'ದಯವಿಟ್ಟು ಕ್ಷಮಿಸಿ, ಕೂಡ್ಲಿಗಿಗೆ ಬರುವುದು ತಡವಾಯಿತು'!
ಬಳ್ಳಾರಿ, ಜೂನ್ 09 : ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನುಪಮಾ ಶೆಣೈ ಪತ್ತೆಯಾಗಿದ್ದಾರೆ. ಗುರುವಾರ ಮುಂಜಾನೆ ಅವರು ಕೂಡ್ಲಿಗೆಗೆ ಆಗಮಿಸಿದರು. ಸಂಜೆ ಅವರು ಬಳ್ಳಾರಿ ಎಸ್ಪಿ ಆರ್.ಚೇತನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಜೂನ್ 4ರ ಶನಿವಾರ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿದ್ದರು. ನಂತರ ಅವರು ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಪೊಲೀಸ್ ಮಹಾನಿರ್ದೇಶಕರ ಸೂಚನೆಯಂತೆ ಅವರನ್ನು ಹುಡುಕಲು ಬುಧವಾರ ಪೊಲೀಸರ ತಂಡ ರಚನೆ ಮಾಡಲಾಗಿತ್ತು. [ಅನುಪಮಾ ವರ್ಸಸ್ ಪರಮೇಶ್ವರ್ : ಇದುವರೆಗಿನ ಕಥೆಗಳು]

ಬುಧವಾರ ರಾತ್ರಿ ಭಟ್ಕಳದಿಂದ ಹೊರಟ ಅನುಪಮಾ ಶೆಣೈ ಅವರು, ಹುಬ್ಬಳ್ಳಿ ಮೂಲಕ ಗುರುವಾರ ಮುಂಜಾನೆ 4.30ರ ಸುಮಾರಿಗೆ ಕೂಡ್ಲಿಗಿಯಲ್ಲಿರುವ ಪೊಲೀಸ್ ಕ್ವಾಟರ್ಸ್ಗೆ ಆಗಮಿಸಿದರು. ಸಂಜೆ ಅವರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ರಾಜೀನಾಮೆ ಪ್ರಕರಣದ ಬಗ್ಗೆ ವಿವರಣೆ ನೀಡುವ ಸಾಧ್ಯತೆ ಇದೆ. ['ಅನುಪಮಾ ಫೇಸ್ ಬುಕ್ ಖಾತೆ ಹ್ಯಾಕ್ ಆಗಿರಬಹುದು']
ಬಳ್ಳಾರಿಗೆ ಬಂದಿರುವ ಕುರಿತು ಅನುಪಮಾ ಫೇಸ್ಬುಕ್ ಸ್ಟೇಟಸ್ 'ಮಾಧ್ಯಮ ಮಿತ್ರರೇ, ದಯವಿಟ್ಟು ಕ್ಷಮಿಸಿ. ತಡವಾಯಿತು ಕೂಡ್ಲಿಗಿಗೆ ಬರುವುದು. ಏನು ಮಾಡುವುದು ಹೇಳಿ, ಇಲಾಖೆಗೆ ಉತ್ತರಕುಮಾರರು ಬೇಕಂತೆ. ಭಟ್ಕಳದಿಂದ ಬಳ್ಳಾರಿಯ ವರೆಗೆ ಫುಲ್ Escort. ಆದ್ರೆ ಗಾಡಿ accelerator ಒತ್ತಿದ್ರೆ 60ಕ್ಕಿಂತ ವೇಗವಿಲ್ಲ. ಒಂದು ಗಾಡಿಯ ಆಕ್ಸೆಲ್ಲೂ ಕಟ್ಟಾಯಿತು'. ['ಕೊಲೆ ಬೆದರಿಕೆ ಹಾಕ್ತೀರಾ? ದೆವ್ವವಾಗಿ ಬಂದು ಕಾಡ್ತೀನಿ']

ಸ್ಟೇಟಸ್ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ : ಕೂಡ್ಲಿಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅನುಪಮಾ ಶೆಣೈ ಅವರು ಫೇಸ್ ಬುಕ್ನಲ್ಲಿ ಸರಣಿ ಸ್ಟೇಟಸ್ಗಳನ್ನು ಹಾಕುತ್ತಿರುವುದು ಯಾರು? ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿಲ್ಲ. 'ನನಗೆ ಫೇಸ್ಬುಕ್ ಎಂಬುದೆಲ್ಲಾ ಅಷ್ಟು ಚೆನ್ನಾಗಿ ಗೊತ್ತಿಲ್ಲ. ಹ್ಯಾಕ್ ಆಗಿರಲೂಬಹುದು' ಎಂದು ನಕ್ಕು ಉತ್ತರ ಕೊಟ್ಟರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications