುತ್ತಿದ್ದಾರೆ.
ದಕ್ಷಿಣ ಕಾಶಿ ಎಂದೇ ಕರೆಯುವ ಹಂಪಿಯಿಂದ ಆರಂಭವಾಗಿ 12 ವರ್ಷಗಳ ಬಳಿಕ ಅಯೋಧ್ಯೆಯ ಕುಂಭಮೇಳ ತಲುಪಲಿದೆ. ಇಡೀ ಭಾರತ ದೇಶಕ್ಕೆ ಆಂಜನೇಯನ ಜನ್ಮಭೂಮಿಯನ್ನು ಪರಿಚಯಿಸುವ ಈ ಮಹಾ ಸಂಕಲ್ಪವನ್ನು ಶ್ರೀ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಗೋವಿಂದಾನಂದ ಸರಸ್ವತಿ ಸ್ವಾಮೀಜಿಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ರಥದ ವಿಶೇಷತೆ ಮತ್ತು ವೆಚ್ಚ
ಅಯೋಧ್ಯೆಯಿಂದ 3 ಶ್ರೀರಾಮನ ಪಾದುಕೆಗಳನ್ನು ತರಲಾಗಿದ್ದು, ಒಂದನ್ನು ಶ್ರೀ ಹನುಮದ್ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಲ್ಲಿ ಇಟ್ಟು, ಇನ್ನೆರಡು ಪಾದುಕೆಗಳನ್ನು ರಥದಲ್ಲಿ ಇರಿಸಿ ಪೂಜಿಸಲಾಗುತ್ತಿದೆ. ಲಾರಿಯಲ್ಲಿ ಸಿದ್ಧಗೊಂಡಿರುವ ರಥಯಾತ್ರೆಯು ದಾರಿ ಉದ್ದಕ್ಕೂ ರಾಮನ ಮಹಿಮೆ ಮತ್ತು ಹನುಮ ಭಕ್ತಿಯನ್ನು ಸಾರುತ್ತದೆ.

ಉತ್ಸವ ಮೂರ್ತಿಗಳನ್ನು ಹೊತ್ತು ರಥ ಸಂಚರಿಸುತ್ತದೆ
ಇದರಲ್ಲಿ ರಾಮ, ಸೀತೆ, ಲಕ್ಷ್ಮಣ, ಹನುಮ, ವಾಲಿ, ಸುಗ್ರೀವ, ಶಿವ ಮುಂತಾದ ಉತ್ಸವ ಮೂರ್ತಿಗಳನ್ನು ಹೊತ್ತು ರಥ ಸಂಚರಿಸುತ್ತದೆ.
ಈ ರಥವನ್ನು ನಿರ್ಮಾಣ ಮಾಡುವುದಕ್ಕೆ ಬರೋಬ್ಬರಿ 40 ಲಕ್ಷ ರೂ. ವೆಚ್ಚ ತಗುಲಿದ್ದು, ಈ ರಥವನ್ನು ಹನುಮ ಮಂದಿರದ ನಿರ್ಮಾಣದ ಶೈಲಿಯಲ್ಲಿ ನಿರ್ಮಿಸಲಾಗಿದೆ. ರಾತ್ರಿ ಹೊತ್ತಲ್ಲಿ ವಿದ್ಯುತ್ ದೀಪಲಂಕಾರಗಳಿಂದ ಕಂಗೊಳಿಸುತ್ತಿರುತ್ತದೆ.

ಯಾವ ರಾಜ್ಯಗಳಲ್ಲಿ ಸಂಚಾರ
ಕರ್ನಾಟಕದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದು ವರ್ಷಗಳ ಕಾಲ ಪರ್ಯಟನೆ ಮಾಡಲಿದ್ದು, ಅಲ್ಲದೆ ತಮಿಳುನಾಡು, ಆಂಧ್ರಪ್ರದೇಶದಲ್ಲಿ ತಲಾ ಒಂದು ವರ್ಷ ಮತ್ತು ಕೇರಳದಲ್ಲಿ 6 ತಿಂಗಳ ಕಾಲ ಸಂಚರಿಸಲಿದೆ. ಬಳಿಕ ಉತ್ತರ ಭಾರತಕ್ಕೆ ತಲುಪಲಿದ್ದು, ಅಯೋಧ್ಯೆಗೆ ತಲುಪುವ ಹೊತ್ತಿಗೆ 6 ವರ್ಷ ಕಳೆದಿರುತ್ತದೆ.

ಹನುಮ ಜನ್ಮಭೂಮಿ ಕಿಷ್ಕಿಂಧೆ
ಕುಂಭಮೇಳದಲ್ಲಿ ಭಾಗವಹಿಸುವ ನಾಗಸಾಧುಗಳಿಗೆ ಮತ್ತು ಭಕ್ತರಿಗೆ ಹನುಮ ಜನ್ಮಭೂಮಿಯ ಬಗ್ಗೆ ಪರಿಚಯಿಸಲಾಗುತ್ತದೆ. ಒಟ್ಟಾರೆಯಾಗಿ ಅಯ್ಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಮಾಡುತ್ತಿದ್ದರೆ, ಅದೇ ರೀತಿ ಹನುಮ ಜನ್ಮಭೂಮಿಯಾದ ಕಿಷ್ಕಿಂಧೆಯಲ್ಲಿ ಶ್ರೀರಾಮನ ಭಂಟ ಹನುಮನ ಮಂದಿರವನ್ನು ನಿರ್ಮಾಣ ಮಾಡಲಿದೆ ಎಂಬುದು ಈ ರಥಯಾತ್ರೆಯ ಉದ್ದೇಶವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications