ಸರ್ಕಾರಿ ಶಾಲೆಗಳಲ್ಲಿ ಕರಾಟೆ ತರಬೇತಿ ಪ್ರಾರಂಭಿಸಲು ಶಿಕ್ಷಣ ಸಚಿವರಿಗೆ ಮನವಿ
ಬಳ್ಳಾರಿ, ಜನವರಿ 22: ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರಾಟೆ ತರಬೇತಿ ಆರಂಭಿಸಬೇಕೆಂದು ಹಿರಿಯ ಕರಾಟೆ ತರಬೇತುದಾರರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಇಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಕರಾಟೆ ಹಿರಿಯ ತರಬೇತುದಾರರ ನಿಯೋಗ, ಪ್ರೌಢ ಶಾಲೆಗಳ ವಿದ್ಯಾರ್ಥಿನಿಯರಲ್ಲಿ ಆತ್ಮರಕ್ಷಣೆ ಹೆಚ್ಚಿಸುವ ಸಲುವಾಗಿ ಈ ಕರಾಟೆ ತರಬೇತಿ ಮುಖ್ಯವಾಗಿದೆ ಎಂದರು.
ಆದ್ದರಿಂದ ಕರಾಟೆ ತರಬೇತಿ ಪುನರಾರಂಭಿಸಬೇಕೆಂದು ಸಚಿವರಲ್ಲಿ ಕೋರಿದ್ದಾರೆ. ಹಿರಿಯ ತರಬೇತುದಾರರ ಮನವಿಯನ್ನು ಆಲಿಸಿದ ಸಚಿವ ಸುರೇಶ್ ಕುಮಾರ್, ಕರಾಟೆ ತರಬೇತಿ ಪುನರಾರಂಭಿಸಲು ಚಿಂತನೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಳ್ಳಾರಿಯ ಹಿರಿಯ ತರಬೇತುದಾರರಾದ ಕಟ್ಟೇಸ್ವಾಮಿ, ಸುಭಾಷ್ ಚಂದ್ರ, ಕೊಪ್ಪಳದ ಹಿರಿಯ ತರಬೇತುದಾರ ಮೌನೇಶ ವಡ್ಡಟಿ, ವಿಜಯಪುರದ ಹಿರಿಯ ತರಬೇತುದಾರ ಶಿವಕುಮಾರ ಶಾರದಳ್ಳಿ ಸೇರಿದಂತೆ ಅನೇಕರು ಸಚಿವರಿಗೆ ಈ ಮನವಿ ಮಾಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications