ಬಳ್ಳಾರಿ ಜಿಲ್ಲೆಯ ಗಡಿಭಾಗದ ಮದ್ಯದಂಗಡಿಗಳು ಬಂದ್- ಆನಂದ್ ಸಿಂಗ್
ಬಳ್ಳಾರಿ, ಮೇ 12: ಬಳ್ಳಾರಿ ಜಿಲ್ಲೆಯ ಗಡಿಭಾಗದ ಮದ್ಯದಂಗಡಿಗಳು ಬಂದ್ ಮಾಡಲಾಗಿದೆ ಎಂದು ಬಳ್ಳಾರಿಯಲ್ಲಿ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ.
''ಪಕ್ಕದ ಆಂಧ್ರ ಪ್ರದೇಶದಿಂದ ಮದ್ಯ ಖರೀದಿಗೆ ಜನರು ರಹದಾರಿ ಮೂಲಕ ಬರುತ್ತಿದ್ದಾರೆ. ಹಾಗಾಗಿ ಬಳ್ಳಾರಿ ಜಿಲ್ಲೆಯ ಗಡಿ ಭಾಗದ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ಡಿಸಿಗೆ ಆದೇಶ ನೀಡಿದ್ದೇನೆ.'' ಎಂದು ಆನಂದ್ ಸಿಂಗ್ ಹೇಳಿದ್ದಾರೆ.
ಮನೆಗೆ ನುಗ್ಗಿ ಮಗು ಕೊಂದ ಚಿರತೆ; ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ
ಆಂಧ್ರ ಪ್ರದೇಶದಲ್ಲಿ ಮದ್ಯಕ್ಕೆ ಹೆಚ್ಚು ಸುಂಕ ವಿಧಿಸಲಾಗಿದೆ. ಹೀಗಾಗಿ ಗಡಿ ಭಾಗ ಜನರು ಕಡಿಮೆ ದರಕ್ಕೆ ಮದ್ಯ ಸಿಗುತ್ತದೆ ಎಂದು ಬಳ್ಳಾರಿ ಜಿಲ್ಲೆಗೆ ಬರುತ್ತಿದ್ದಾರೆ. ಗಡಿ ಭಾಗ ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಮದ್ಯ ಬಂದ್ ಮಾಡುವ ಯೋಚನೆ ಇದೆ ಎಂದು ಆನಂದ್ ಸಿಂಗ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮದ್ಯ ನಿಷೇಧ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಈ ಬಗ್ಗೆ ಶಾಸಕರು ಸಹ ಸಲಹೆ ನೀಡಿದ್ದಾರಂತೆ.
ಆಂಧ್ರ ಪ್ರದೇಶದಲ್ಲಿ ಸುಂಕ ಹೆಚ್ಚಾದ ಕಾರಣ ಮದ್ಯ ಮಾರಾಟ ಪ್ರಮಾಣ ಕಡಿಮೆಯಾಗಿದೆ. ಖರೀದಿ ಮಾಡುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ