ಆಂಧ್ರ ದಂಪತಿಗಳ ವಿವಾಹ ಪೂರ್ವ ಶೂಟಿಂಗ್: ಹಂಪಿಯ ಪಾರಂಪರಿಕ ನಿಯಮ ಉಲ್ಲಂಘನೆ
ಬಳ್ಳಾರಿ, ನವೆಂಬರ್ 24: ಹಂಪಿಯಲ್ಲಿ ನಡೆದ ವಿವಾಹ ಪೂರ್ವ ಫೋಟೋಶೂಟ್ಗೆ ಆಂಧ್ರಪ್ರದೇಶದಿಂದ ದಂಪತಿಗಳು ಬಂದಿದ್ದು, ಪಾರಂಪರಿಕ ತಾಣದ ನಿರ್ಬಂಧಿತ ಸ್ಥಳಗಳಲ್ಲಿ ನೂತನ ದಂಪತಿಗಳಿಗೆ ಹೇಗೆ ಚಿತ್ರೀಕರಣಕ್ಕೆ ಅವಕಾಶ ನೀಡಲಾಯಿತು ಎಂದು ಸ್ಥಳೀಯರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಹಂಪಿಯ ಪ್ರಸಿದ್ಧ ವಿಜಯ ವಿಠ್ಠಲ ದೇವಾಲಯ ಸಂಕೀರ್ಣ ಮತ್ತು ಕಮಲ್ ಮಹಲ್ ಸೇರಿದಂತೆ ಹಂಪಿಯ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಿದ ವಿವಾಹ ಪೂರ್ವ ವಿಡಿಯೋ ಹಾಡು ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ.
ಈ ಎರಡೂ ಸ್ಮಾರಕಗಳು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಿವೆ. ಆದರೂ ಈ ದಂಪತಿಗಳು ಸಪ್ತಸ್ವರ ಮಂಟಪದ ಒಳಗೆ ಓಡಾಡುತ್ತಿರುವುದು ಕಂಡುಬಂದಿದೆ. ಅನೇಕರನ್ನು ಇದು ಕೆರಳಿಸಿದ್ದು, ವಿಡಿಯೋ ತಯಾರಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಹಂಪಿಯಲ್ಲಿ ಚಿತ್ರೀಕರಣ
"ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ನಂತರ ನಾವು ಹಂಪಿಯಲ್ಲಿ ಚಿತ್ರೀಕರಣ ನಡೆಯುತ್ತಿರುವುದರ ಬಗ್ಗೆ ತಿಳಿದುಕೊಂಡಿದ್ದೇವೆ. 2020ರ ಅಕ್ಟೋಬರ್ ಮೊದಲ ವಾರದಲ್ಲಿ ಬೇರೆ ಕಡೆ ಚಿತ್ರೀಕರಣ ಮಾಡಲಾಗಿದೆ.
ಹಂಪಿಯ ಅನೇಕ ತಾಣಗಳು ಪ್ರವಾಸಿಗರಿಗೆ ನಿಷೇಧಿಸಲಾಗಿದ್ದು, ಆದರೆ ಈ ಚಿತ್ರೀಕರಣ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿದೆ. ಈ ಚಿತ್ರೀಕರಣ ಮಾಡಿದವರ ವಿರುದ್ಧ ಪೊಲೀಸ್ ದೂರು ನೀಡಲು ನಾವು ಯೋಜಿಸುತ್ತಿದ್ದೇವೆ' ಎಂದು ಹಂಪಿಯ ಸಾಮಾಜಿಕ ಕಾರ್ಯಕರ್ತ ಹೇಳಿದ್ದಾರೆ.

ನಿಯಮಗಳನ್ನು ಮುರಿಯದಂತೆ ನೋಡಿಕೊಳ್ಳಬೇಕು
"ಹಂಪಿ ಸ್ಮಾರಕಗಳ ಸುತ್ತಲೂ ಡ್ರೋನ್ ಕ್ಯಾಮೆರಾವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ವಿವಾಹ ಪೂರ್ವ ಶೂಟಿಂಗ್ ತಂಡವು ಡ್ರೋನ್ ಅನ್ನು ಬಳಸಿದೆ ಎಂದು ದೂರಿದರು. ಫಿಲ್ಮ್ ಶೂಟ್ ಅಥವಾ ಖಾಸಗಿ ಚಿತ್ರೀಕರಣ ನಡೆಯುವಾಗಲೆಲ್ಲಾ ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ (ಎಎಸ್ಐ) ಮತ್ತು ಹಂಪಿ ವರ್ಲ್ಡ್ ಹೆರಿಟೇಜ್ ಏರಿಯಾ ಮ್ಯಾನೇಜ್ಮೆಂಟ್ ಅಥಾರಿಟಿ (ಎಚ್ಡಬ್ಲ್ಯುಎಚ್ಎಎ) ಅಧಿಕಾರಿಗಳು ಚಲನಚಿತ್ರ ತಯಾರಕರು ಯಾವುದೇ ನಿಯಮಗಳನ್ನು ಮುರಿಯದಂತೆ ನೋಡಿಕೊಳ್ಳಬೇಕು. ಆದರೆ ಈ ಚಿತ್ರೀಕರಣದಲ್ಲಿ ಇದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ' ಎಂದು ಕಾರ್ಯಕರ್ತ ಆರೋಪಿಸಿದರು.

ಭದ್ರತಾ ವೈಫಲ್ಯ
ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಎಚ್ಡಬ್ಲ್ಯುಎಚ್ಎಎ ಹಿರಿಯ ಅಧಿಕಾರಿಗಳು, ಚಿತ್ರೀಕರಣ ದಿನದಂದು ಹಾಜರಿದ್ದ ಸಿಬ್ಬಂದಿಯನ್ನು ವಿಚಾರಿಸುವುದಾಗಿ ಭರವಸೆ ನೀಡಿದ್ದಾರೆ. ವಿಡಿಯೋ ನಮ್ಮ ಗಮನಕ್ಕೆ ಬಂದಿದೆ ಮತ್ತು ಯಾವುದೇ ಭದ್ರತಾ ವೈಫಲ್ಯ ಕಂಡುಬಂದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿ ಹೇಳಿದರು.

ಅಧಿಕಾರಿಗಳೇ ಹೊಣೆ
ವಿಜಯನಗರ ರಾಜವಂಶದ ಕುಡಿ ಕೃಷ್ಣದೇವರಾಯ ಮಾತನಾಡಿ, ವಿವಾಹ ಪೂರ್ವ ಚಿತ್ರೀಕರಣವನ್ನು ತೀವ್ರವಾಗಿ ಟೀಕಿಸಿದರು. "ಇದನ್ನು ಎಂದಿಗೂ ಅನುಮತಿಸಬಾರದು. ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು' ಎಂದು ಹರಿಹಾಯ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications