ಬಿಎಸ್ ವೈ ಕಾಲು ಮುಗಿದಾದರೂ ಸೋಮಶೇಖರ್ ರೆಡ್ಡಿ ಮನೆ ಕಟ್ಟಿಸ್ತಾರಂತೆ
ಬಳ್ಳಾರಿ, ಮಾರ್ಚ್ 05 : ಕಾಂಗ್ರೆಸ್ ನ ಅನಿಲ್ ಲಾಡ್ ಈಗ ಚುನಾವಣೆ ಗಿಮಿಕ್ ಮಾಡುತ್ತಿದ್ದಾರೆ. ಜನರಿಗೆ ಉಡಿ, ಊಟ ಮಾಡಿಸಿದರೆ ಆಯಿತಾ? ಇವೆಲ್ಲ ಚುನಾವಣೆ ಗಿಮಿಕ್ ಎಂದು ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ ಆರೋಪ ಮಾಡಿದ್ದಾರೆ.
ಬಿಜೆಪಿ ಹಮ್ಮಿಕೊಂಡಿದ್ದ 'ಮನೆಮನೆಗೆ' ಕಾರ್ಯಕ್ರಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಉಡಿ ತುಂಬುವ ನೆಪದಲ್ಲಿ ಶಾಸಕ ಅನಿಲ್ ಲಾಡ್ ಊಟ ಮಾಡಿಸಿದ್ದು ಕೂಡ ಅದನ್ನೇ ಸೂಚಿಸುತ್ತದೆ. ಜನರು ಬಿಜೆಪಿಗೆ ಬೆಂಬಲ ಕೊಡುತ್ತಾ ಇದ್ದಾರೆ. ಬಿಜೆಪಿ ಈ ಬಾರಿ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಹಾನಂದ ಓಣಿ, ಕುಂಬಾರ ಓಣಿ, ಗೋಲ್ಡ್ ಸ್ಮಿಥ್ ಸ್ಟ್ರೀಟ್, ಸಣ್ಣ ಮಾರುಕಟ್ಟೆ ಪ್ರದೇಶದಲ್ಲಿ ಸಂಚಾರ ಮಾಡಿದ್ದ ರೆಡ್ಡಿಗೆ ಜನರು ಸಲ್ಲಿಸಿದ್ದು ಕೇವಲ ಸಮಸ್ಯೆಗಳ ಅಹವಾಲುಗಳು ಮಾತ್ರ. 20-25 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕರೆಂಟು ಇಲ್ಲ. ಬೀದಿ ದೀಪಗಳಿಲ್ಲ. ರಸ್ತೆಗಳು ಹಾಳಾಗಿವೆ. ಇಲ್ಲಿ ಅನೇಕರಿಗೆ ಇಂದಿಗೂ ಮನೆಗಳೇ ಇಲ್ಲ. ಬಾಡಿಗೆ ಮನೆಯಲ್ಲಿ ಜನರು ವಾಸಿಸುತ್ತಿದ್ದಾರೆ ಇಂಥವೇ ಸಮಸ್ಯೆಗಳು.

ಕಳೆದ ಬಾರಿ ನಮ್ಮ ಸರಕಾರ ಇದ್ದಾಗ 300 ಎಕರೆ ಭೂಮಿ ಖರೀದಿಸಿ, ಮನೆ ಕಟ್ಟಿಸಿಕೊಡಲು ನಿರ್ಧರಿಸಿದ್ದೆವು. ಶಾಸಕ ಅನಿಲ್ ಲಾಡ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಬಡವರಿಗೆ ಇಂದಿಗೂ ಮನೆಗಳನ್ನು ಕಟ್ಟಿಸಿಕೊಡಲಾಗಲಿಲ್ಲ. ನಮ್ಮ ಸರಕಾರ ಬಂದರೆ ಬಿಎಸ್ ವೈ ಅವರ ಕಾಲು ಮುಗಿದಾದರೂ ಜನರಿಗೆ ಮನೆ ಕಟ್ಟಿಸಿ, ಅವರಿಗೆ ಉಚಿತವಾಗಿ ಕೀಲಿ ಕೈ ಕೊಡುತ್ತೇವೆ ಎಂದರು ಸೋಮಶೇಖರ್ ರೆಡ್ಡಿ.

ಬಿಜೆಪಿ ಸರಕಾರದಲ್ಲಿ ರೂಪುಗೊಂಡಿದ್ದ ಯೋಜನೆಗಳು ಮತ್ತು ಅನುದಾನ ಬಳಕೆ ಮಾಡಿಕೊಳ್ಳಲು ಕಾಂಗ್ರೆಸ್ ನವರಿಂದ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೋತ್ಕರ್, ಎಸ್.ಮಲ್ಲನಗೌಡ, ಮಾಜಿ ಸದಸ್ಯ ಸಿದ್ದನಗೌಡ, ಬಿಜೆಪಿ ಮುಖಂಡರಾದ ವೀರಶೇಖರರೆಡ್ಡಿ, ಕೃಷ್ಣಾ ರೆಡ್ಡಿ, ಪ್ರಸಾದ್ ರೆಡ್ಡಿ ಕೊಳಗಲ್, ವಸಂತ್ ಬೆಲ್ಲಂ, ಪದ್ಮಾವತಿ ರೆಡ್ಡಿ, ಸುಮಾ ರೆಡ್ಡಿ, ಶೈಲಜಾ ಇದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications