ರಾಜೀನಾಮೆ ಗುಟ್ಟು ಬಿಟ್ಟುಕೊಡದ ಆನಂದ್ ಸಿಂಗ್; ಬಿಎಸ್ವೈ ಜೊತೆ ಸಂಧಾನ?
ವಿಜಯನಗರ, ಆಗಸ್ಟ್ 11: "ನನ್ನ ರಾಜಕೀಯ ಜೀವನ ಇಲ್ಲಿಯೇ ಅಂತ್ಯವಾಗಬಹುದು ಅಥವಾ ನನ್ನ ಹೊಸ ಜೀವನ ಇಲ್ಲಿಂದಲೇ ಶುರುವಾಗಲೂಬಹುದು," ಎಂದು ಸಚಿವ ಆನಂದ್ ಸಿಂಗ್ ಹೇಳಿದರು.
ತಾವು ಬಯಸಿದ ಖಾತೆ ಸಿಕ್ಕಿಲ್ಲವೆಂದು ಸಚಿವ ಆನಂದ್ ಸಿಂಗ್ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನುವ ಸುದ್ದಿಗಳು ಕಳೆದ ಎರಡು ದಿನಗಳಿಂದ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಲಾಗಿದೆ.
ಬುಧವಾರ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಆನಂದ್ ಸಿಂಗ್, "ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕವೇ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನ್ನದು 15 ವರ್ಷದಿಂದ ರಾಜಕಾರಣದಲ್ಲಿದ್ದೇನೆ, ನಾನು ಬ್ಲ್ಯಾಕ್ಮೇಲ್ ರಾಜಕಾರಣ ಮಾಡುವುದಿಲ್ಲ,"ಎಂದು ತಿಳಿಸಿದರು.

"ನನ್ನ ನಿರ್ಧಾರಕ್ಕೆ ಈಗಲೂ ಬದ್ಧವಾಗಿದ್ದೇನೆ, ನನ್ನ ರಾಜಕೀಯ ಎಲ್ಲವೂ ಕೃಷ್ಣ ಪರಮಾತ್ಮನ ಕೈಯಲ್ಲಿದೆ. ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ, ಮೂರು ಬಾರಿ ಮಂತ್ರಿಯಾಗಿದ್ದೇನೆ. ನನಗೆ ಯಾವುದೇ ವೈಯಕ್ತಿಕ ಜೀವನಕ್ಕಾಗಿ ನಾನು ರಾಜಕೀಯಕ್ಕೆ ಬರಲಿಲ್ಲ. ಸೇವೆಗೆಂದು ರಾಜಕೀಯ ಪ್ರವೇಶ ಮಾಡಿದೆ."
"ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾನು ಕೇಳಿದ್ದೆಲ್ಲವನ್ನೂ ಕೊಟ್ಟಿದ್ದಾರೆ. ವಿಜಯನಗರ ಜಿಲ್ಲೆ ಮಾಡಿಕೊಟ್ಟಿದ್ದು, ಏತ ನೀರಾವರಿ ಯೋಜನೆಯನ್ನೂ ಕೊಟ್ಟಿದ್ದರು. ಅವರ ಮಾತಿಗೆ ಗೌರವ ಕೊಟ್ಟಿದ್ದೇನೆ," ಎಂದು ಆನಂದ್ ಸಿಂಗ್ ಹೇಳಿದರು.
"ಮೊನ್ನೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ನನ್ನ ಎಲ್ಲ ಭಾವನೆಗಳನ್ನು ಅವರ ಬಳಿ ನಾಲ್ಕು ಗೋಡೆಗಳ ಮಧ್ಯೆ ಹೇಳಿದ್ದೇನೆ. ಮತ್ತೊಮ್ಮೆ ಕೂಡ ಭೇಟಿಯಾಗುತ್ತೇನೆ," ಎಂದರು.
"ನನಗೆ ಬೆಳಿಗ್ಗೆಯಿಂದಲೂ ಹಲವು ಜನ ಕರೆ ಮಾಡಿದ್ದರು. ಆದರೆ ಸ್ವೀಕರಿಸಲು ಆಗಲಿಲ್ಲ. ಕರೆ ಸ್ವೀಕರಿಸದಿದ್ದಕ್ಕೆ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ. ಮುಖ್ಯಮಂತ್ರಿಗಳು ಕರೆದಿದ್ದಾರೆ, ನಾಳೆ ಶುಕ್ರವಾರ ಅವರ ಭೇಟಿ ಮಾಡುತ್ತೇನೆ," ಎಂದು ಆನಂದ್ ಸಿಂಗ್ ತಿಳಿಸಿದರು.
"ನಾನು ರಾಜ್ಯದ ಅತಿ ದೊಡ್ಡ ರಾಜಕಾರಣಿಯಲ್ಲ, ನನ್ನ ಶ್ರದ್ಧೆಯಿಂದ, ಪ್ರಾಮಾಣಿಕತೆಯಿಂದ ನನ್ನ ಕ್ಷೇತ್ರದ ಜನರ ಆಶೀರ್ವಾದದಿಂದ ನಾನು ರಾಜಕೀಯದಲ್ಲಿ ಬೆಳೆದಿದ್ದೇನೆ. ನಾನು ಅವರಿಗೆ ನೋವಾಗುವಂತೆ ನಡೆದುಕೊಂಡರೆ ಕ್ಷಮೆಯಾಚಿಸುತ್ತೇನೆ."
"ನಾನು ನೇರವಾಗಿ ಕೇಳುತ್ತೇನೆ, ತಪ್ಪಿದ್ದರೆ ತಿದ್ದಿಕೊಳ್ಳುತ್ತೇನೆ. ಪಕ್ಷಕ್ಕೆ, ನಾಯಕರಿಗೆ ಮುಜುಗರವಾಗುವಂತೆ ನಡೆದುಕೊಂಡಿಲ್ಲ. ಪಕ್ಷ, ಕಾರ್ಯಕರ್ತರ ರಕ್ಷಣೆ ನನಗೆ ಮುಖ್ಯವಾಗಿರುತ್ತದೆ," ಎಂದು ಹೇಳಿದರು.
"ನನಗೆ ಕೆಲವು ನಾಯಕರು ರಕ್ಷಣೆ ನೀಡುತ್ತಾರೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿದ್ದೆ, ಆದರೆ ಯಾರೂ ನನಗೆ ರಕ್ಷಣೆಗೆ ನೀಡುವುದಿಲ್ಲ ಎನ್ನುವುದು ಗೊತ್ತಾಗಿದೆ. ನನಗೆ ವೇಣುಗೋಪಾಲ ಕೃಷ್ಣ ರಕ್ಷಣೆ ಕೊಡುತ್ತಾನೆ."
"ನಮ್ಮ ಹಿರಿಯ ನಾಯಕರು ಮಾಧ್ಯಮಗಳ ಮುಂದೆ ರಾಜಕೀಯ ಬೆಳವಣಿಗೆ ವಿಷಯದ ಕುರಿತು ಪ್ರತಿಕ್ರಿಯೆ ಕೊಡಬೇಡ ಎಂದಿದ್ದಾರೆ. ಹಾಗಾಗಿ ನಾನು ಕೊಡುವುದಿಲ್ಲ."
"ನಮ್ಮ ಪಕ್ಷದ ಮೇಲೆ, ನಾಯಕರ ಮೇಲೆ ನನಗೆ ಈಗಲೂ ವಿಶ್ವಾಸವಿದೆ. ಆದರೆ ಅವರಿಗೆ ನನ್ನ ಮೇಲೆ ವಿಶ್ವಾಸವಿದೆಯೋ, ಇಲ್ಲವೋ ಎನ್ನುವುದು ನನಗೆ ಅವಮಾನವಿದೆ. ನಾನು ಯಾರ ವಿರುದ್ಧವೂ ಟೀಕೆ ಮಾಡುವುದಿಲ್ಲ," ಎಂದರು.
"ಹೊಸಪೇಟೆಯ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದಲೇ ಆರಂಭವಾಗಿತ್ತು, ಇಲ್ಲಿಂದಲೇ ಅಂತ್ಯವಾಗಬಹುದು," ಎಂದು ಹೇಳಿದ ಸಚಿವ ಆನಂದ್ ಸಿಂಗ್, ಬುಧವಾರ ಕೂಡ ಅದೇ ದೇವಸ್ಥಾನದಲ್ಲಿ ಪೂಜೆ ಮಾಡಿ ಬೆಂಗಳೂರಿಗೆ ಹೆಲಿಕಾಪ್ಟರ್ ಏರಿ ಹೊರಟರು. ಆದರೂ ರಾಜೀನಾಮೆ ಗುಟ್ಟು ಬಿಟ್ಟುಕೊಡಲಿಲ್ಲ.
ಸುರಪುರ ಬಿಜೆಪಿ ಶಾಸಕ ರಾಜೂಗೌಡ ಜೊತೆ ಶುಕ್ರವಾರ ಬೆಂಗಳೂರಿಗೆ ಹೋಗಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಕುರಿತು ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Recommended Video
ಸಚಿವ ಖಾತೆ ಬದಲಾವಣೆ ಬೇಡಿಕೆ ಇಟ್ಟಿದ್ದು, ಇದನ್ನು ಮುಖ್ಯಮಂತ್ರಿಗಳು ಈಡೇರಿಸಲಿದ್ದಾರಾ ಕಾದು ನೋಡಬೇಕಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications